Categories: CrimeLatest

ಮದುವೆಯಾದ 48 ದಿನಗಳಲ್ಲೇ ನವವಧು ಆತ್ಮಹತ್ಯೆ; ವರದಕ್ಷಿಣೆ ಕಿರುಕುಳ ಆರೋಪದಡಿ ವೈದ್ಯ ಪತಿ ಬಂಧನ

ಮದುವೆಯಾಗಿ ಕೇವಲ 48 ದಿನಗಳಲ್ಲೇ 26 ವರ್ಷದ ನವವಧು ವಿಶಾಖಾ ತಿಲ್ಕರ್ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮುಂಬೈ ಸಮೀಪದ ಅಂಬರ್‌ನಾಥ್‌ನಲ್ಲಿ ನಡೆದಿದೆ. ವರದಕ್ಷಿಣೆ ವಿಚಾರವಾಗಿ ಪತಿ ಹಾಗೂ ಅತ್ತೆ ಮನೆಯವರಿಂದ ನಿರಂತರ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಒಳಗಾಗಿದ್ದರಿಂದಲೇ ಈ ದುರ್ಘಟನೆ ಸಂಭವಿಸಿದೆ ಎಂದು ಮೃತೆಯ ಕುಟುಂಬ ಆರೋಪಿಸಿದೆ.

ಈ ಪ್ರಕರಣ ಸಂಬಂಧ ವಿಶಾಖಾ ಅವರ ಪತಿ, ವೈದ್ಯ ಡಾ. ನಿತಿನ್ ತಿಲ್ಕರ್ ಅವರನ್ನು ಪೊಲೀಸರು ಬಂಧಿಸಿದ್ದು, ಅತ್ತೆ ಛಾಯಾ ಹಾಗೂ ಸೋದರ ನಿನಾದ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ತಲೆಮರೆಸಿಕೊಂಡಿರುವ ಇಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ವಿಶಾಖಾ ಮತ್ತು ನಿತಿನ್ ಅವರ ವಿವಾಹ ಕಳೆದ ಏಪ್ರಿಲ್ 30ರಂದು ನಡೆದಿತ್ತು. ಮದುವೆಗೆ ಮುನ್ನ ಎಲ್ಲವೂ ಸುಗಮವಾಗಿದ್ದರೂ, ಮದುವೆಯಾದ ಬಳಿಕ ವರದಕ್ಷಿಣೆ ವಿಚಾರವಾಗಿ ಕಿರುಕುಳ ಆರಂಭವಾಯಿತು ಎಂದು ಕುಟುಂಬಸ್ಥರು ದೂರಿದ್ದಾರೆ. ನಿರೀಕ್ಷಿತ ಮಟ್ಟದಲ್ಲಿ ಉಡುಗೊರೆ ಹಾಗೂ ಹಣ ಸಿಗಲಿಲ್ಲ ಎಂಬ ಕಾರಣಕ್ಕೆ ಹೆಚ್ಚುವರಿ ಹಣ ಮತ್ತು ಚಿನ್ನ ತರಲು ವಿಶಾಖಾ ಮೇಲೆ ಒತ್ತಡ ಹೇರಲಾಗುತ್ತಿತ್ತು ಎನ್ನಲಾಗಿದೆ.

ಕುಟುಂಬಸ್ಥರ ಆರೋಪದಂತೆ, ವಿಶಾಖಾ ಅವರ ಪ್ರತಿಯೊಂದು ಚಲನವಲನದ ಮೇಲೂ ನಿಗಾ ಇಡಲು ಪತಿ ಮನೆಯೊಳಗೆ ಹಾಗೂ ಹೊರಭಾಗದಲ್ಲಿ ಹಲವು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದ. ಯಾರೊಂದಿಗಾದರೂ ಮಾತನಾಡಿದರೂ ಆಕೆಗೆ ಹಲ್ಲೆ ನಡೆಸಲಾಗುತ್ತಿತ್ತು. ಆತ್ಮಹತ್ಯೆಗೆ ಎರಡು ದಿನಗಳ ಮೊದಲು ನೆರೆಮನೆಯ ಮಹಿಳೆಯೊಂದಿಗೆ ಮಾತನಾಡಿದ್ದ ಕಾರಣಕ್ಕೂ ಪತಿ ಹಲ್ಲೆ ನಡೆಸಿದ್ದ ಎಂದು ಸಂಬಂಧಿಕರು ತಿಳಿಸಿದ್ದಾರೆ.

ಆತ್ಮಹತ್ಯೆಗೂ ಮುನ್ನ ವಿಶಾಖಾ ತನ್ನ ತಾಯಿಗೆ ಕರೆ ಮಾಡಿ ತಾನು ಅನುಭವಿಸುತ್ತಿದ್ದ ಹಿಂಸೆಯ ಬಗ್ಗೆ ಕಣ್ಣೀರಿಟ್ಟು ಹೇಳಿಕೊಂಡಿದ್ದಳು. ಮಗಳನ್ನು ಮನೆಗೆ ಕರೆತರಲು ಪೋಷಕರು ಸಿದ್ಧತೆ ನಡೆಸುತ್ತಿದ್ದ ವೇಳೆಯಲ್ಲೇ, ವಿಶಾಖಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಲುಪಿದೆ.

ಕುಟುಂಬದ ದೂರಿನ ಮೇರೆಗೆ ಅಂಬರ್‌ನಾಥ್ ಶಿವಾಜಿನಗರ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ, ಮಾನಸಿಕ ಹಾಗೂ ದೈಹಿಕ ಕಿರುಕುಳ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

11 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

11 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

11 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

11 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

11 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

11 hours ago