Latest

ಲವ್ ಜಿಹಾದ್ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪತ್ನಿಯಿಂದಲೇ ಪತಿಯ ವಿರುದ್ಧ ಪೋಕ್ಸೋ ದೂರು

ಗದಗ: ರಾಜ್ಯದೆಲ್ಲೆಡೆ ಚರ್ಚೆಗೆ ಕಾರಣವಾಗಿದ್ದ ಲವ್ ಜಿಹಾದ್ ಹಾಗೂ ಬಲವಂತ ಮತಾಂತರ ಪ್ರಕರಣ ಇದೀಗ ಮುಗ್ಗರಿಸುವ ತಳಹದಿಗೆ ತಲುಪಿದ್ದು, ಹೊಸ ಬೆಳವಣಿಗೆಯೊಂದು ದಾಖಲಾಗಿದೆ. ಈ ಪ್ರಕರಣದಲ್ಲಿ ಪತ್ನಿಯೇ ಈಗ ಪತಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.

ಪರಿಣಾಮ: ಪತಿಯೇ ಆರೋಪಿತ, ಪತ್ನಿಯೇ ದೂರುದಾರ!
ಗದಗದ ಬೆಟಗೇರಿಯ ಸೆಟ್ಮೆಂಟ್ ಪ್ರದೇಶದ ನಿವಾಸಿ ವಿಶಾಲ್ ಕುಮಾರ್ ಎಂಬಾತನ ವಿರುದ್ಧ, ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳಬೇಕಾಯ್ತು ಎಂಬ ಪ್ರಶ್ನೆ ಎಬ್ಬಿಸಿದ್ ವಿಶಾಲ್ ವಿರುದ್ಧವೇ ತನ್ನ ಅಪ್ರಾಪ್ತ ವಯಸ್ಸಿನಲ್ಲಿಯೇ ದೈಹಿಕ ಶೋಷಣೆಗೆ ಒಳಪಡಿಸಿದ್ದಾನೆ ಎಂದು ಪತ್ನಿ ಗಂಭೀರ ಆರೋಪ ಮಾಡಿದ್ದಾಳೆ.

ಗದಗ ಮಹಿಳಾ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ, “ನಾನು ಕೇವಲ 17 ವರ್ಷದವಳಿದ್ದಾಗ ವಿಶಾಲ್ ನನಗೆ ಪ್ರೀತಿಯ ನಾಟಕವಾಡಿ ದೈಹಿಕ ಸಂಬಂಧ ಬೆಳೆಸಿದ್ದ. ನಂತರ ಮದುವೆಯ ಹೆಸರು ಹೇಳಿ ತನ್ನ ಒತ್ತಡಕ್ಕೆ ಒಳಪಡಿಸಿದ್ದ,” ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಈ ಹಿನ್ನೆಲೆ ವಿಶಾಲ್ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹಿಂದಿನ ಹಿನ್ನೆಲೆ
ವಿಶಾಲ್ ಮತ್ತು ಯುವತಿ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ತಮ್ಮ ಸಂಬಂಧವನ್ನು ಮದುವೆಯಾಗಿ ಮುಂದುವರೆಸಲು ನಿರ್ಧರಿಸಿದ್ದ ಜೋಡಿ, 2024ರ ನವೆಂಬರ್ 26ರಂದು ಗಪಚುಪಾಗಿ ರಿಜಿಸ್ಟರ್ ಮದುವೆಯಾದರು. ಆದರೆ ಈ ಸಂಬಂಧದ ವಿಚಾರ ಯುವತಿಯ ಮನೆಯವರಿಗೆ ತಿಳಿದ ನಂತರ, ಅವರು ವಿಶಾಲ್‌ನ್ನು ಮುಸ್ಲಿಂ ಸಂಪ್ರದಾಯದಂತೆ ಮದುವೆಯಾಗುವಂತೆ ಒತ್ತಾಯಿಸಿದರು. ಪ್ರೀತಿಗೆ ಮಿಡಿದ ಯುವತಿ ಸಹಮತ ಸೂಚಿಸಿ, 2025ರ ಏಪ್ರಿಲ್ 25ರಂದು ಸಂಪ್ರದಾಯದಂತೆ ಮದುವೆಯಾದರು.

ಇಲ್ಲಿ ತೊಂದರೆಯ ತಿರುವು ಆರಂಭವಾಯಿತು. ಮದುವೆಯ ದಾಖಲೆಗಳಲ್ಲಿ ವಿಶಾಲ್ ಹೆಸರನ್ನು ಉರ್ದುವಿನಲ್ಲಿ “ವಿರಾಜ್ ಸಾಬ್” ಎಂದು ಬದಲಾಯಿಸಿದ್ದನ್ನು ಗಮನಿಸಿದ ವಿಶಾಲ್, ತಾನು ಬಲವಂತ ಮತಾಂತರಕ್ಕೆ ಒಳಗಾಗಿದ್ದೇನೆ ಎಂಬ ಅನುಮಾನಕ್ಕೆ ತುತ್ತಾದ. ಕೂಡಲೇ ಶಹರ ಪೊಲೀಸ್ ಠಾಣೆಯಲ್ಲಿ ಪತ್ನಿಯೊಂದಿಗೆ ಜೊತೆಯಾಗಿ ಆಕೆಯ ಕುಟುಂಬದ ವಿರುದ್ಧ ಲವ್ ಜಿಹಾದ್ ಹಾಗೂ ಮತಾಂತರಕ್ಕೆ ಯತ್ನ ಪ್ರಕರಣ ದಾಖಲಿಸಿದ್ದ.

ಆಮೇಲೆ ತಿರುವು: ಈಗ ಪತ್ನಿಯೇ ದೂರು
ಈ ಹಿಂದೆ ದೂರುದಾರರಾಗಿದ್ದ ಪತಿ ಇದೀಗ ಆರೋಪಿತರ ಪಟ್ಟಿಗೆ ಸೇರಿದ್ದು, ಪತ್ನಿಯ ದೂರಿನಿಂದ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ, ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಇಬ್ಬರಿಗೂ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ಸದ್ಯ ಪ್ರಕರಣದ ಮುಂದಿನ ಹಂತ
ಈ ಜಟಿಲ ಪ್ರಕರಣದಲ್ಲಿ ಇಬ್ಬರೂ ಪರಸ್ಪರ ವಿರುದ್ಧ ಗಂಭೀರ ಆರೋಪ ಹಾಕಿರುವ ಹಿನ್ನೆಲೆಯಲ್ಲಿ, ಪ್ರಕರಣ ಹೆಚ್ಚಿನ ಗಮನ ಸೆಳೆದಿದ್ದು, ಪೊಲೀಸರು ಎಲ್ಲ ಅಂಗಾಂಶಗಳನ್ನು ಪರಿಶೀಲಿಸಿ ತನಿಖೆ ಮುಂದುವರೆಸುತ್ತಿದ್ದಾರೆ. ಸದ್ಯ, ಘಟನೆ ಸಂಬಂಧಪಟ್ಟಂತೆ ಸೂಕ್ತ ದಾಖಲೆಗಳ ಪರಿಶೀಲನೆ ಹಾಗೂ ಮಾಹಿತಿ ಸಂಗ್ರಹ ಕಾರ್ಯ ಜೋರಾಗಿ ನಡೆಯುತ್ತಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago