Categories: Latest

ಸರ್ಕಾರಿ ನೌಕರರಿಗೆ ಹೊಸ ನಿಯಮ: ಮುಂಬಡ್ತಿಗೆ ತರಬೇತಿ ಕಡ್ಡಾಯ

ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ ಪಡೆಯಬೇಕಾದರೆ ನಿಗದಿತ ತರಬೇತಿಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಲಿದೆ. ಈ ನಿಯಮಗಳನ್ನು “ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಮುಂಬಡ್ತಿಗಾಗಿ ತರಬೇತಿ ಕಡ್ಡಾಯ) ನಿಯಮಗಳು, 2026” ಎಂದು ಹೆಸರಿಸಲಾಗಿದೆ.

ಈ ನಿಯಮವು ಗ್ರೂಪ್-ಎ, ಗ್ರೂಪ್-ಬಿ ಹಾಗೂ ಗ್ರೂಪ್-ಸಿ ಹುದ್ದೆಗಳಲ್ಲಿರುವ ಎಲ್ಲಾ ಸರ್ಕಾರಿ ನೌಕರರಿಗೆ ಅನ್ವಯಿಸುತ್ತದೆ. ಆದರೆ ಗ್ರೂಪ್-ಸಿ ವಿಭಾಗದ ಚಾಲಕರು ಹಾಗೂ ಗ್ರೂಪ್-ಡಿ ನೌಕರರಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಅಧಿಸೂಚನೆಯ ಪ್ರಕಾರ, ತರಬೇತಿಯನ್ನು ಆನ್‌ಲೈನ್, ಆಫ್‌ಲೈನ್ ಅಥವಾ ಹೈಬ್ರಿಡ್ ಮಾದರಿಯಲ್ಲಿ ನೀಡಲಾಗುತ್ತದೆ. ಮುಂಬಡ್ತಿ ಪಡೆಯಲು ಈ ತರಬೇತಿಯನ್ನು ಪೂರ್ಣಗೊಳಿಸುವುದು ಹೆಚ್ಚುವರಿ ಅರ್ಹತೆಯಾಗಿ ಪರಿಗಣಿಸಲಾಗುತ್ತದೆ. ತರಬೇತಿ ಪ್ರಕಟವಾದ ದಿನಾಂಕದಿಂದ 6 ತಿಂಗಳೊಳಗೆ ಅದನ್ನು ಪೂರ್ಣಗೊಳಿಸದಿದ್ದರೆ, ನೌಕರರು ಮುಂಬಡ್ತಿಗೆ ಅರ್ಹರಾಗುವುದಿಲ್ಲ. ಆದರೆ ನಿವೃತ್ತಿಗೆ ಇನ್ನೂ ಎರಡು ವರ್ಷ ಮಾತ್ರ ಬಾಕಿ ಇರುವ ನೌಕರರಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ.

ಇದಲ್ಲದೆ, ಬಡ್ತಿಗೆ ಮುನ್ನ ಕನಿಷ್ಠ 10 ದಿನಗಳ ಆಫ್‌ಲೈನ್ ತರಬೇತಿಯನ್ನು ಪಡೆಯುವುದು ಕಡ್ಡಾಯವಾಗಿದ್ದು, ಜೊತೆಗೆ ಆನ್‌ಲೈನ್ ತರಬೇತಿ ಕೋರ್ಸ್‌ಗಳನ್ನು ಪೂರ್ಣಗೊಳಿಸಬೇಕಾಗುತ್ತದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚಿಸಿದಂತೆ, ನೌಕರರು ಪ್ರತಿ ವರ್ಷ ನಿಗದಿತ ಅಂಕಗಳನ್ನು ಆನ್‌ಲೈನ್ ವೇದಿಕೆಯಲ್ಲಿ ಗಳಿಸಬೇಕು.

ಪ್ರತಿ ಇಲಾಖೆಯ ಮುಖ್ಯಸ್ಥರು ತರಬೇತಿ ಕೋರ್ಸ್‌ಗಳನ್ನು ರೂಪಿಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳಲಿದ್ದು, ಅಗತ್ಯವಿದ್ದರೆ ಸಲಹಾ ಸಮಿತಿಗಳನ್ನು ರಚಿಸಿ ತರಬೇತಿ ವ್ಯವಸ್ಥೆ ಮಾಡಲಿದ್ದಾರೆ. ಜೊತೆಗೆ, ಇಂಟಿಗ್ರೇಟೆಡ್ ಗವರ್‍ನ್ಮೆಂಟ್ ಆನ್‌ಲೈನ್ ಟ್ರೈನಿಂಗ್ (iGOT) ವೇದಿಕೆಯ ಮೂಲಕ ನೌಕರರು ತರಬೇತಿಗೆ ಅರ್ಜಿ ಸಲ್ಲಿಸಬೇಕು.

ಈ ಹೊಸ ನಿಯಮದಿಂದ ಸರ್ಕಾರಿ ನೌಕರರ ಕೌಶಲ್ಯಾಭಿವೃದ್ಧಿ ಹೆಚ್ಚುವ ನಿರೀಕ್ಷೆಯಿದ್ದು, ಮುಂಬಡ್ತಿಯಲ್ಲಿ ಪಾರದರ್ಶಕತೆ ತರಲು ಸಹಾಯವಾಗಲಿದೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

13 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

20 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

20 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago