Latest

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ ಮುಂದೆಗಡೆ ಇರುವ ಚರಂಡಿಯು ಕೊಳಚೆಯಿಂದ ತುಂಬಿಕೊಂಡು ಸೊಳ್ಳೆಗಳು ಹುಟ್ಟಿ ಡೆಂಗ್ಯೂ, ಮಲೇರಿಯಾ ಎಂಬ ಮಹಾಮಾರಿ ರೋಗಗಳಿಗೆ ಆಹ್ವಾನ ಕೊಡುತ್ತಿವೆ. ಪಿಡಿಓ ರವರು ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆ. ಸುಮಾರು ದಿನಗಳಿಂದ ಚರಂಡಿಗಳು ತುಂಬಿ ದುರ್ವಾಸನೆಯಿಂದ ಪರದಾಡುವ ಪರಿಸ್ಥಿತಿ ಎದುರಾಗಿದೆ.ಹಾಗೂ ದಿನಾಲೂ ಪಂಚಾಯತಿಗೆ ಸಾರ್ವಜನಿಕರು ಬರುತ್ತಾರೆ. ಬಂದ ಸಾರ್ವಜನಿಕರು ಚರಂಡಿ ದುರ್ವಾಸನೆ ಅರಿತು ಪಿಡಿಓ ಗೆ ಹಿಡಿಶಾಪ ಹಾಕಿ ಹೋಗುತ್ತಾರೆ. ಅಲ್ಲಿನ ಸುತ್ತಲಿನ ಜನರಿಗೆ ಊಟ ಮಾಡಲು ಸಹ ತೊಂದರೆ ಅನುಭವಿಸುತ್ತಿದ್ದಾರೆ. ಸ್ವಚ್ಛತೆ ಇಲ್ಲದ ಕಾರಣ ಡೆಂಗ್ಯೂ,ಮಲೇರಿಯಾ ಎಂಬ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಸ್ವಚ್ಛತೆಯ ಬಗ್ಗೆ ಅರಿವೇ ಇರದ ಗ್ರಾಮ ಪಂಚಾಯತಿಯ ಪಿಡಿಓ ಎಂ ಎನ್ ಪಾಟೀಲ್ ಪಂಚಾಯತಿಯಲ್ಲಿ ಹಣ ಹೊಡೆಯುವ ಕೆಲಸ ಬಿಟ್ಟರೆ ಯಾವ ಕೆಲಸ ಕೂಡ ನಡೆಯುತ್ತಿಲ್ಲ ಎಂಬುದು ಅಲ್ಲಿನ ಜನರ ಪಿಸುಮಾತಾಗಿದೆ. ಗ್ರಾಮದ ಸ್ವಚ್ಛತೆ ಬಗ್ಗೆ ಅರಿವೇ ಇಲ್ಲದ ಪಿಡಿಓ ಹೇಗೆ ತಾನೇ ಗ್ರಾಮಗಳ ಅಭಿವೃದ್ದಿ ಮಾಡುತ್ತಾನೆ. ವರದಿ ಕಂಡ ಮೇಲಾದರೂ ಅಧಿಕಾರಿಗಳು ಸ್ವಚ್ಛತೆಗೆ ಮುಂದಾಗುವರೋ ಇಲ್ಲವೋ ಕಾದು ನೋಡೋಣ

ವರದಿ: ಸಂಗಪ್ಪ ಚಲವಾದಿ
ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

12 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

16 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

16 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

16 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

16 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

21 hours ago