Latest

ಮಧ್ಯವರ್ತಿಗಳ ಸಂಪರ್ಕ ಬೇಡ,ನೇರವಾಗಿ ಕಛೇರಿಯ ಸಂಪರ್ಕ ಇಟ್ಟುಕೊಳ್ಳಿ-ಶಂಕರ್ ಗೌಡಿ

ಮುಂಡಗೋಡ: ತಾಲೂಕಿನ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಪಡೆಯಲು ಹಾಗೂ ನಿಮ್ಮ ಅರ್ಜಿಗಳಿಗೆ ಸಂಬಂಧಿಸಿದಂತೆ ಯಾವುದೇ ಮಧ್ಯವರ್ತಿಗಳನ್ನು ಅಥವಾ ಏಜೆಂಟರನ್ನು ಸಂಪರ್ಕಿಸಬೇಡಿ ಎಂದು ತಹಶೀಲ್ದಾರ್ ಶಂಕರ್ ಗೌಡಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ನೇರವಾಗಿ ಸಂಬಂಧಿಸಿದ ಕೌಂಟರ್ ಗಳಲ್ಲಿ ದಾಖಲೆಗಳ ಸಹಿತ ಅರ್ಜಿ ಸಲ್ಲಿಸಿ .
ಅರ್ಜಿಗಳನ್ನು ಟಪಾಲು ವಿಭಾಗದಲ್ಲಿ ನೇರವಾಗಿ ಸಲ್ಲಿಸಿ.ನಿಮ್ಮ ಕಡೆ ಸ್ವೀಕೃತ ಪ್ರತಿ ಇಟ್ಟುಕೊಳ್ಳಿ.
ನಿಮ್ಮ ಕೆಲಸಕ್ಕೆ, ದೂರುಗಳಿಗೆ ನೇರವಾಗಿ ತಹಶೀಲ್ದಾರ್ ಅಥವಾ ತಹಶೀಲ್ದಾರ್ ಕಚೇರಿ ಸಿಬ್ಬಂದಿಯನ್ನು ಭೇಟಿ ಆಗಿ.
ಅರ್ಜಿ ಅಥವಾ ಕಂದಾಯ ಇಲಾಖೆ ಸೇವೆಯ ಕುರಿತು ತಹಶೀಲ್ದಾರ್ ಹತ್ತಿರ ವಿಚಾರಿಸಲು ಬರುವಾಗ ಅರ್ಜಿಯ ಸ್ವೀಕೃತ ಪ್ರತಿ, ದಾಖಲೆಗಳನ್ನು ತೆಗೆದುಕೊಂಡು ಬನ್ನಿ
ಮಧ್ಯವರ್ತಿಗಳು ಅಥವಾ ಅನಧಿಕೃತ ಏಜೆಂಟರು ವಿವಿಧ ರೂಪಗಳಲ್ಲಿ ಇದ್ದಾರೆ. ಅವರಿಂದ ದೂರ ಇದ್ದು, ನೇರವಾಗಿ ಕಂದಾಯ ಇಲಾಖೆಯ ಸಿಬ್ಬಂದಿಗಳ ಮೂಲಕವೇ ಇಲಾಖೆಯ ಸೇವೆಗಳನ್ನು ಪಡೆಯುವಂತೆ ಮನವಿ ಮಾಡಿದ್ದಾರೆ.
ಕಳೆದ ನಾಲ್ಕು ತಿಂಗಳ ಹಿಂದೆ ಮುಂಡಗೋಡದ ತಹಸೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡ ಇವರು ಇಲಾಖೆಯಲ್ಲಿ ಕೇಳಿ ಬರುತ್ತಿದ್ದ ಬ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪ್ರಯತ್ನ ಪಡುತ್ತಿದ್ದಾರೆ.
ಕಳೆದ ಕೆಲದಿನಗಳ ಹಿಂದೆ ‘ಮುಂಡಗೋಡ ಮಿಡಿಯಾ ಎಂಡ್ ಆಫಿಸರ್ಸ’ ಎಂಬ ವ್ಯಾಟ್ಸಪ್ ಗ್ರೂಪಿನಲ್ಲಿ ನಾನು ನನ್ನ ಯಾವುದೇ ಕೆಳಗಿನ ಸಿಬ್ಬಂದಿ ಕಡೆಯಿಂದ ಯಾವುದೇ ರೀತಿಯ ಹಣ ತೆಗೆದುಕೊಳ್ಳುವುದಿಲ್ಲ.ಇಲಾಖೆಯ ಯಾವುದೇ ಸಿಬ್ಬಂದಿ ನನ್ನ ಹೆಸರು ಹೇಳಿ ಸಾರ್ವಜನಿಕರಿಂದ ಹಣ ತೆಗೆದುಕೊಳ್ಳುತ್ತಿದ್ದರೆ ತಮ್ಮ ಗಮನಕ್ಕೆ ತರುವಂತೆಯೂ ಸಹ ಪ್ರಕಟಣೆ ನೀಡಿದ್ದರು.
ಮುಂಡಗೋಡದ ಪ್ರತಿಯೊಂದು ಇಲಾಖೆಯಲ್ಲಿಯೂ ಸಹ ಇಂತಹ ದಕ್ಷ ಅಧಿಕಾರಿಗಳು ಇದ್ದರೆ ಸರ್ಕಾರದ ಯೋಜನೆಗಳು ಸಾಮಾನ್ಯ ಜನರಿಗೆ ನೇರವಾಗಿ ತಲುಪಬಹುದು.ಮತ್ತು ಭ್ರಷ್ಟಾಚಾರ ಮುಕ್ತ ತಾಲೂಕನ್ನಾಗಿ ಮಾಡಬಹುದು ಎಂದು ಸಾರ್ವಜನಿಕರು ಮಾತನಾಡುತ್ತಿರುವುದು ಕಂಡುಬರುತ್ತಿದೆ.
ವರದ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

22 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

22 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

22 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 days ago