ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ ಮುಂದೆಗಡೆ ಇರುವ ಚರಂಡಿಯು ಕೊಳಚೆಯಿಂದ ತುಂಬಿಕೊಂಡು ಸೊಳ್ಳೆಗಳು ಹುಟ್ಟಿ ಡೆಂಗ್ಯೂ, ಮಲೇರಿಯಾ ಎಂಬ ಮಹಾಮಾರಿ ರೋಗಗಳಿಗೆ ಆಹ್ವಾನ ಕೊಡುತ್ತಿವೆ. ಪಿಡಿಓ ರವರು ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆ. ಸುಮಾರು ದಿನಗಳಿಂದ ಚರಂಡಿಗಳು ತುಂಬಿ ದುರ್ವಾಸನೆಯಿಂದ ಪರದಾಡುವ ಪರಿಸ್ಥಿತಿ ಎದುರಾಗಿದೆ.ಹಾಗೂ ದಿನಾಲೂ ಪಂಚಾಯತಿಗೆ ಸಾರ್ವಜನಿಕರು ಬರುತ್ತಾರೆ. ಬಂದ ಸಾರ್ವಜನಿಕರು ಚರಂಡಿ ದುರ್ವಾಸನೆ ಅರಿತು ಪಿಡಿಓ ಗೆ ಹಿಡಿಶಾಪ ಹಾಕಿ ಹೋಗುತ್ತಾರೆ. ಅಲ್ಲಿನ ಸುತ್ತಲಿನ ಜನರಿಗೆ ಊಟ ಮಾಡಲು ಸಹ ತೊಂದರೆ ಅನುಭವಿಸುತ್ತಿದ್ದಾರೆ. ಸ್ವಚ್ಛತೆ ಇಲ್ಲದ ಕಾರಣ ಡೆಂಗ್ಯೂ,ಮಲೇರಿಯಾ ಎಂಬ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಸ್ವಚ್ಛತೆಯ ಬಗ್ಗೆ ಅರಿವೇ ಇರದ ಗ್ರಾಮ ಪಂಚಾಯತಿಯ ಪಿಡಿಓ ಎಂ ಎನ್ ಪಾಟೀಲ್ ಪಂಚಾಯತಿಯಲ್ಲಿ ಹಣ ಹೊಡೆಯುವ ಕೆಲಸ ಬಿಟ್ಟರೆ ಯಾವ ಕೆಲಸ ಕೂಡ ನಡೆಯುತ್ತಿಲ್ಲ ಎಂಬುದು ಅಲ್ಲಿನ ಜನರ ಪಿಸುಮಾತಾಗಿದೆ. ಗ್ರಾಮದ ಸ್ವಚ್ಛತೆ ಬಗ್ಗೆ ಅರಿವೇ ಇಲ್ಲದ ಪಿಡಿಓ ಹೇಗೆ ತಾನೇ ಗ್ರಾಮಗಳ ಅಭಿವೃದ್ದಿ ಮಾಡುತ್ತಾನೆ. ವರದಿ ಕಂಡ ಮೇಲಾದರೂ ಅಧಿಕಾರಿಗಳು ಸ್ವಚ್ಛತೆಗೆ ಮುಂದಾಗುವರೋ ಇಲ್ಲವೋ ಕಾದು ನೋಡೋಣ
ವರದಿ: ಸಂಗಪ್ಪ ಚಲವಾದಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…