Categories: CrimeLatest

ಜಿಮ್ ಟ್ರೈನರ್ ವಿಜಯ್ ಹತ್ಯೆ ಪ್ರಕರಣಕ್ಕೆ ಹೊಸ ತಿರುವು; ಪ್ರಭಾವಿ ಉದ್ಯಮಿ ಪುತ್ರಿಯೊಂದಿಗೆ ಪ್ರೇಮ ಸಂಬಂಧ ತನಿಖೆಯಲ್ಲಿ ಬಹಿರಂಗ

ಆನೇಕಲ್‌ನಲ್ಲಿ ನಡೆದ ಜಿಮ್ ಟ್ರೈನರ್ ವಿಜಯ್ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಭಾವಿ ಉದ್ಯಮಿಯ ಪುತ್ರಿಯೊಂದಿಗಿನ ಪ್ರೇಮ ಸಂಬಂಧವೇ ಹತ್ಯೆಗೆ ಕಾರಣವಾಗಿರಬಹುದು ಎಂಬ ಅನುಮಾನಗಳು ತನಿಖೆಯಲ್ಲಿ ಕೇಳಿಬರುತ್ತಿವೆ. ಪ್ರಕರಣ ಸಂಬಂಧ ಈಗಾಗಲೇ ನಾಲ್ವರನ್ನು ಬಂಧಿಸಿರುವ ಬನ್ನೇರುಘಟ್ಟ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದ ವಿಜಯ್ ಕೆಲವು ವರ್ಷಗಳ ಹಿಂದೆ ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ಕೆ.ಆರ್.ಪುರಂನ ಜಿಮ್‌ನಲ್ಲಿ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದನು. ಸುಮಾರು ಹತ್ತು ದಿನಗಳ ಹಿಂದೆ ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಕಾಳೇಶ್ವರಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ವಿಜಯ್ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾಲ್ ಡಿಟೇಲ್ಸ್, ಸಿಡಿಆರ್ ಹಾಗೂ ಲೊಕೇಶನ್ ಟವರ್ ಡಂಪ್ ಸೇರಿದಂತೆ ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ಆನೇಕಲ್ ಮೂಲದ ಶ್ರೀರಾಮ್, ಸುಮಿತ್, ವೆಂಕಟೇಶಯ್ಯ ಮತ್ತು ಬಾಬು ಎಂಬ ನಾಲ್ವರನ್ನು ಬಂಧಿಸಿದ್ದಾರೆ.

ಮೃತ ವಿಜಯ್ ಕುಟುಂಬದವರ ಆರೋಪದ ಪ್ರಕಾರ, ವಿಜಯ್‌ಗೆ ಉದ್ಯಮಿ ಕಾಮಿನೇನಿ ಪ್ರಸಾದ್ ಅವರ ಪುತ್ರಿಯೊಂದಿಗೆ ಆಪ್ತ ಸಂಬಂಧವಿದ್ದು, ಇದೇ ವಿಚಾರದಿಂದ ವೈಮನಸ್ಸು ಉಂಟಾಗಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಕುಟುಂಬಸ್ಥರು ಕೋಟ್ಯಂತರ ರೂಪಾಯಿ ಸುಪಾರಿ ನೀಡಿ ಹತ್ಯೆ ನಡೆಸಲಾಗಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ.

ವಿಜಯ್ ಸುಮಾರು ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ನಂತರ ಜಿಮ್‌ಗೆ ಬರುತ್ತಿದ್ದ ಉದ್ಯಮಿಯ ಪುತ್ರಿಯೊಂದಿಗೆ ಆತ ಸನ್ನಿಹಿತನಾಗಿದ್ದನೆಂದು ಹೇಳಲಾಗುತ್ತಿದೆ. ಈ ವಿಚಾರ ತಿಳಿದ ಬಳಿಕ ವಿಜಯ್ ಪತ್ನಿ ಮಕ್ಕಳೊಂದಿಗೆ ತವರು ಮನೆಗೆ ತೆರಳಿದ್ದಳು ಎನ್ನಲಾಗಿದೆ.

ಇನ್ನೊಂದೆಡೆ ವಿಜಯ್ ಮತ್ತು ಯುವತಿ ಕೆಲಕಾಲ ಕಾಣೆಯಾಗಿದ್ದು, ಬಳಿಕ ಪುತ್ರಿಯ ಸಂಬಂಧದ ಬಗ್ಗೆ ತಿಳಿದ ಉದ್ಯಮಿ ಕಾಮಿನೇನಿ ಪ್ರಸಾದ್ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಇಬ್ಬರನ್ನೂ ಪತ್ತೆಹಚ್ಚಿ ಕುಟುಂಬದವರಿಗೆ ಒಪ್ಪಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಈ ಘಟನೆಯ ನಂತರ ವಿಜಯ್‌ಗೆ ಎಚ್ಚರಿಕೆ ನೀಡಲಾಗಿದ್ದು, ಕೆಲವರ ಮೂಲಕ ಹಲ್ಲೆ ಕೂಡ ನಡೆದಿತ್ತು ಎಂಬ ಆರೋಪಗಳೂ ಕೇಳಿಬಂದಿವೆ. ಆದರೂ ವಿಜಯ್ ಮತ್ತು ಯುವತಿ ತಮ್ಮ ಸಂಪರ್ಕ ಮುಂದುವರಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಶ್ರೀರಾಮ್ ತನಿಖೆ ವೇಳೆ ಉದ್ಯಮಿ ಕಾಮಿನೇನಿ ಪ್ರಸಾದ್ ಹಾಗೂ ಇತರ ಕೆಲವರೊಂದಿಗೆ ನಡೆದ ಮಾತುಕತೆಗಳ ಕುರಿತು ಮಾಹಿತಿ ನೀಡಿದ್ದಾನೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಪೊಲೀಸರು ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಪ್ರಕರಣದ ಗಂಭೀರತೆಯನ್ನು ಮನಗಂಡು ಕೇಂದ್ರ ವಲಯ ಐಜಿಪಿ ಗಿರೀಶ್ ಬನ್ನೇರುಘಟ್ಟ ಪೊಲೀಸ್ ಠಾಣೆಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲಿಸಿದ್ದಾರೆ. ಪ್ರಕರಣ ಇನ್ನೂ ತನಿಖಾ ಹಂತದಲ್ಲಿದ್ದು, ಬಂಧಿತ ನಾಲ್ವರಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ ಪ್ರಕರಣದಲ್ಲಿ ಉಲ್ಲೇಖವಾಗಿರುವ ಕೆಲ ಪ್ರಮುಖ ಆರೋಪಿಗಳು, ವಕೀಲ ಸೇರಿದಂತೆ, ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ಅವರ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಪ್ರಕರಣದ ಸಂಪೂರ್ಣ ಸತ್ಯ ತನಿಖೆಯ ಬಳಿಕವೇ ಹೊರಬರುವ ಸಾಧ್ಯತೆ ಇದ್ದು, ಯಾವುದೇ ಒತ್ತಡ ಅಥವಾ ಪ್ರಭಾವವಿಲ್ಲದೆ ನಿಷ್ಪಕ್ಷಪಾತ ತನಿಖೆ ನಡೆಸಿ ವಿಜಯ್ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಕುಟುಂಬಸ್ಥರು ಹಾಗೂ ಆಪ್ತರು ಆಗ್ರಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

10 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

10 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

10 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

10 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

10 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

10 hours ago