ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ ಮುಂದೆಗಡೆ ಇರುವ ಚರಂಡಿಯು ಕೊಳಚೆಯಿಂದ ತುಂಬಿಕೊಂಡು ಸೊಳ್ಳೆಗಳು ಹುಟ್ಟಿ ಡೆಂಗ್ಯೂ, ಮಲೇರಿಯಾ ಎಂಬ ಮಹಾಮಾರಿ ರೋಗಗಳಿಗೆ ಆಹ್ವಾನ ಕೊಡುತ್ತಿವೆ. ಪಿಡಿಓ ರವರು ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆ. ಸುಮಾರು ದಿನಗಳಿಂದ ಚರಂಡಿಗಳು ತುಂಬಿ ದುರ್ವಾಸನೆಯಿಂದ ಪರದಾಡುವ ಪರಿಸ್ಥಿತಿ ಎದುರಾಗಿದೆ.ಹಾಗೂ ದಿನಾಲೂ ಪಂಚಾಯತಿಗೆ ಸಾರ್ವಜನಿಕರು ಬರುತ್ತಾರೆ. ಬಂದ ಸಾರ್ವಜನಿಕರು ಚರಂಡಿ ದುರ್ವಾಸನೆ ಅರಿತು ಪಿಡಿಓ ಗೆ ಹಿಡಿಶಾಪ ಹಾಕಿ ಹೋಗುತ್ತಾರೆ. ಅಲ್ಲಿನ ಸುತ್ತಲಿನ ಜನರಿಗೆ ಊಟ ಮಾಡಲು ಸಹ ತೊಂದರೆ ಅನುಭವಿಸುತ್ತಿದ್ದಾರೆ. ಸ್ವಚ್ಛತೆ ಇಲ್ಲದ ಕಾರಣ ಡೆಂಗ್ಯೂ,ಮಲೇರಿಯಾ ಎಂಬ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಸ್ವಚ್ಛತೆಯ ಬಗ್ಗೆ ಅರಿವೇ ಇರದ ಗ್ರಾಮ ಪಂಚಾಯತಿಯ ಪಿಡಿಓ ಎಂ ಎನ್ ಪಾಟೀಲ್ ಪಂಚಾಯತಿಯಲ್ಲಿ ಹಣ ಹೊಡೆಯುವ ಕೆಲಸ ಬಿಟ್ಟರೆ ಯಾವ ಕೆಲಸ ಕೂಡ ನಡೆಯುತ್ತಿಲ್ಲ ಎಂಬುದು ಅಲ್ಲಿನ ಜನರ ಪಿಸುಮಾತಾಗಿದೆ. ಗ್ರಾಮದ ಸ್ವಚ್ಛತೆ ಬಗ್ಗೆ ಅರಿವೇ ಇಲ್ಲದ ಪಿಡಿಓ ಹೇಗೆ ತಾನೇ ಗ್ರಾಮಗಳ ಅಭಿವೃದ್ದಿ ಮಾಡುತ್ತಾನೆ. ವರದಿ ಕಂಡ ಮೇಲಾದರೂ ಅಧಿಕಾರಿಗಳು ಸ್ವಚ್ಛತೆಗೆ ಮುಂದಾಗುವರೋ ಇಲ್ಲವೋ ಕಾದು ನೋಡೋಣ
ವರದಿ: ಸಂಗಪ್ಪ ಚಲವಾದಿ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…