Latest

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಹೊಸ ತಿರುವು: ಸಾಕ್ಷಿದಾರನ ಬಾಯ್ಬಿಟ್ಟ ಸ್ಪೋಟಕ ಮಾಹಿತಿ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನೆತ್ರಾವತಿ ನದಿ ದಡದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂಬ ಹೇಳಿಕೆ ದೇಶ-ರಾಜ್ಯ ಮಟ್ಟದಲ್ಲಿ ದೊಡ್ಡ ಕುತೂಹಲ, ಚರ್ಚೆಗೆ ಕಾರಣವಾಗಿದ್ದ ‘ಬುರುಡೆ ಪ್ರಕರಣ’ ಇದೀಗ ತೀವ್ರ ತಿರುವು ಪಡೆದುಕೊಂಡಿದೆ.

ಕಳೆದ 15 ದಿನಗಳಿಂದ ನಡೆದ ಶೋಧ ಕಾರ್ಯಾಚರಣೆಯ ಬಳಿಕ, ಸಾಕ್ಷಿದಾರನ ವಿಚಾರಣೆಯ ವೇಳೆ ಆಘಾತಕಾರಿ ಸತ್ಯಗಳು ಹೊರಬಿದ್ದಿವೆ ಎಂದು ಮೂಲಗಳು ತಿಳಿಸಿವೆ.

ಶೋಧ ಕಾರ್ಯಕ್ಕೆ ವಿರಾಮ

ಸಾಕ್ಷಿದಾರ ತೋರಿಸಿದ್ದ 17 ಜಾಗಗಳಲ್ಲಿ ಕೇವಲ 2 ಜಾಗಗಳಲ್ಲಿ ಮಾತ್ರ ಮಾನವ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ (SIT) ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ. ಬಳಿಕ, ಕಳೆದ ಎರಡು ದಿನಗಳಿಂದ ಸಾಕ್ಷಿದಾರನನ್ನು ತೀವ್ರ ವಿಚಾರಣೆ ನಡೆಸಲಾಗಿದೆ.

ಸಾಕ್ಷಿದಾರನ ಹೊಸ ಹೇಳಿಕೆ

ವಿಚಾರಣೆ ವೇಳೆ ಆತ ಹೀಗೆ ಹೇಳಿದ್ದಾನೆ ಎಂದು ವರದಿಯಾಗಿದೆ:

“2014ರ ನಂತರ ನಾನು ತಮಿಳುನಾಡಿನಲ್ಲಿ ವಾಸಿಸುತ್ತಿದ್ದೆ. 2023ರಲ್ಲಿ ಒಂದು ಗುಂಪು ನನ್ನನ್ನು ಸಂಪರ್ಕಿಸಿ, ಧರ್ಮಸ್ಥಳದಲ್ಲಿ ಶವಗಳನ್ನು ಹೂತಿರುವ ಬಗ್ಗೆ ಸುಳ್ಳು ಹೇಳಿಕೆ ನೀಡುವಂತೆ ಒತ್ತಾಯಿಸಿತು.”

“ನಾನು ಕಾನೂನು ಪ್ರಕಾರವೇ ಶವಗಳನ್ನು ಹೂತಿದ್ದೇನೆ ಎಂದು ಹೇಳಿದ್ದರೂ, ಆ ಗುಂಪು ನನ್ನ ಮೇಲೆ ಒತ್ತಡ ಹೇರಿತು.”

“2023ರ ಡಿಸೆಂಬರ್‌ನಲ್ಲಿ ಆ ಗುಂಪು ನನ್ನನ್ನು ತಮಿಳುನಾಡಿನಿಂದ ಕರೆದುಕೊಂಡು ಬಂದು, ಪೊಲೀಸರ ಹಾಗೂ ನ್ಯಾಯಾಲಯದ ಮುಂದೆ ನಿರ್ದಿಷ್ಟ ಹೇಳಿಕೆ ನೀಡುವಂತೆ ಒತ್ತಾಯಿಸಿತು.”

ಸುಜಾತ ಭಟ್ ಪಾತ್ರ

ಸಾಕ್ಷಿದಾರನ ಪ್ರಕಾರ, ದೂರು ನೀಡಿದ ಮಹಿಳೆ ಸುಜಾತ ಭಟ್ ತಾನಗೆ ಧೈರ್ಯ ತುಂಬಿದ ಕಾರಣವೇ ಪೊಲೀಸರ ಹಾಗೂ ನ್ಯಾಯಾಲಯದ ಮುಂದೆ ಬಂದು ನಿಜ ಹೇಳಲು ಸಾಧ್ಯವಾಯಿತು. “ಅವರೆ ನನಗೆ ಧೈರ್ಯ ನೀಡದಿದ್ದರೆ, ನಾನು ಬರುವುದೇ ಆಗುತ್ತಿರಲಿಲ್ಲ,” ಎಂದು ಆತ ಬಾಯ್ಬಿಟ್ಟಿದ್ದಾನೆ.

ಗುಂಪಿನ ಒತ್ತಡ

ಸಾಕ್ಷಿದಾರ ಹೇಳುವಂತೆ, ಆ ಗುಂಪಿನ ಮೂವರು ಪ್ರತಿನಿತ್ಯ ಪೊಲೀಸರ ಮುಂದೆ ಏನು ಹೇಳಬೇಕು ಎಂದು ತನ್ನನ್ನು ತರಬೇತಿ ಮಾಡಿಸುತ್ತಿದ್ದರು. ಅದೇ ರೀತಿಯಲ್ಲಿ ಆತ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಎಸ್‌ಐಟಿ ತನಿಖೆ ಮುಂದುವರಿಕೆ

ಸಾಕ್ಷಿದಾರನ ಹೇಳಿಕೆಗಳನ್ನು ಎಸ್‌ಐಟಿ ಅಧಿಕಾರಿಗಳು ವಿಡಿಯೋ ರೂಪದಲ್ಲಿ ದಾಖಲಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ವಿಚಾರಣೆ ನಡೆಯುತ್ತಿದೆ.

ಹೀಗಾಗಿ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ನಿಜ-ಸುಳ್ಳಿನ ಬಲೆ ತೆರೆಯುವ ಕೆಲಸ ಎಸ್‌ಐಟಿ ಮುಂದುವರಿಸಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago