ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ರೈತ ಮಹಿಳೆ ಸುಜಾತ ಅವರ ಭೂಮಿ ವಿವಾದ ಇದೀಗ ಹೊಸ ಹಂತ ತಲುಪಿದ್ದು, ಮಾಜಿ ಶಾಸಕ ಹರತಾಳು ಹಾಲಪ್ಪ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ. ಸಾಗರ ಹಾಗೂ ಹೊಸನಗರ ಕ್ಷೇತ್ರದ ಮಾಜಿ ಶಾಸಕ ಹರತಾಳು ಹಾಲಪ್ಪ ಅವರು ಸಾಗರ ತಾಲೂಕಿನ ಸುಜಾತ ಅಡ್ಡೇರಿ ಗ್ರಾಮದ ಸರ್ವೇ ನಂ. 8ರ ಜಾಗವನ್ನು ಪರಿಶೀಲಿಸಿ, ನಂತರ ಸಾಗರ ಅರಣ್ಯ ಇಲಾಖೆ ಕಚೇರಿಗೆ ಭೇಟಿ ನೀಡಿ ಡಿಎಫ್ಒ ಅವರೊಂದಿಗೆ ಚರ್ಚೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, “ಉಳುವವನೇ ಭೂಮಿಯ ಒಡೆಯ ಎಂಬ ತತ್ವದಡಿ ಬಡ ರೈತರಿಗೆ ಕನಿಷ್ಠ 10 ಗುಂಟೆ ಜಮೀನು ಉಳಿಸಿಕೊಡಬೇಕು. ಸುಜಾತ ಅವರ ಕುಟುಂಬ ಹಲವು ವರ್ಷಗಳಿಂದ ಈ ಭೂಮಿಯಲ್ಲಿ ಜೀವನ ಸಾಗಿಸುತ್ತಿದ್ದು, ರೈತರ ಬದುಕು ಉಳಿಯುವಂತೆ ಅರಣ್ಯ ಇಲಾಖೆ ಮಾನವೀಯ ದೃಷ್ಟಿಯಿಂದ ನಡೆದುಕೊಳ್ಳಬೇಕು” ಎಂದು ಮನವಿ ಮಾಡಿದರು.
ಈ ಕುರಿತಾಗಿ ಡಿಎಫ್ಒ ಅವರೊಂದಿಗೆ ಸಕಾರಾತ್ಮಕ ಚರ್ಚೆ ನಡೆದಿದ್ದು, ರೈತರ ಮನವಿಗೆ ಅವರು ಸ್ಪಂದನೆ ನೀಡಿರುವುದಾಗಿ ಹರತಾಳು ಹಾಲಪ್ಪ ತಿಳಿಸಿದ್ದಾರೆ. “ಸುಜಾತ ಅವರ ಭೂಮಿಯ ವಿಚಾರವನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಅವರು ನಮ್ಮ ಮನವಿಯನ್ನು ಸಹಾನುಭೂತಿಯಿಂದ ಪರಿಗಣಿಸುವ ಭರವಸೆ ನೀಡಿದ್ದಾರೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಮೂರ್ತಿ ಹೊಸಂತೆ, ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ, ತಾಲೂಕು ಬಿಜೆಪಿ ಅಧ್ಯಕ್ಷ ದೇವೇಂದ್ರಪ್ಪ ಯಲಕುಂದ್ಲಿ, ಗಣೇಶ್ ಪ್ರಸಾದ್, ಅರುಣ್ ಕುಗ್ವೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೆ ಏನಾಗಿತ್ತು?
ಕೆಲವು ದಿನಗಳ ಹಿಂದೆ ಅಡ್ಡೇರಿ ಗ್ರಾಮದ ಸರ್ವೇ ನಂ. 21ರಲ್ಲಿ ಶರಾವತಿ ಮುಳುಗಡೆ ಸಂತ್ರಸ್ತೆ ಸುಜಾತ ಅವರ ಜಮೀನಿನಲ್ಲಿ ಬೆಳೆದಿದ್ದ ಅಡಿಕೆ, ಕಬ್ಬು, ಮಾವು ಹಾಗೂ ಇತರ ಬೆಳೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸಿದ್ದರಿಂದ ಭಾರೀ ವಿವಾದ ಉಂಟಾಗಿತ್ತು. ಈ ಕ್ರಮವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯ ರೈತರು ಸಾಗರ ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನೆಯಲ್ಲಿ ಮಾತನಾಡಿದ್ದ ಮುಖಂಡರು, ಹಲವು ದಶಕಗಳಿಂದ ರೈತರು ಸಾಗುವಳಿ ಮಾಡಿಕೊಂಡು ಬದುಕು ಸಾಗಿಸುತ್ತಿರುವ ಜಾಗದಲ್ಲಿ ಏಕಾಏಕಿ ದೌರ್ಜನ್ಯ ನಡೆಸಿರುವುದು ಸರಿಯಲ್ಲ ಎಂದು ಆರೋಪಿಸಿದ್ದರು. ಬಗರ್ಹುಕುಂ ಅಡಿಯಲ್ಲಿ ಅರ್ಜಿ ಸಲ್ಲಿಸಿ ಸರ್ವೇ ಕಾರ್ಯ ನಡೆಯುತ್ತಿರುವ ನಡುವೆಯೇ ಬೆಳೆ ನಾಶಪಡಿಸಿರುವುದನ್ನು ತೀವ್ರವಾಗಿ ಖಂಡಿಸಿದ್ದರು.
ರೈತರ ಹಿತರಕ್ಷಣೆಯಲ್ಲಿ ಶಾಸಕ ಹಾಗೂ ಅರಣ್ಯ ಕಯಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ವಿಫಲರಾಗಿದ್ದಾರೆ ಎಂದು ಆರೋಪಿಸಿ, ಅವರ ರಾಜೀನಾಮೆಗೆ ಆಗ್ರಹವೂ ಕೇಳಿಬಂದಿತ್ತು. ಘಟನೆಯ ಬಳಿಕ ಅರಣ್ಯ ಇಲಾಖೆ ತನಿಖೆಗೆ ತಂಡ ರಚಿಸಿರುವುದಾಗಿ ತಿಳಿಸಿತ್ತು.
ರಾಯಚೂರಿನಲ್ಲಿ ಸರ್ಕಾರಿ ಕಚೇರಿಯಲ್ಲೇ ಗುಂಡು-ತುಂಡಿನ ಪಾರ್ಟಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಮೂವರು ಸಿಬ್ಬಂದಿಯನ್ನು…
ಭಟ್ಕಳ: ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಕನಸಿಗೆ ಕೊನೆಗೂ ಜಯ ಸಿಕ್ಕಿದೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ…
ಹಳಿಯಾಳ: ಸುಲಿಗೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಮೂರು ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ನ್ನು…
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಮಾನವೀಯತೆಯನ್ನೇ ಮರೆಸುವಂತಹ ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ತಂದೆಯೊಬ್ಬ ತನ್ನ 13…
ಜಾರ್ಖಂಡ್ನ ಚಕ್ರಧರಪುರ ರೈಲ್ವೆ ವಿಭಾಗದಲ್ಲಿ ಮನಕಲಕುವ ಘಟನೆ ನಡೆದಿದ್ದು, ತಾಯಿಯೇ ತನ್ನ ಒಂದೂವರೆ ತಿಂಗಳ ಹಸುಗೂಸನ್ನು ಚಲಿಸುತ್ತಿದ್ದ ರೈಲಿನ ಕಿಟಕಿಯಿಂದ…