Categories: CrimeLatest

17 ವರ್ಷದ ಬಾಲಕನೊಂದಿಗೆ ನಿಶಾ ಅಕ್ರಮ ಸಂಬಂಧ; ಪ್ರೀತಿಸಿ ಮದುವೆಯಾದ ಪತಿಯನ್ನೇ ಮುಗಿಸಿದ ಪತ್ನಿ; ಅಪಘಾತದ ಕಥೆ ಕಟ್ಟಿದವಳ ಬಣ್ಣ ಬಯಲು!

ಉತ್ತರಾಖಂಡದಲ್ಲಿ ಪ್ರೀತಿಸಿ ಮದುವೆಯಾದ ಪತಿಯನ್ನೇ ಪತ್ನಿಯೊಬ್ಬಳು ಅಕ್ರಮ ಸಂಬಂಧದ ಕಾರಣಕ್ಕೆ ಹತ್ಯೆ ಮಾಡಿಸಿ, ಬಳಿಕ ಅದನ್ನು ರಸ್ತೆ ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಉತ್ತರಾಖಂಡದ ರಾಮನಗರ ನಿವಾಸಿ ಸಂಜೀವ್ ಕುಮಾರ್ (24) ಟೆಂಟ್ ಹೌಸ್ ನಡೆಸುತ್ತಿದ್ದರು. ಸುಮಾರು ಐದು ವರ್ಷಗಳ ಹಿಂದೆ ಕುಟುಂಬದ ವಿರೋಧದ ನಡುವೆಯೂ ನಿಶಾ ಎಂಬ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು.

ಆದರೆ, ಕೆಲ ವರ್ಷಗಳ ಬಳಿಕ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ. ಸಂಜೀವ್ ಅವರ ಟೆಂಟ್ ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ 17 ವರ್ಷದ ಬಾಲಕನೊಂದಿಗೆ ನಿಶಾ ಅಕ್ರಮ ಸಂಬಂಧ ಹೊಂದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆಂದು ಭಾವಿಸಿ, ಆತನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾಳೆ ಎನ್ನಲಾಗಿದೆ.

ಆಗಸ್ಟ್ 16ರಂದು ಹುಟ್ಟುಹಬ್ಬದ ಪಾರ್ಟಿಗೆ ಹೋಗುವ ನೆಪದಲ್ಲಿ ಸಂಜೀವ್ ಅವರನ್ನು ಕಾರಿನಲ್ಲಿ ಕರೆದೊಯ್ಯಲಾಗಿದೆ. ಸಂಜೀವ್ ಕಾರು ಚಲಾಯಿಸುತ್ತಿದ್ದ ವೇಳೆ ಹಿಂಬದಿ ಸೀಟಿನಲ್ಲಿದ್ದ ಅಪ್ರಾಪ್ತ ಬಾಲಕ ಆತನ ಕುತ್ತಿಗೆಗೆ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಗುಂಡೇಟಿನಿಂದ ನಿಯಂತ್ರಣ ಕಳೆದುಕೊಂಡ ಕಾರು ಗದ್ದೆಗೆ ನುಗ್ಗಿದ್ದು, ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.

ಇತ್ತ ಸಂಜೀವ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ನಂಬಿಸಲು ನಿಶಾ ಪ್ರಯತ್ನಿಸಿದ್ದಳು. ಆದರೆ, ಪೋಸ್ಟ್‌ಮಾರ್ಟಂ ವರದಿ ಇಡೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನೀಡಿದೆ. ಸಂಜೀವ್ ಅವರ ಕುತ್ತಿಗೆ ಭಾಗದಲ್ಲಿ ಗುಂಡು ಪತ್ತೆಯಾಗಿದ್ದು, ಇದು ಅಪಘಾತವಲ್ಲ ಎಂಬುದು ಪೊಲೀಸರಿಗೆ ಸ್ಪಷ್ಟವಾಗಿದೆ.

ಇದರಿಂದ ತನಿಖೆ ಚುರುಕುಗೊಳಿಸಿದ ಪೊಲೀಸರು ನಿಶಾಳನ್ನು ವಿಚಾರಣೆ ನಡೆಸಿದಾಗ, ಪ್ರಕರಣದ ಹಿಂದಿನ ಸಂಚು ಬಯಲಾಗಿದೆ ಎನ್ನಲಾಗಿದೆ. ಕೊನೆಗೆ ನಿಶಾ ಹಾಗೂ ಹತ್ಯೆಗೆ ಸಹಕರಿಸಿದ ಇಬ್ಬರು ಅಪ್ರಾಪ್ತ ಬಾಲಕರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಪ್ರೀತಿಸಿ ಮದುವೆಯಾದ ಪತಿಯ ಸಾವು ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದ ಪತ್ನಿಯ ಸಂಚು, ಪೋಸ್ಟ್‌ಮಾರ್ಟಂ ವರದಿಯಿಂದಲೇ ಬಯಲಾಗಿರುವುದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ಭ್ರಷ್ಟರ ಬೇಟೆ

Recent Posts

ರಾಜ್ಯದ 101 ತಾಲೂಕುಗಳು ಬರಪೀಡಿತ ಘೋಷಣೆ; 89 ತಾಲೂಕುಗಳಲ್ಲಿ ತೀವ್ರ ಬರ, 12 ತಾಲೂಕುಗಳಲ್ಲಿ ಸಾಧಾರಣ ಬರ

ಕಾರವಾರ: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ.…

2 hours ago

ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ಬರ್ಬರ ಹತ್ಯೆ: ಬೈಕ್ ಸವಾರನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು!

ವಿದ್ಯಾನಗರದ ಬನಶಂಕರಿ ಬಡಾವಣೆಯ ಸಿದ್ದೇಶ್ವರ ಪಾರ್ಕ್ ಬಳಿ ಘಟನೆ; ಮೂವರು ಆರೋಪಿಗಳಿಗಾಗಿ ಪೊಲೀಸರ ಶೋಧ ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ…

2 hours ago

ನಾಗಾವಿ ಯಲ್ಲಮ್ಮ ದೇವಾಲಯದ ಹುಂಡಿಯಲ್ಲಿ ವಿದೇಶಿ ಕರೆನ್ಸಿ ಪತ್ತೆ: ₹17 ಸಾವಿರಕ್ಕೂ ಅಧಿಕ ಹಣ ಜಮೆ!

ಕೊರಿಯಾ, ಕೆನಡಾ, ಯುಎಇ, ಅಮೆರಿಕ ಸೇರಿದಂತೆ ವಿವಿಧ ದೇಶಗಳ ನೋಟು–ನಾಣ್ಯಗಳು ಪತ್ತೆ; ವಿದೇಶಗಳಲ್ಲೂ ನಾಗಾವಿ ಯಲ್ಲಮ್ಮ ದೇವಿಯ ಭಕ್ತರಿರುವುದಕ್ಕೆ ಸಾಕ್ಷಿ…

2 hours ago

9 ವರ್ಷಗಳಿಂದ ಜಾಗ–ಮನೆಗಾಗಿ ಅಲೆದಾಟ: ಮಂಗಳಮುಖಿ ರಮಜಾನ್ ಮುಲ್ಲಾಗೆ ಇನ್ನಾದರೂ ಸಿಗುತ್ತಾ ನ್ಯಾಯ?

ಗ್ರಾಮ ಪಂಚಾಯಿತಿ ಠರಾವು ಪಾಸಾದರೂ ಆದೇಶ ಪತ್ರ ನೀಡದ ಅಧಿಕಾರಿಗಳು; ತಾಲೂಕು–ಜಿಲ್ಲಾಡಳಿತ, ರಾಜ್ಯ ಹಾಗೂ ಕೇಂದ್ರ ಸರ್ಕಾರದತ್ತ ರಮಜಾನ್ ಮುಲ್ಲಾ…

2 hours ago

110 ಮಿಲಿಯನ್ ವೀಕ್ಷಣೆಗಾಗಿ ಖಾಸಗಿ ಕ್ಷಣಗಳನ್ನೇ ಹಂಚಿಕೊಂಡ ನವವಧು; ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶ!

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್‌, ವೀವ್ಸ್‌ ಹಾಗೂ ಫಾಲೋವರ್ಸ್‌ ಹೆಚ್ಚಿಸಿಕೊಳ್ಳುವ ಹುಚ್ಚು ಕೆಲವರನ್ನು ಯಾವ ಮಟ್ಟಕ್ಕೆ ಕೊಂಡೊಯ್ಯುತ್ತಿದೆ ಎಂಬುದಕ್ಕೆ ಛತ್ತೀಸ್‌ಗಢದ ರಾಯ್‌ಪುರದಲ್ಲಿ…

1 day ago

ಪ್ರೇಮದಿಂದ ಪ್ರಶ್ನೆಪತ್ರಿಕೆ ಲೀಕ್‌.. ಬ್ರೇಕಪ್ ಬಳಿಕ ಸೇಡಿಗೆ ಬಿದ್ದ ಪ್ರಿಯಕರ; ಬಯಲಾಯ್ತು ಭಾರೀ ಹಗರಣ!

ಮಹಾರಾಷ್ಟ್ರದಲ್ಲಿ ಪ್ರೇಮ, ವಂಚನೆ ಹಾಗೂ ಸೇಡಿನ ಸುತ್ತ ಸುತ್ತುವ ಕುತೂಹಲಕಾರಿ ಪ್ರಕರಣವೊಂದು ಭಾರೀ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ಬಯಲಿಗೆಳೆದಿದೆ.…

1 day ago