Latest

ಮಧ್ಯವರ್ತಿಗಳ ಸಂಪರ್ಕ ಬೇಡ,ನೇರವಾಗಿ ಕಛೇರಿಯ ಸಂಪರ್ಕ ಇಟ್ಟುಕೊಳ್ಳಿ-ಶಂಕರ್ ಗೌಡಿ

ಮುಂಡಗೋಡ: ತಾಲೂಕಿನ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಪಡೆಯಲು ಹಾಗೂ ನಿಮ್ಮ ಅರ್ಜಿಗಳಿಗೆ ಸಂಬಂಧಿಸಿದಂತೆ ಯಾವುದೇ ಮಧ್ಯವರ್ತಿಗಳನ್ನು ಅಥವಾ ಏಜೆಂಟರನ್ನು ಸಂಪರ್ಕಿಸಬೇಡಿ ಎಂದು ತಹಶೀಲ್ದಾರ್ ಶಂಕರ್ ಗೌಡಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ನೇರವಾಗಿ ಸಂಬಂಧಿಸಿದ ಕೌಂಟರ್ ಗಳಲ್ಲಿ ದಾಖಲೆಗಳ ಸಹಿತ ಅರ್ಜಿ ಸಲ್ಲಿಸಿ .
ಅರ್ಜಿಗಳನ್ನು ಟಪಾಲು ವಿಭಾಗದಲ್ಲಿ ನೇರವಾಗಿ ಸಲ್ಲಿಸಿ.ನಿಮ್ಮ ಕಡೆ ಸ್ವೀಕೃತ ಪ್ರತಿ ಇಟ್ಟುಕೊಳ್ಳಿ.
ನಿಮ್ಮ ಕೆಲಸಕ್ಕೆ, ದೂರುಗಳಿಗೆ ನೇರವಾಗಿ ತಹಶೀಲ್ದಾರ್ ಅಥವಾ ತಹಶೀಲ್ದಾರ್ ಕಚೇರಿ ಸಿಬ್ಬಂದಿಯನ್ನು ಭೇಟಿ ಆಗಿ.
ಅರ್ಜಿ ಅಥವಾ ಕಂದಾಯ ಇಲಾಖೆ ಸೇವೆಯ ಕುರಿತು ತಹಶೀಲ್ದಾರ್ ಹತ್ತಿರ ವಿಚಾರಿಸಲು ಬರುವಾಗ ಅರ್ಜಿಯ ಸ್ವೀಕೃತ ಪ್ರತಿ, ದಾಖಲೆಗಳನ್ನು ತೆಗೆದುಕೊಂಡು ಬನ್ನಿ
ಮಧ್ಯವರ್ತಿಗಳು ಅಥವಾ ಅನಧಿಕೃತ ಏಜೆಂಟರು ವಿವಿಧ ರೂಪಗಳಲ್ಲಿ ಇದ್ದಾರೆ. ಅವರಿಂದ ದೂರ ಇದ್ದು, ನೇರವಾಗಿ ಕಂದಾಯ ಇಲಾಖೆಯ ಸಿಬ್ಬಂದಿಗಳ ಮೂಲಕವೇ ಇಲಾಖೆಯ ಸೇವೆಗಳನ್ನು ಪಡೆಯುವಂತೆ ಮನವಿ ಮಾಡಿದ್ದಾರೆ.
ಕಳೆದ ನಾಲ್ಕು ತಿಂಗಳ ಹಿಂದೆ ಮುಂಡಗೋಡದ ತಹಸೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡ ಇವರು ಇಲಾಖೆಯಲ್ಲಿ ಕೇಳಿ ಬರುತ್ತಿದ್ದ ಬ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪ್ರಯತ್ನ ಪಡುತ್ತಿದ್ದಾರೆ.
ಕಳೆದ ಕೆಲದಿನಗಳ ಹಿಂದೆ ‘ಮುಂಡಗೋಡ ಮಿಡಿಯಾ ಎಂಡ್ ಆಫಿಸರ್ಸ’ ಎಂಬ ವ್ಯಾಟ್ಸಪ್ ಗ್ರೂಪಿನಲ್ಲಿ ನಾನು ನನ್ನ ಯಾವುದೇ ಕೆಳಗಿನ ಸಿಬ್ಬಂದಿ ಕಡೆಯಿಂದ ಯಾವುದೇ ರೀತಿಯ ಹಣ ತೆಗೆದುಕೊಳ್ಳುವುದಿಲ್ಲ.ಇಲಾಖೆಯ ಯಾವುದೇ ಸಿಬ್ಬಂದಿ ನನ್ನ ಹೆಸರು ಹೇಳಿ ಸಾರ್ವಜನಿಕರಿಂದ ಹಣ ತೆಗೆದುಕೊಳ್ಳುತ್ತಿದ್ದರೆ ತಮ್ಮ ಗಮನಕ್ಕೆ ತರುವಂತೆಯೂ ಸಹ ಪ್ರಕಟಣೆ ನೀಡಿದ್ದರು.
ಮುಂಡಗೋಡದ ಪ್ರತಿಯೊಂದು ಇಲಾಖೆಯಲ್ಲಿಯೂ ಸಹ ಇಂತಹ ದಕ್ಷ ಅಧಿಕಾರಿಗಳು ಇದ್ದರೆ ಸರ್ಕಾರದ ಯೋಜನೆಗಳು ಸಾಮಾನ್ಯ ಜನರಿಗೆ ನೇರವಾಗಿ ತಲುಪಬಹುದು.ಮತ್ತು ಭ್ರಷ್ಟಾಚಾರ ಮುಕ್ತ ತಾಲೂಕನ್ನಾಗಿ ಮಾಡಬಹುದು ಎಂದು ಸಾರ್ವಜನಿಕರು ಮಾತನಾಡುತ್ತಿರುವುದು ಕಂಡುಬರುತ್ತಿದೆ.
ವರದ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago