Latest

ರೆಸ್ಟೋರೆಂಟ್ ನಲ್ಲಿ ನೋ ಎಂಟ್ರಿ : ತುಂಡು ತುಂಡು ಬಟ್ಟೆ ಹಾಕಿದರೆ ಮಾತ್ರ ಪ್ರವೇಶ ಎಂದ ರೆಸ್ಟೋರೆಂಟ್ ಸಿಬ್ಬಂದಿ!

ನವದೆಹಲಿ: ಡ್ರೆಸ್ ಕೋಡ್ ನಿಯಮವನ್ನು ನೆಪವಿಟ್ಟು, ದೆಹಲಿಯೊಂದು ರೆಸ್ಟೋರೆಂಟ್‌ ದಂಪತಿಗೆ ಪ್ರವೇಶ ನಿರಾಕರಿಸಿದ ಘಟನೆ ಭಾರೀ ವಿವಾದಕ್ಕೆ ಕಾರಣವಾಗಿದೆ. ವಿಶೇಷವಾಗಿ ಮಹಿಳೆ ಚೂಡಿದಾರ್ ಧರಿಸಿದ್ದಕ್ಕಾಗಿ ಒಳಗೆ ಬಿಡದಿರುವ ವಿಡಿಯೋವೈರಲ್‌ ಆಗಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಆಗಸ್ಟ್‌ 3ರಂದು ಪಿತಂಪುರ ಪ್ರದೇಶದಲ್ಲಿರುವ ಟುಬಾಟ ಬಾರ್ ಅಂಡ್‌ ರೆಸ್ಟೋರೆಂಟ್‌ನಲ್ಲಿ ನಡೆದಿದೆ. ವಿಡಿಯೋದಲ್ಲಿ, ಪುರುಷ ಟೀ-ಶರ್ಟ್ ಮತ್ತು ಪ್ಯಾಂಟ್ ಧರಿಸಿದ್ದರೆ, ಮಹಿಳೆ ಸಲ್ವಾರ್-ಕಮೀಜ್ ತೊಟ್ಟಿದ್ದಾರೆ. ಆದರೆ, ರೆಸ್ಟೋರೆಂಟ್ ಸಿಬ್ಬಂದಿ ‘ತುಂಡು ತುಂಡು ಬಟ್ಟೆ ಹಾಕಿದರೆ ಮಾತ್ರ ಪ್ರವೇಶ’ ಎಂದು ಹೇಳಿ, ದಂಪತಿಯನ್ನು ಒಳಗೆ ಬಿಡಲಿಲ್ಲ ಎಂಬ ಆರೋಪ ಬಂದಿದೆ.

ವಿಡಿಯೋದಲ್ಲಿ ವ್ಯಕ್ತಿಯೊಬ್ಬರು, “ಪಾಶ್ಚಿಮಾತ್ಯ ಉಡುಗೆ ತೊಟ್ಟವರಿಗೆ ಎಂಟ್ರಿ, ಆದರೆ ನಮ್ಮ ದೇಸಿ ಉಡುಗೆ ತೊಟ್ಟವರಿಗೆ ನೋ ಎಂಟ್ರಿ ಯಾಕೆ? ಶಾರ್ಟ್ಸ್ ಹಾಕಿದವರಿಗೆ ಒಳಗೆ ಬಿಡ್ತೀರ, ಚೂಡಿದಾರ್ ಹಾಕಿದವರಿಗೆ ಬೇಡ ಅಂತೀರ” ಎಂದು ಪ್ರಶ್ನಿಸಿರುವುದು ಕೇಳಿಸಿತು. ಇನ್ನೊಬ್ಬರು ತಮಾಷೆಯಾಗಿ, “ರಾಷ್ಟ್ರಪತಿ ಅಥವಾ ದೆಹಲಿ ಸಿಎಂ ಸೀರೆ ಧರಿಸಿ ಬಂದರೂ ಒಳಗೆ ಬಿಡ್ತೀರಾ?” ಎಂದು ಕೇಳಿರುವುದು ಸಹ ವೈರಲ್‌ ಆಗಿದೆ.

ಘಟನೆಯ ಬಳಿಕ, ದೆಹಲಿ ಸಚಿವ ಕಪಿಲ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿ, “ಈಗಿನಿಂದ ಡ್ರೆಸ್ ಕೋಡ್ ಆಧಾರಿತ ನಿರ್ಬಂಧಗಳನ್ನು ಕೈಬಿಡಲಾಗುತ್ತದೆ. ಭಾರತೀಯ ಉಡುಗೆ ತೊಟ್ಟವರಿಗೂ ಸಂಪೂರ್ಣ ಸ್ವಾಗತ” ಎಂದು ಹೇಳಿದ್ದಾರೆ.

ಸಚಿವರ ಮಧ್ಯಸ್ಥಿಕೆ ಮತ್ತು ಜನರ ಒತ್ತಡದ ಬಳಿಕ, ರೆಸ್ಟೋರೆಂಟ್ ಆಡಳಿತ ಕ್ಷಮೆ ಕೇಳಿದ್ದು, ಮುಂದಿನ ದಿನಗಳಲ್ಲಿ ಯಾವುದೇ ಉಡುಗೆ ಆಧಾರದ ಮೇಲೆ ಗ್ರಾಹಕರಿಗೆ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ.

ಈ ಘಟನೆ ಡ್ರೆಸ್ ಕೋಡ್‌ಗಳನ್ನು ಹೇಗೆ ಜಾರಿಗೊಳಿಸಬೇಕು ಎಂಬ ಪ್ರಶ್ನೆಯನ್ನು ಮತ್ತೆ ಎಬ್ಬಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹಲವರು, “ಉಡುಗೆ ವ್ಯಕ್ತಿತ್ವವನ್ನು ಅಳೆಯುವ ಮಾಪಕವಾಗಬಾರದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

8 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

14 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

14 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago