Categories: CrimeLatest

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು ತಿಂಗಳಲ್ಲೇ ಯುವತಿ ಸಾವನ್ನಪ್ಪಿರುವ ಘಟನೆ ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಕೌಶಲ್ಯ (23) ಮೃತ ಯುವತಿ. ಅವರು ಪತಿ ಶಿವಕುಮಾರ್ ನಾಯ್ಕ್ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆದರೆ ಇದು ಆತ್ಮಹತ್ಯೆಯಲ್ಲ, ಪತಿ ಹಾಗೂ ಅವರ ಕುಟುಂಬಸ್ಥರು ಸೇರಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಮೃತೆಯ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ.

ಮದುವೆ ಸಂದರ್ಭದಲ್ಲಿ 18 ತೊಲೆ ಬಂಗಾರ ಹಾಗೂ 3 ಲಕ್ಷ ರೂಪಾಯಿ ನಗದು ನೀಡಲಾಗಿತ್ತು. ಹರಪನಹಳ್ಳಿಯ ಕಲ್ಯಾಣ ಮಂಟಪದಲ್ಲಿ ಅದ್ದೂರಿಯಾಗಿ ಮದುವೆ ನೆರವೇರಿಸಿದ್ದರೂ, ಬಳಿಕ ಮತ್ತಷ್ಟು ವರದಕ್ಷಿಣೆಗಾಗಿ ಒತ್ತಡ ಹಾಕಲಾಗುತ್ತಿತ್ತು ಎಂದು ಕುಟುಂಬಸ್ಥರು ದೂರಿದ್ದಾರೆ.

ಇದಲ್ಲದೆ, ಶೀಲ ಶಂಕೆ ನೆಪದಲ್ಲಿ ಕೌಶಲ್ಯ ಅವರಿಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು ಎನ್ನಲಾಗಿದೆ. ಕಳೆದ ಮೂರು ತಿಂಗಳಿನಿಂದ ತವರಿಗೆ ಕಳುಹಿಸಿರಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಮೃತೆಯ ಪತಿ ಶಿವಕುಮಾರ್ ನಾಯ್ಕ್ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಾವಿನ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ. ಕುಟುಂಬಸ್ಥರು ಆರೋಪಿಸಿರುವ ಕೊಲೆ ಹಾಗೂ ವರದಕ್ಷಿಣೆ ಕಿರುಕುಳದ ಬಗ್ಗೆ ತನಿಖೆಯ ಬಳಿಕ ಸ್ಪಷ್ಟ ಚಿತ್ರಣ ದೊರೆಯಲಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

9 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

9 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

9 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

9 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

9 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

10 hours ago