Latest

ಧರ್ಮಸ್ಥಳ ಪಾನ್ ಕಾರ್ಡ್ ಪತ್ತೆ ಪ್ರಕರಣಕ್ಕೆ ಹೊಸ ತಿರುವು: ದಾಬಸ್ ಪೇಟೆ ಮಹಿಳೆಯಿಂದ ಮಹತ್ವದ ಹೇಳಿಕೆ

ಬೆಂಗಳೂರು: ಧರ್ಮಸ್ಥಳದಲ್ಲಿ ಪತ್ತೆಯಾಗಿರುವ ಪಾನ್ ಕಾರ್ಡ್ ಹಾಗೂ ಎಟಿಎಂ ಕಾರ್ಡ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಂಬಂಧಿತ ದಾಖಲೆಗಳ ಮಾಲೀಕರ ಪರಿಚಯ ಈಗ ಬಹಿರಂಗವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಮೂಲದ ಸಿದ್ದಲಕ್ಷ್ಯಮ್ಮ ಎಂಬವರು ಈ ಕಾರ್ಡ್‌ಗಳ ಮಾಲಿಕತ್ವದ ಸಂಬಂಧ ತಮ್ಮ ಮಗ ಸುರೇಶ್ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ.

ಸಿದ್ದಲಕ್ಷ್ಯಮ್ಮ ಪ್ರಕಾರ, ಅವರ ಪುತ್ರ ಸುರೇಶ್ ಸುಮಾರು ಐದು ತಿಂಗಳ ಹಿಂದೆ ಜಾಂಡಿಸ್‌ನಿಂದ ಮೃತಪಟ್ಟಿದ್ದ. “ನನಗೆ ಎಟಿಎಂ ಬಳಕೆಗಲ್ಲ. ನಾನು ಬಾಡಿಗೆ ಕಾರ್ಡ್ ಕೊಟ್ಟಿದ್ದೆ. ಅದನ್ನು ನನ್ನ ಮಗ ಸುರೇಶ್ ಬಳಸುತ್ತಿದ್ದ,” ಎಂದು ಅವರು ಸ್ಪಷ್ಟಪಡಿಸಿದರು.

ತಮ್ಮ ಪುತ್ರ ಧರ್ಮಸ್ಥಳಕ್ಕೆ ಹಿಂದೆಯೂ ಕೆಲವೊಮ್ಮೆ ತೆರಳಿದ್ದ ಸಂಗತಿಯನ್ನು ಸಿದ್ದಲಕ್ಷ್ಯಮ್ಮ ಹಂಚಿಕೊಂಡಿದ್ದಾರೆ. “ಪೊಲೀಸರು ಮೊನ್ನೆ ಬಂದು ನನ್ನ ಬಗ್ಗೆ ವಿಚಾರಿಸಿದರು. ನಾನು ಆಗ ಮನೆಯಲ್ಲಿ ಇರಲಿಲ್ಲ. ನಿನ್ನೆ ಮತ್ತೆ ಬಂದು ನನ್ನ ಫೋಟೋ ತೆಗೆದುಕೊಂಡು ಹೋದರು. ನಾವು ಕೆಲ ಸಮಯದ ಹಿಂದೆ ಪರ್ಸ್ ಕಳೆದುಕೊಂಡಿದ್ದೆವು. ಆದರೆ ಈ ಪರ್ಸ್ ಕಳೆವಿಕೆ ಪ್ರಕರಣಕ್ಕೂ, ಧರ್ಮಸ್ಥಳ ಶವ ಪತ್ತೆ ಪ್ರಕರಣಕ್ಕೂ ನಮ್ಮಿಗೆ ಯಾವುದೇ ಸಂಬಂಧವಿಲ್ಲ,” ಎಂದು ಅವರು ಹೇಳಿದರು.

ಮಗನ ಕುಡಿತದ ಸಮಸ್ಯೆಯೂ ಮನೆಯಲ್ಲಿನ ತೊಂದರೆಗಳಿಗೆ ಕಾರಣವಾಗಿತ್ತು ಎನ್ನುವಂತೆ ಅವರು ಹೇಳಿದ್ದಾರೆ. “ಸುರೇಶ್ ಮೂರು ವರ್ಷಗಳಿಂದ ನಮ್ಮ ಜೊತೆ ಇರಲಿಲ್ಲ. ಕುಡಿತ ಜಾಸ್ತಿಯಾಗಿತ್ತು. ಪೊಲೀಸರು ಕೇಳಿದ ಪ್ರಶ್ನೆಗಳಿಗೆ ನಾನು ನಿಖರವಾಗಿ ಉತ್ತರ ನೀಡಿದ್ದೇನೆ,” ಎಂದು ಸಿದ್ದಲಕ್ಷ್ಯಮ್ಮ ಹೇಳಿದಾರೆ.

ಈ ಮಾಹಿತಿಯೊಂದಿಗೆ ಧರ್ಮಸ್ಥಳದಲ್ಲಿ ಪತ್ತೆಯಾದ ಶವ ಹಾಗೂ ಡಾಕ್ಯುಮೆಂಟ್‌ಗಳ ನಡುವಿನ ಸಂಪರ್ಕವನ್ನು ಪೊಲೀಸರು ಈಗ ಹೆಚ್ಚಿನ ನಿರೀಕ್ಷೆಯೊಂದಿಗೆ ತನಿಖೆ ಮುಂದುವರೆಸಿದ್ದಾರೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago