Latest

ರೆಸ್ಟೋರೆಂಟ್ ನಲ್ಲಿ ನೋ ಎಂಟ್ರಿ : ತುಂಡು ತುಂಡು ಬಟ್ಟೆ ಹಾಕಿದರೆ ಮಾತ್ರ ಪ್ರವೇಶ ಎಂದ ರೆಸ್ಟೋರೆಂಟ್ ಸಿಬ್ಬಂದಿ!

ನವದೆಹಲಿ: ಡ್ರೆಸ್ ಕೋಡ್ ನಿಯಮವನ್ನು ನೆಪವಿಟ್ಟು, ದೆಹಲಿಯೊಂದು ರೆಸ್ಟೋರೆಂಟ್‌ ದಂಪತಿಗೆ ಪ್ರವೇಶ ನಿರಾಕರಿಸಿದ ಘಟನೆ ಭಾರೀ ವಿವಾದಕ್ಕೆ ಕಾರಣವಾಗಿದೆ. ವಿಶೇಷವಾಗಿ ಮಹಿಳೆ ಚೂಡಿದಾರ್ ಧರಿಸಿದ್ದಕ್ಕಾಗಿ ಒಳಗೆ ಬಿಡದಿರುವ ವಿಡಿಯೋವೈರಲ್‌ ಆಗಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಆಗಸ್ಟ್‌ 3ರಂದು ಪಿತಂಪುರ ಪ್ರದೇಶದಲ್ಲಿರುವ ಟುಬಾಟ ಬಾರ್ ಅಂಡ್‌ ರೆಸ್ಟೋರೆಂಟ್‌ನಲ್ಲಿ ನಡೆದಿದೆ. ವಿಡಿಯೋದಲ್ಲಿ, ಪುರುಷ ಟೀ-ಶರ್ಟ್ ಮತ್ತು ಪ್ಯಾಂಟ್ ಧರಿಸಿದ್ದರೆ, ಮಹಿಳೆ ಸಲ್ವಾರ್-ಕಮೀಜ್ ತೊಟ್ಟಿದ್ದಾರೆ. ಆದರೆ, ರೆಸ್ಟೋರೆಂಟ್ ಸಿಬ್ಬಂದಿ ‘ತುಂಡು ತುಂಡು ಬಟ್ಟೆ ಹಾಕಿದರೆ ಮಾತ್ರ ಪ್ರವೇಶ’ ಎಂದು ಹೇಳಿ, ದಂಪತಿಯನ್ನು ಒಳಗೆ ಬಿಡಲಿಲ್ಲ ಎಂಬ ಆರೋಪ ಬಂದಿದೆ.

ವಿಡಿಯೋದಲ್ಲಿ ವ್ಯಕ್ತಿಯೊಬ್ಬರು, “ಪಾಶ್ಚಿಮಾತ್ಯ ಉಡುಗೆ ತೊಟ್ಟವರಿಗೆ ಎಂಟ್ರಿ, ಆದರೆ ನಮ್ಮ ದೇಸಿ ಉಡುಗೆ ತೊಟ್ಟವರಿಗೆ ನೋ ಎಂಟ್ರಿ ಯಾಕೆ? ಶಾರ್ಟ್ಸ್ ಹಾಕಿದವರಿಗೆ ಒಳಗೆ ಬಿಡ್ತೀರ, ಚೂಡಿದಾರ್ ಹಾಕಿದವರಿಗೆ ಬೇಡ ಅಂತೀರ” ಎಂದು ಪ್ರಶ್ನಿಸಿರುವುದು ಕೇಳಿಸಿತು. ಇನ್ನೊಬ್ಬರು ತಮಾಷೆಯಾಗಿ, “ರಾಷ್ಟ್ರಪತಿ ಅಥವಾ ದೆಹಲಿ ಸಿಎಂ ಸೀರೆ ಧರಿಸಿ ಬಂದರೂ ಒಳಗೆ ಬಿಡ್ತೀರಾ?” ಎಂದು ಕೇಳಿರುವುದು ಸಹ ವೈರಲ್‌ ಆಗಿದೆ.

ಘಟನೆಯ ಬಳಿಕ, ದೆಹಲಿ ಸಚಿವ ಕಪಿಲ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿ, “ಈಗಿನಿಂದ ಡ್ರೆಸ್ ಕೋಡ್ ಆಧಾರಿತ ನಿರ್ಬಂಧಗಳನ್ನು ಕೈಬಿಡಲಾಗುತ್ತದೆ. ಭಾರತೀಯ ಉಡುಗೆ ತೊಟ್ಟವರಿಗೂ ಸಂಪೂರ್ಣ ಸ್ವಾಗತ” ಎಂದು ಹೇಳಿದ್ದಾರೆ.

ಸಚಿವರ ಮಧ್ಯಸ್ಥಿಕೆ ಮತ್ತು ಜನರ ಒತ್ತಡದ ಬಳಿಕ, ರೆಸ್ಟೋರೆಂಟ್ ಆಡಳಿತ ಕ್ಷಮೆ ಕೇಳಿದ್ದು, ಮುಂದಿನ ದಿನಗಳಲ್ಲಿ ಯಾವುದೇ ಉಡುಗೆ ಆಧಾರದ ಮೇಲೆ ಗ್ರಾಹಕರಿಗೆ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ.

ಈ ಘಟನೆ ಡ್ರೆಸ್ ಕೋಡ್‌ಗಳನ್ನು ಹೇಗೆ ಜಾರಿಗೊಳಿಸಬೇಕು ಎಂಬ ಪ್ರಶ್ನೆಯನ್ನು ಮತ್ತೆ ಎಬ್ಬಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹಲವರು, “ಉಡುಗೆ ವ್ಯಕ್ತಿತ್ವವನ್ನು ಅಳೆಯುವ ಮಾಪಕವಾಗಬಾರದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago