Latest

ಜನ್ಮದಿನ ಆಚರಣೆ ಇಲ್ಲ,: ಆದರೆ ದರ್ಶನ್ ಅಭಿಮಾನಿಗಳಿಗೆ ಸರ್ಪ್ರೈಸ್!

ಬೆಂಗಳೂರು, ಫೆಬ್ರವರಿ 9: ಈ ವರ್ಷ ನಟ ದರ್ಶನ್ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಕಳೆಯಲು ನಿರ್ಧರಿಸಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಜನ್ಮದಿನದ ಸಂಭ್ರಮ ನಡೆಯದೆ ಇರಬಹುದು, ಆದರೆ ಅಭಿಮಾನಿಗಳಿಗೆ ಅವರ ಹೊಸ ಸಿನಿಮಾ ‘ಡೆವಿಲ್’ ಟೀಸರ್ ಗಿಫ್ಟ್ ರೂಪದಲ್ಲಿ ಬರಲಿದೆ!

ದರ್ಶನ್ ಅವರ ವಿಶೇಷ ನಿರ್ಧಾರ
ಸাম্প್ರತಿಕ ಘಟನೆಗಳ ಹಿನ್ನೆಲೆಯಲ್ಲಿ ಜನ್ಮದಿನವನ್ನು ಆಚರಿಸಿಕೊಳ್ಳಲ್ಲ ಎಂದು ದರ್ಶನ್ ಈಗಾಗಲೇ ಘೋಷಿಸಿದ್ದಾರೆ. ಈ ಕುರಿತಂತೆ ಅವರು ಸ್ವತಃ ವಿಡಿಯೋ ಮಾಡಿ ನಿನ್ನೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಆದರೆ, ಅಭಿಮಾನಿಗಳಿಗೆ ಸಂತಸದ ಸುದ್ದಿ ಏನೆಂದರೆ ‘ಡೆವಿಲ್’ ಸಿನಿಮಾದ ಟೀಸರ್ ಅವರ ಜನ್ಮದಿನದಂದು ಬಿಡುಗಡೆಯಾಗಲಿದೆ.

ಟೀಸರ್ ಬಿಡುಗಡೆ – ಅಭಿಮಾನಿಗಳಿಗೆ ಪವರ್‌ಫುಲ್ ಗಿಫ್ಟ್!
ಈ ನಿರ್ಧಾರವನ್ನು ದರ್ಶನ್ ಅವರು ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಹೊಸ ಪ್ರಯತ್ನದ ಹಾರಿವು ಶೀಘ್ರದಲ್ಲೇ ನಿಮ್ಮ ಮುಂದೆ ಬರುತ್ತದೆ ಎಂದು ಹೇಳಿದ ಅವರು, ‘ಡೆವಿಲ್’ ಸಿನಿಮಾದ ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಟೀಸರ್ ರಿಲೀಸ್ ಆದ ಬಳಿಕ ಚಿತ್ರಕ್ಕೆ ಇನ್ನಷ್ಟು ಕ್ರೇಜ್ ಹೆಚ್ಚಾಗುವುದು ಖಚಿತ ಎಂದು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.

‘ಡೆವಿಲ್’ ಮತ್ತು ದರ್ಶನ್ ಜೀವನದ ಹೊಸ ಹಂತ
ಕೊಲೆ ಕೇಸ್ ಸಂಬಂಧ ದರ್ಶನ್ ಬಂಧನಕ್ಕೆ ಮೊದಲು ‘ಡೆವಿಲ್’ ಚಿತ್ರದ ಚಿತ್ರೀಕರಣ ಮುಗಿದು, ಒಂದು ಟೀಸರ್ ಕೂಡ ಬಿಡುಗಡೆಯಾಗಿತ್ತು. ಜಾಮೀನು ಮೇಲೆ ಬಿಡುಗಡೆಗೊಂಡ ಬಳಿಕ ದರ್ಶನ್ ಮತ್ತೆ ಸಿನಿಮಾದ ಕೆಲಸಕ್ಕೆ ಮರಳಿದ್ದಾರೆ. ಈಗ ‘ಡೆವಿಲ್’ ಟೀಸರ್ ಅನ್ನು ಅವರ ಹುಟ್ಟುಹಬ್ಬದ ದಿನವೇ ಬಿಡುಗಡೆ ಮಾಡುವ ಮೂಲಕ, ಅಭಿಮಾನಿಗಳಿಗೆ ಅಚ್ಚರಿ ಉಂಟುಮಾಡಲು ಚಿತ್ರತಂಡ ಸಜ್ಜಾಗಿದೆ.

ಅಭಿಮಾನಿಗಳಿಗೆ ದರ್ಶನ್ ಧನ್ಯವಾದ
ದರ್ಶನ್ ವೈಯಕ್ತಿಕ ಜೀವನದಲ್ಲಿ ಹಲವು ಏಳು-ಬೀಳುಗಳು ಎದುರಿಸಿದರೂ, ಅಭಿಮಾನಿಗಳು ಸದಾ ಅವರೊಂದಿಗೆ ನಿಂತಿದ್ದಾರೆ. ಜೈಲಿಗೆ ತೆರಳಿದಾಗ ಅವರ ಬೆಂಬಲಿಗರು ನೋವಿನಲ್ಲಿದ್ದರು, ಆದರೆ ಈಗ ಮತ್ತೆ ಹೊಸ ಹಾದಿಯಲ್ಲಿ ಅವರ ಪಯಣ ಪ್ರಾರಂಭವಾಗಿದೆ. ಈ ಎಲ್ಲ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದ ಹೇಳಿರುವ ದರ್ಶನ್, ‘ಡೆವಿಲ್’ ಟೀಸರ್ ಮೂಲಕ ಹೊಸ ಚಾಪ್ಟರ್ ಆರಂಭಿಸೋದು ಖಚಿತ!

nazeer ahamad

Recent Posts

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

13 minutes ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 day ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 day ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

1 day ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago