Categories: Latest

ಸರ್ಕಾರಿ ನೌಕರರಿಗೆ ಹೊಸ ನಿಯಮ: ಮುಂಬಡ್ತಿಗೆ ತರಬೇತಿ ಕಡ್ಡಾಯ

ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ ಪಡೆಯಬೇಕಾದರೆ ನಿಗದಿತ ತರಬೇತಿಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಲಿದೆ. ಈ ನಿಯಮಗಳನ್ನು “ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಮುಂಬಡ್ತಿಗಾಗಿ ತರಬೇತಿ ಕಡ್ಡಾಯ) ನಿಯಮಗಳು, 2026” ಎಂದು ಹೆಸರಿಸಲಾಗಿದೆ.

ಈ ನಿಯಮವು ಗ್ರೂಪ್-ಎ, ಗ್ರೂಪ್-ಬಿ ಹಾಗೂ ಗ್ರೂಪ್-ಸಿ ಹುದ್ದೆಗಳಲ್ಲಿರುವ ಎಲ್ಲಾ ಸರ್ಕಾರಿ ನೌಕರರಿಗೆ ಅನ್ವಯಿಸುತ್ತದೆ. ಆದರೆ ಗ್ರೂಪ್-ಸಿ ವಿಭಾಗದ ಚಾಲಕರು ಹಾಗೂ ಗ್ರೂಪ್-ಡಿ ನೌಕರರಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಅಧಿಸೂಚನೆಯ ಪ್ರಕಾರ, ತರಬೇತಿಯನ್ನು ಆನ್‌ಲೈನ್, ಆಫ್‌ಲೈನ್ ಅಥವಾ ಹೈಬ್ರಿಡ್ ಮಾದರಿಯಲ್ಲಿ ನೀಡಲಾಗುತ್ತದೆ. ಮುಂಬಡ್ತಿ ಪಡೆಯಲು ಈ ತರಬೇತಿಯನ್ನು ಪೂರ್ಣಗೊಳಿಸುವುದು ಹೆಚ್ಚುವರಿ ಅರ್ಹತೆಯಾಗಿ ಪರಿಗಣಿಸಲಾಗುತ್ತದೆ. ತರಬೇತಿ ಪ್ರಕಟವಾದ ದಿನಾಂಕದಿಂದ 6 ತಿಂಗಳೊಳಗೆ ಅದನ್ನು ಪೂರ್ಣಗೊಳಿಸದಿದ್ದರೆ, ನೌಕರರು ಮುಂಬಡ್ತಿಗೆ ಅರ್ಹರಾಗುವುದಿಲ್ಲ. ಆದರೆ ನಿವೃತ್ತಿಗೆ ಇನ್ನೂ ಎರಡು ವರ್ಷ ಮಾತ್ರ ಬಾಕಿ ಇರುವ ನೌಕರರಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ.

ಇದಲ್ಲದೆ, ಬಡ್ತಿಗೆ ಮುನ್ನ ಕನಿಷ್ಠ 10 ದಿನಗಳ ಆಫ್‌ಲೈನ್ ತರಬೇತಿಯನ್ನು ಪಡೆಯುವುದು ಕಡ್ಡಾಯವಾಗಿದ್ದು, ಜೊತೆಗೆ ಆನ್‌ಲೈನ್ ತರಬೇತಿ ಕೋರ್ಸ್‌ಗಳನ್ನು ಪೂರ್ಣಗೊಳಿಸಬೇಕಾಗುತ್ತದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚಿಸಿದಂತೆ, ನೌಕರರು ಪ್ರತಿ ವರ್ಷ ನಿಗದಿತ ಅಂಕಗಳನ್ನು ಆನ್‌ಲೈನ್ ವೇದಿಕೆಯಲ್ಲಿ ಗಳಿಸಬೇಕು.

ಪ್ರತಿ ಇಲಾಖೆಯ ಮುಖ್ಯಸ್ಥರು ತರಬೇತಿ ಕೋರ್ಸ್‌ಗಳನ್ನು ರೂಪಿಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳಲಿದ್ದು, ಅಗತ್ಯವಿದ್ದರೆ ಸಲಹಾ ಸಮಿತಿಗಳನ್ನು ರಚಿಸಿ ತರಬೇತಿ ವ್ಯವಸ್ಥೆ ಮಾಡಲಿದ್ದಾರೆ. ಜೊತೆಗೆ, ಇಂಟಿಗ್ರೇಟೆಡ್ ಗವರ್‍ನ್ಮೆಂಟ್ ಆನ್‌ಲೈನ್ ಟ್ರೈನಿಂಗ್ (iGOT) ವೇದಿಕೆಯ ಮೂಲಕ ನೌಕರರು ತರಬೇತಿಗೆ ಅರ್ಜಿ ಸಲ್ಲಿಸಬೇಕು.

ಈ ಹೊಸ ನಿಯಮದಿಂದ ಸರ್ಕಾರಿ ನೌಕರರ ಕೌಶಲ್ಯಾಭಿವೃದ್ಧಿ ಹೆಚ್ಚುವ ನಿರೀಕ್ಷೆಯಿದ್ದು, ಮುಂಬಡ್ತಿಯಲ್ಲಿ ಪಾರದರ್ಶಕತೆ ತರಲು ಸಹಾಯವಾಗಲಿದೆ.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

14 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

14 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

14 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

14 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago