Latest

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ನವ ತಿರುವು: ಮುಸ್ಲಿಂ ಯುವಕನ ಕಿರುಕುಳದಿಂದ ನೇಣಿಗೆ ಶರಣಾದ ಯುವತಿ.!

ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಬಿಸಿಎ ಓದುತ್ತಿದ್ದ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇದೀಗ ಸ್ಪೋಟಕ ತಿರುವು ಪಡೆದಿದೆ. ತಡವಾಗಿ ಬೆಳಕಿಗೆ ಬಂದ ಈ ಘಟನೆಗೆ ನವೀನ್ ಎಂಬ ಯುವಕನ ಪ್ರೇಮ ಸಂಬಂಧ ಹಾಗೂ ಮತ್ತೊಬ್ಬ ವ್ಯಕ್ತಿಯ ಕಿರುಕುಳವೇ ಕಾರಣ ಎನ್ನಲಾಗಿದೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದ ಶಿಲ್ಪಾ (22) ಎಂಬವರು ಸಾವಿಗೀಡಾದ ವಿದ್ಯಾರ್ಥಿನಿ. ಬೆಳಗಾವಿಯ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಈಕೆ, ಶಿಗ್ಗಾವಿಯ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಮೂರು ವರ್ಷಗಳ ಕಾಲ ಇವರಿಬ್ಬರ ನಡುವೆ ಪ್ರೇಮಸಂಬಂಧ ಮುಂದುವರಿದಿತ್ತು.

ಆದರೆ ಇತ್ತೀಚೆಗೆ ಶಿಲ್ಪಾಗೆ ಅನಾಮಿಕ ಕರೆಗಳು ಬರುತ್ತಿದ್ದು, ಕಿರುಕುಳಕ್ಕೆ ಒಳಗಾಗಿದ್ದಳು ಎಂಬ ಆಕ್ಷೇಪಣೆ ಕೇಳಿಬಂದಿದೆ. ಈ ಹಿಂದಿನ ಪ್ರಾಥಮಿಕ ತನಿಖೆಯಲ್ಲಿ, ರಂಜಾನ್ ನದಾಫ್ ಎಂಬ ವ್ಯಕ್ತಿ ಶಿಲ್ಪಾಗೆ ನಿರಂತರವಾಗಿ ಕರೆ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಯುವತಿಯ ಮೇಲೆ ನಡೆದ ಮಾನಸಿಕ ಹಿಂಸೆ ಹಾಗೂ ದಬ್ಬಾಳಿಕೆಯಿಂದಾಗಿ, ಕಳೆದ ಒಂದು ವಾರದ ಹಿಂದೆ ಆತ್ಮಹತ್ಯೆಗೆ ಶರಣಾದ ಶಿಲ್ಪಾ, ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡಿದ್ದಳು.

ಈ ಘಟನೆ ಈಗ ತಡವಾಗಿ ಸಾರ್ವಜನಿಕ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಗಂಭೀರ ತಿರುವು ಸಿಕ್ಕಿದೆ. ಪ್ರಕರಣ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಎಲ್ಲಾ ಆಯಾಮಗಳಿಂದ ವಿಚಾರಣೆ ನಡೆಯುತ್ತಿದೆ.

ಸಂಬಂಧಿತ ವ್ಯಕ್ತಿಗಳ ವಿಚಾರಣೆ, ಮೊಬೈಲ್ ಕಾಲ್ ಡೇಟಾ ಪರಿಶೀಲನೆ ಮತ್ತು ಹಾಸ್ಟೆಲ್ ಸಹವಾಸಿಗಳ ಹೇಳಿಕೆಗಳು ಪ್ರಕರಣದ ಮೌಲ್ಯಮಾಪನಕ್ಕೆ ಸಹಕಾರಿಯಾಗಲಿವೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

14 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

20 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

20 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago