ಬೆಂಗಳೂರು: ನಗರದ ಹೊರವಲಯದಲ್ಲಿರುವ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಭಾರಿ ಚರ್ಚೆಗೀಡಾಗಿದೆ. ಇದೊಂದು ಸುಪಾರಿ ಕೊಲೆ ಆಗಿರುವ ಶಂಕೆ ಇದ್ದು, ಪೊಲೀಸರು ಗಂಭೀರ ತನಿಖೆಗೆ ಕೈ ಹಾಕಿದ್ದಾರೆ.

ಮೃತ ಮಹಿಳೆಯನ್ನು ನೈಜೀರಿಯಾದ ಕ್ರಾಸ್ ರಿವರ್ ರಾಜ್ಯದ ನಿವಾಸಿಯಾಗಿರುವ ಲೋವಿತ್ ಎಂದು ಗುರುತಿಸಲಾಗಿದೆ. ಶಂಕಿತರು ಮಹಿಳೆಯನ್ನು ಬೇರೆಡೆ ಹತ್ಯೆ ಮಾಡಿ, ಶವವನ್ನು ಬೆಟ್ಟಹಲಸೂರು ಮುಖ್ಯರಸ್ತೆ ಬಳಿಗೆ ತಂದು ಬಿಸಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕಜಾಲ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಪ್ರಾಥಮಿಕ ವರದಿಯನ್ನು ದಾಖಲಿಸಿದ್ದಾರೆ. ಲೋವಿತ್ ಭಾರತಕ್ಕೆ ಯಾವ ಕಾರಣಕ್ಕಾಗಿ ಬಂದಿದ್ದರು, ಅವರು ಇಲ್ಲಿ ಯಾರೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಬಗ್ಗೆ ತನಿಖೆ ಚುರುಕುಗೊಳಿಸಲಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಡಾ. ಅಂಬೇಡ್ಕರ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳೀಯ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಸಂಗ್ರಹಿಸಿ ಶಂಕಿತರ ಚಲನಾಚಲನಗಳ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ.

ಈ ಘಟನೆಯು ಬೆಂಗಳೂರುನಲ್ಲಿ ವಿದೇಶಿಗರ ಸುರಕ್ಷತೆ ಬಗ್ಗೆ ಪ್ರಶ್ನೆ ಎತ್ತಿಸುತ್ತಿದ್ದು, ಪೊಲೀಸರು ಶೀಘ್ರದಲ್ಲಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಲಿದ್ದಾರೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

error: Content is protected !!