ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು ತಿಂಗಳಲ್ಲೇ ಯುವತಿ ಸಾವನ್ನಪ್ಪಿರುವ ಘಟನೆ ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಕೌಶಲ್ಯ (23) ಮೃತ ಯುವತಿ. ಅವರು ಪತಿ ಶಿವಕುಮಾರ್ ನಾಯ್ಕ್ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆದರೆ ಇದು ಆತ್ಮಹತ್ಯೆಯಲ್ಲ, ಪತಿ ಹಾಗೂ ಅವರ ಕುಟುಂಬಸ್ಥರು ಸೇರಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಮೃತೆಯ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ.
ಮದುವೆ ಸಂದರ್ಭದಲ್ಲಿ 18 ತೊಲೆ ಬಂಗಾರ ಹಾಗೂ 3 ಲಕ್ಷ ರೂಪಾಯಿ ನಗದು ನೀಡಲಾಗಿತ್ತು. ಹರಪನಹಳ್ಳಿಯ ಕಲ್ಯಾಣ ಮಂಟಪದಲ್ಲಿ ಅದ್ದೂರಿಯಾಗಿ ಮದುವೆ ನೆರವೇರಿಸಿದ್ದರೂ, ಬಳಿಕ ಮತ್ತಷ್ಟು ವರದಕ್ಷಿಣೆಗಾಗಿ ಒತ್ತಡ ಹಾಕಲಾಗುತ್ತಿತ್ತು ಎಂದು ಕುಟುಂಬಸ್ಥರು ದೂರಿದ್ದಾರೆ.
ಇದಲ್ಲದೆ, ಶೀಲ ಶಂಕೆ ನೆಪದಲ್ಲಿ ಕೌಶಲ್ಯ ಅವರಿಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು ಎನ್ನಲಾಗಿದೆ. ಕಳೆದ ಮೂರು ತಿಂಗಳಿನಿಂದ ತವರಿಗೆ ಕಳುಹಿಸಿರಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ.
ಮೃತೆಯ ಪತಿ ಶಿವಕುಮಾರ್ ನಾಯ್ಕ್ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಾವಿನ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ. ಕುಟುಂಬಸ್ಥರು ಆರೋಪಿಸಿರುವ ಕೊಲೆ ಹಾಗೂ ವರದಕ್ಷಿಣೆ ಕಿರುಕುಳದ ಬಗ್ಗೆ ತನಿಖೆಯ ಬಳಿಕ ಸ್ಪಷ್ಟ ಚಿತ್ರಣ ದೊರೆಯಲಿದೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…
ಯಲ್ಲಾಪುರ: ಮಹಾರಾಷ್ಟ್ರದ ಕೊಲ್ಲಾಪುರ, ಸೊಲ್ಲಾಪುರ, ಪುಣೆ ಹಾಗೂ ಮುಂಬೈ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದ್ದ ಅಡಿಕೆ…
ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಮದುವೆಗೆ ಇನ್ನೂ ಕೇವಲ 24 ಗಂಟೆಗಳಷ್ಟೇ…