Categories: Latest

ಸರ್ಕಾರಿ ನೌಕರರಿಗೆ ಹೊಸ ನಿಯಮ: ಮುಂಬಡ್ತಿಗೆ ತರಬೇತಿ ಕಡ್ಡಾಯ

ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ ಪಡೆಯಬೇಕಾದರೆ ನಿಗದಿತ ತರಬೇತಿಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಲಿದೆ. ಈ ನಿಯಮಗಳನ್ನು “ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಮುಂಬಡ್ತಿಗಾಗಿ ತರಬೇತಿ ಕಡ್ಡಾಯ) ನಿಯಮಗಳು, 2026” ಎಂದು ಹೆಸರಿಸಲಾಗಿದೆ.

ಈ ನಿಯಮವು ಗ್ರೂಪ್-ಎ, ಗ್ರೂಪ್-ಬಿ ಹಾಗೂ ಗ್ರೂಪ್-ಸಿ ಹುದ್ದೆಗಳಲ್ಲಿರುವ ಎಲ್ಲಾ ಸರ್ಕಾರಿ ನೌಕರರಿಗೆ ಅನ್ವಯಿಸುತ್ತದೆ. ಆದರೆ ಗ್ರೂಪ್-ಸಿ ವಿಭಾಗದ ಚಾಲಕರು ಹಾಗೂ ಗ್ರೂಪ್-ಡಿ ನೌಕರರಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಅಧಿಸೂಚನೆಯ ಪ್ರಕಾರ, ತರಬೇತಿಯನ್ನು ಆನ್‌ಲೈನ್, ಆಫ್‌ಲೈನ್ ಅಥವಾ ಹೈಬ್ರಿಡ್ ಮಾದರಿಯಲ್ಲಿ ನೀಡಲಾಗುತ್ತದೆ. ಮುಂಬಡ್ತಿ ಪಡೆಯಲು ಈ ತರಬೇತಿಯನ್ನು ಪೂರ್ಣಗೊಳಿಸುವುದು ಹೆಚ್ಚುವರಿ ಅರ್ಹತೆಯಾಗಿ ಪರಿಗಣಿಸಲಾಗುತ್ತದೆ. ತರಬೇತಿ ಪ್ರಕಟವಾದ ದಿನಾಂಕದಿಂದ 6 ತಿಂಗಳೊಳಗೆ ಅದನ್ನು ಪೂರ್ಣಗೊಳಿಸದಿದ್ದರೆ, ನೌಕರರು ಮುಂಬಡ್ತಿಗೆ ಅರ್ಹರಾಗುವುದಿಲ್ಲ. ಆದರೆ ನಿವೃತ್ತಿಗೆ ಇನ್ನೂ ಎರಡು ವರ್ಷ ಮಾತ್ರ ಬಾಕಿ ಇರುವ ನೌಕರರಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ.

ಇದಲ್ಲದೆ, ಬಡ್ತಿಗೆ ಮುನ್ನ ಕನಿಷ್ಠ 10 ದಿನಗಳ ಆಫ್‌ಲೈನ್ ತರಬೇತಿಯನ್ನು ಪಡೆಯುವುದು ಕಡ್ಡಾಯವಾಗಿದ್ದು, ಜೊತೆಗೆ ಆನ್‌ಲೈನ್ ತರಬೇತಿ ಕೋರ್ಸ್‌ಗಳನ್ನು ಪೂರ್ಣಗೊಳಿಸಬೇಕಾಗುತ್ತದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚಿಸಿದಂತೆ, ನೌಕರರು ಪ್ರತಿ ವರ್ಷ ನಿಗದಿತ ಅಂಕಗಳನ್ನು ಆನ್‌ಲೈನ್ ವೇದಿಕೆಯಲ್ಲಿ ಗಳಿಸಬೇಕು.

ಪ್ರತಿ ಇಲಾಖೆಯ ಮುಖ್ಯಸ್ಥರು ತರಬೇತಿ ಕೋರ್ಸ್‌ಗಳನ್ನು ರೂಪಿಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳಲಿದ್ದು, ಅಗತ್ಯವಿದ್ದರೆ ಸಲಹಾ ಸಮಿತಿಗಳನ್ನು ರಚಿಸಿ ತರಬೇತಿ ವ್ಯವಸ್ಥೆ ಮಾಡಲಿದ್ದಾರೆ. ಜೊತೆಗೆ, ಇಂಟಿಗ್ರೇಟೆಡ್ ಗವರ್‍ನ್ಮೆಂಟ್ ಆನ್‌ಲೈನ್ ಟ್ರೈನಿಂಗ್ (iGOT) ವೇದಿಕೆಯ ಮೂಲಕ ನೌಕರರು ತರಬೇತಿಗೆ ಅರ್ಜಿ ಸಲ್ಲಿಸಬೇಕು.

ಈ ಹೊಸ ನಿಯಮದಿಂದ ಸರ್ಕಾರಿ ನೌಕರರ ಕೌಶಲ್ಯಾಭಿವೃದ್ಧಿ ಹೆಚ್ಚುವ ನಿರೀಕ್ಷೆಯಿದ್ದು, ಮುಂಬಡ್ತಿಯಲ್ಲಿ ಪಾರದರ್ಶಕತೆ ತರಲು ಸಹಾಯವಾಗಲಿದೆ.

ಭ್ರಷ್ಟರ ಬೇಟೆ

Recent Posts

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲೇ ಹೆಚ್ಚಿನ ಕೊರತೆ

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…

2 hours ago

‘ಧುರಂಧರ್’ ಸಿನಿಮಾ ಪ್ರಭಾವವೇ? ಪಾಕಿಸ್ತಾನದಲ್ಲಿ ಗುಪ್ತಚರ ಶೋಧದ ವಿಡಿಯೋ ವೈರಲ್

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್‌ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…

11 hours ago

2 ಮದುವೆಯಾಗಿದ್ದರು ಅಕ್ರಮ ಸಂಬಂಧ ಹೊಂದಿದ್ದ: ಮಾಜಿ ಗ್ರಾಮಾಧ್ಯಕ್ಷನನ್ನು ಕೊಂದ ಮಹಿಳೆ-ಸಹೋದರ

ಉತ್ತರ ಪ್ರದೇಶದ ಸುಮೇರ್ಪುರ್ ಗ್ರಾಮದ ಮಾಜಿ ಅಧ್ಯಕ್ಷ ಮುಸ್ತಾಕ್ ಗುಲ್ಶನ್ ಅಲಿಯಾಸ್ ಮುನ್ನಾ, ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಪ್ರಕರಣ…

11 hours ago

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

21 hours ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

1 day ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

1 day ago