Latest

ಧರ್ಮಸ್ಥಳ ಪಾನ್ ಕಾರ್ಡ್ ಪತ್ತೆ ಪ್ರಕರಣಕ್ಕೆ ಹೊಸ ತಿರುವು: ದಾಬಸ್ ಪೇಟೆ ಮಹಿಳೆಯಿಂದ ಮಹತ್ವದ ಹೇಳಿಕೆ

ಬೆಂಗಳೂರು: ಧರ್ಮಸ್ಥಳದಲ್ಲಿ ಪತ್ತೆಯಾಗಿರುವ ಪಾನ್ ಕಾರ್ಡ್ ಹಾಗೂ ಎಟಿಎಂ ಕಾರ್ಡ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಂಬಂಧಿತ ದಾಖಲೆಗಳ ಮಾಲೀಕರ ಪರಿಚಯ ಈಗ ಬಹಿರಂಗವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಮೂಲದ ಸಿದ್ದಲಕ್ಷ್ಯಮ್ಮ ಎಂಬವರು ಈ ಕಾರ್ಡ್‌ಗಳ ಮಾಲಿಕತ್ವದ ಸಂಬಂಧ ತಮ್ಮ ಮಗ ಸುರೇಶ್ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ.

ಸಿದ್ದಲಕ್ಷ್ಯಮ್ಮ ಪ್ರಕಾರ, ಅವರ ಪುತ್ರ ಸುರೇಶ್ ಸುಮಾರು ಐದು ತಿಂಗಳ ಹಿಂದೆ ಜಾಂಡಿಸ್‌ನಿಂದ ಮೃತಪಟ್ಟಿದ್ದ. “ನನಗೆ ಎಟಿಎಂ ಬಳಕೆಗಲ್ಲ. ನಾನು ಬಾಡಿಗೆ ಕಾರ್ಡ್ ಕೊಟ್ಟಿದ್ದೆ. ಅದನ್ನು ನನ್ನ ಮಗ ಸುರೇಶ್ ಬಳಸುತ್ತಿದ್ದ,” ಎಂದು ಅವರು ಸ್ಪಷ್ಟಪಡಿಸಿದರು.

ತಮ್ಮ ಪುತ್ರ ಧರ್ಮಸ್ಥಳಕ್ಕೆ ಹಿಂದೆಯೂ ಕೆಲವೊಮ್ಮೆ ತೆರಳಿದ್ದ ಸಂಗತಿಯನ್ನು ಸಿದ್ದಲಕ್ಷ್ಯಮ್ಮ ಹಂಚಿಕೊಂಡಿದ್ದಾರೆ. “ಪೊಲೀಸರು ಮೊನ್ನೆ ಬಂದು ನನ್ನ ಬಗ್ಗೆ ವಿಚಾರಿಸಿದರು. ನಾನು ಆಗ ಮನೆಯಲ್ಲಿ ಇರಲಿಲ್ಲ. ನಿನ್ನೆ ಮತ್ತೆ ಬಂದು ನನ್ನ ಫೋಟೋ ತೆಗೆದುಕೊಂಡು ಹೋದರು. ನಾವು ಕೆಲ ಸಮಯದ ಹಿಂದೆ ಪರ್ಸ್ ಕಳೆದುಕೊಂಡಿದ್ದೆವು. ಆದರೆ ಈ ಪರ್ಸ್ ಕಳೆವಿಕೆ ಪ್ರಕರಣಕ್ಕೂ, ಧರ್ಮಸ್ಥಳ ಶವ ಪತ್ತೆ ಪ್ರಕರಣಕ್ಕೂ ನಮ್ಮಿಗೆ ಯಾವುದೇ ಸಂಬಂಧವಿಲ್ಲ,” ಎಂದು ಅವರು ಹೇಳಿದರು.

ಮಗನ ಕುಡಿತದ ಸಮಸ್ಯೆಯೂ ಮನೆಯಲ್ಲಿನ ತೊಂದರೆಗಳಿಗೆ ಕಾರಣವಾಗಿತ್ತು ಎನ್ನುವಂತೆ ಅವರು ಹೇಳಿದ್ದಾರೆ. “ಸುರೇಶ್ ಮೂರು ವರ್ಷಗಳಿಂದ ನಮ್ಮ ಜೊತೆ ಇರಲಿಲ್ಲ. ಕುಡಿತ ಜಾಸ್ತಿಯಾಗಿತ್ತು. ಪೊಲೀಸರು ಕೇಳಿದ ಪ್ರಶ್ನೆಗಳಿಗೆ ನಾನು ನಿಖರವಾಗಿ ಉತ್ತರ ನೀಡಿದ್ದೇನೆ,” ಎಂದು ಸಿದ್ದಲಕ್ಷ್ಯಮ್ಮ ಹೇಳಿದಾರೆ.

ಈ ಮಾಹಿತಿಯೊಂದಿಗೆ ಧರ್ಮಸ್ಥಳದಲ್ಲಿ ಪತ್ತೆಯಾದ ಶವ ಹಾಗೂ ಡಾಕ್ಯುಮೆಂಟ್‌ಗಳ ನಡುವಿನ ಸಂಪರ್ಕವನ್ನು ಪೊಲೀಸರು ಈಗ ಹೆಚ್ಚಿನ ನಿರೀಕ್ಷೆಯೊಂದಿಗೆ ತನಿಖೆ ಮುಂದುವರೆಸಿದ್ದಾರೆ.

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

9 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

9 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

11 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

13 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

13 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

13 hours ago