Latest

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ ಮುಂದೆಗಡೆ ಇರುವ ಚರಂಡಿಯು ಕೊಳಚೆಯಿಂದ ತುಂಬಿಕೊಂಡು ಸೊಳ್ಳೆಗಳು ಹುಟ್ಟಿ ಡೆಂಗ್ಯೂ, ಮಲೇರಿಯಾ ಎಂಬ ಮಹಾಮಾರಿ ರೋಗಗಳಿಗೆ ಆಹ್ವಾನ ಕೊಡುತ್ತಿವೆ. ಪಿಡಿಓ ರವರು ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆ. ಸುಮಾರು ದಿನಗಳಿಂದ ಚರಂಡಿಗಳು ತುಂಬಿ ದುರ್ವಾಸನೆಯಿಂದ ಪರದಾಡುವ ಪರಿಸ್ಥಿತಿ ಎದುರಾಗಿದೆ.ಹಾಗೂ ದಿನಾಲೂ ಪಂಚಾಯತಿಗೆ ಸಾರ್ವಜನಿಕರು ಬರುತ್ತಾರೆ. ಬಂದ ಸಾರ್ವಜನಿಕರು ಚರಂಡಿ ದುರ್ವಾಸನೆ ಅರಿತು ಪಿಡಿಓ ಗೆ ಹಿಡಿಶಾಪ ಹಾಕಿ ಹೋಗುತ್ತಾರೆ. ಅಲ್ಲಿನ ಸುತ್ತಲಿನ ಜನರಿಗೆ ಊಟ ಮಾಡಲು ಸಹ ತೊಂದರೆ ಅನುಭವಿಸುತ್ತಿದ್ದಾರೆ. ಸ್ವಚ್ಛತೆ ಇಲ್ಲದ ಕಾರಣ ಡೆಂಗ್ಯೂ,ಮಲೇರಿಯಾ ಎಂಬ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಸ್ವಚ್ಛತೆಯ ಬಗ್ಗೆ ಅರಿವೇ ಇರದ ಗ್ರಾಮ ಪಂಚಾಯತಿಯ ಪಿಡಿಓ ಎಂ ಎನ್ ಪಾಟೀಲ್ ಪಂಚಾಯತಿಯಲ್ಲಿ ಹಣ ಹೊಡೆಯುವ ಕೆಲಸ ಬಿಟ್ಟರೆ ಯಾವ ಕೆಲಸ ಕೂಡ ನಡೆಯುತ್ತಿಲ್ಲ ಎಂಬುದು ಅಲ್ಲಿನ ಜನರ ಪಿಸುಮಾತಾಗಿದೆ. ಗ್ರಾಮದ ಸ್ವಚ್ಛತೆ ಬಗ್ಗೆ ಅರಿವೇ ಇಲ್ಲದ ಪಿಡಿಓ ಹೇಗೆ ತಾನೇ ಗ್ರಾಮಗಳ ಅಭಿವೃದ್ದಿ ಮಾಡುತ್ತಾನೆ. ವರದಿ ಕಂಡ ಮೇಲಾದರೂ ಅಧಿಕಾರಿಗಳು ಸ್ವಚ್ಛತೆಗೆ ಮುಂದಾಗುವರೋ ಇಲ್ಲವೋ ಕಾದು ನೋಡೋಣ

ವರದಿ: ಸಂಗಪ್ಪ ಚಲವಾದಿ
ಭ್ರಷ್ಟರ ಬೇಟೆ

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

17 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

18 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

18 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

20 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

21 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

24 hours ago