Latest

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ನವ ತಿರುವು: ಮುಸ್ಲಿಂ ಯುವಕನ ಕಿರುಕುಳದಿಂದ ನೇಣಿಗೆ ಶರಣಾದ ಯುವತಿ.!

ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಬಿಸಿಎ ಓದುತ್ತಿದ್ದ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇದೀಗ ಸ್ಪೋಟಕ ತಿರುವು ಪಡೆದಿದೆ. ತಡವಾಗಿ ಬೆಳಕಿಗೆ ಬಂದ ಈ ಘಟನೆಗೆ ನವೀನ್ ಎಂಬ ಯುವಕನ ಪ್ರೇಮ ಸಂಬಂಧ ಹಾಗೂ ಮತ್ತೊಬ್ಬ ವ್ಯಕ್ತಿಯ ಕಿರುಕುಳವೇ ಕಾರಣ ಎನ್ನಲಾಗಿದೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದ ಶಿಲ್ಪಾ (22) ಎಂಬವರು ಸಾವಿಗೀಡಾದ ವಿದ್ಯಾರ್ಥಿನಿ. ಬೆಳಗಾವಿಯ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಈಕೆ, ಶಿಗ್ಗಾವಿಯ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಮೂರು ವರ್ಷಗಳ ಕಾಲ ಇವರಿಬ್ಬರ ನಡುವೆ ಪ್ರೇಮಸಂಬಂಧ ಮುಂದುವರಿದಿತ್ತು.

ಆದರೆ ಇತ್ತೀಚೆಗೆ ಶಿಲ್ಪಾಗೆ ಅನಾಮಿಕ ಕರೆಗಳು ಬರುತ್ತಿದ್ದು, ಕಿರುಕುಳಕ್ಕೆ ಒಳಗಾಗಿದ್ದಳು ಎಂಬ ಆಕ್ಷೇಪಣೆ ಕೇಳಿಬಂದಿದೆ. ಈ ಹಿಂದಿನ ಪ್ರಾಥಮಿಕ ತನಿಖೆಯಲ್ಲಿ, ರಂಜಾನ್ ನದಾಫ್ ಎಂಬ ವ್ಯಕ್ತಿ ಶಿಲ್ಪಾಗೆ ನಿರಂತರವಾಗಿ ಕರೆ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಯುವತಿಯ ಮೇಲೆ ನಡೆದ ಮಾನಸಿಕ ಹಿಂಸೆ ಹಾಗೂ ದಬ್ಬಾಳಿಕೆಯಿಂದಾಗಿ, ಕಳೆದ ಒಂದು ವಾರದ ಹಿಂದೆ ಆತ್ಮಹತ್ಯೆಗೆ ಶರಣಾದ ಶಿಲ್ಪಾ, ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡಿದ್ದಳು.

ಈ ಘಟನೆ ಈಗ ತಡವಾಗಿ ಸಾರ್ವಜನಿಕ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಗಂಭೀರ ತಿರುವು ಸಿಕ್ಕಿದೆ. ಪ್ರಕರಣ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಎಲ್ಲಾ ಆಯಾಮಗಳಿಂದ ವಿಚಾರಣೆ ನಡೆಯುತ್ತಿದೆ.

ಸಂಬಂಧಿತ ವ್ಯಕ್ತಿಗಳ ವಿಚಾರಣೆ, ಮೊಬೈಲ್ ಕಾಲ್ ಡೇಟಾ ಪರಿಶೀಲನೆ ಮತ್ತು ಹಾಸ್ಟೆಲ್ ಸಹವಾಸಿಗಳ ಹೇಳಿಕೆಗಳು ಪ್ರಕರಣದ ಮೌಲ್ಯಮಾಪನಕ್ಕೆ ಸಹಕಾರಿಯಾಗಲಿವೆ.

nazeer ahamad

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago