Latest

ಮಧ್ಯವರ್ತಿಗಳ ಸಂಪರ್ಕ ಬೇಡ,ನೇರವಾಗಿ ಕಛೇರಿಯ ಸಂಪರ್ಕ ಇಟ್ಟುಕೊಳ್ಳಿ-ಶಂಕರ್ ಗೌಡಿ

ಮುಂಡಗೋಡ: ತಾಲೂಕಿನ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಪಡೆಯಲು ಹಾಗೂ ನಿಮ್ಮ ಅರ್ಜಿಗಳಿಗೆ ಸಂಬಂಧಿಸಿದಂತೆ ಯಾವುದೇ ಮಧ್ಯವರ್ತಿಗಳನ್ನು ಅಥವಾ ಏಜೆಂಟರನ್ನು ಸಂಪರ್ಕಿಸಬೇಡಿ ಎಂದು ತಹಶೀಲ್ದಾರ್ ಶಂಕರ್ ಗೌಡಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ನೇರವಾಗಿ ಸಂಬಂಧಿಸಿದ ಕೌಂಟರ್ ಗಳಲ್ಲಿ ದಾಖಲೆಗಳ ಸಹಿತ ಅರ್ಜಿ ಸಲ್ಲಿಸಿ .
ಅರ್ಜಿಗಳನ್ನು ಟಪಾಲು ವಿಭಾಗದಲ್ಲಿ ನೇರವಾಗಿ ಸಲ್ಲಿಸಿ.ನಿಮ್ಮ ಕಡೆ ಸ್ವೀಕೃತ ಪ್ರತಿ ಇಟ್ಟುಕೊಳ್ಳಿ.
ನಿಮ್ಮ ಕೆಲಸಕ್ಕೆ, ದೂರುಗಳಿಗೆ ನೇರವಾಗಿ ತಹಶೀಲ್ದಾರ್ ಅಥವಾ ತಹಶೀಲ್ದಾರ್ ಕಚೇರಿ ಸಿಬ್ಬಂದಿಯನ್ನು ಭೇಟಿ ಆಗಿ.
ಅರ್ಜಿ ಅಥವಾ ಕಂದಾಯ ಇಲಾಖೆ ಸೇವೆಯ ಕುರಿತು ತಹಶೀಲ್ದಾರ್ ಹತ್ತಿರ ವಿಚಾರಿಸಲು ಬರುವಾಗ ಅರ್ಜಿಯ ಸ್ವೀಕೃತ ಪ್ರತಿ, ದಾಖಲೆಗಳನ್ನು ತೆಗೆದುಕೊಂಡು ಬನ್ನಿ
ಮಧ್ಯವರ್ತಿಗಳು ಅಥವಾ ಅನಧಿಕೃತ ಏಜೆಂಟರು ವಿವಿಧ ರೂಪಗಳಲ್ಲಿ ಇದ್ದಾರೆ. ಅವರಿಂದ ದೂರ ಇದ್ದು, ನೇರವಾಗಿ ಕಂದಾಯ ಇಲಾಖೆಯ ಸಿಬ್ಬಂದಿಗಳ ಮೂಲಕವೇ ಇಲಾಖೆಯ ಸೇವೆಗಳನ್ನು ಪಡೆಯುವಂತೆ ಮನವಿ ಮಾಡಿದ್ದಾರೆ.
ಕಳೆದ ನಾಲ್ಕು ತಿಂಗಳ ಹಿಂದೆ ಮುಂಡಗೋಡದ ತಹಸೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡ ಇವರು ಇಲಾಖೆಯಲ್ಲಿ ಕೇಳಿ ಬರುತ್ತಿದ್ದ ಬ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪ್ರಯತ್ನ ಪಡುತ್ತಿದ್ದಾರೆ.
ಕಳೆದ ಕೆಲದಿನಗಳ ಹಿಂದೆ ‘ಮುಂಡಗೋಡ ಮಿಡಿಯಾ ಎಂಡ್ ಆಫಿಸರ್ಸ’ ಎಂಬ ವ್ಯಾಟ್ಸಪ್ ಗ್ರೂಪಿನಲ್ಲಿ ನಾನು ನನ್ನ ಯಾವುದೇ ಕೆಳಗಿನ ಸಿಬ್ಬಂದಿ ಕಡೆಯಿಂದ ಯಾವುದೇ ರೀತಿಯ ಹಣ ತೆಗೆದುಕೊಳ್ಳುವುದಿಲ್ಲ.ಇಲಾಖೆಯ ಯಾವುದೇ ಸಿಬ್ಬಂದಿ ನನ್ನ ಹೆಸರು ಹೇಳಿ ಸಾರ್ವಜನಿಕರಿಂದ ಹಣ ತೆಗೆದುಕೊಳ್ಳುತ್ತಿದ್ದರೆ ತಮ್ಮ ಗಮನಕ್ಕೆ ತರುವಂತೆಯೂ ಸಹ ಪ್ರಕಟಣೆ ನೀಡಿದ್ದರು.
ಮುಂಡಗೋಡದ ಪ್ರತಿಯೊಂದು ಇಲಾಖೆಯಲ್ಲಿಯೂ ಸಹ ಇಂತಹ ದಕ್ಷ ಅಧಿಕಾರಿಗಳು ಇದ್ದರೆ ಸರ್ಕಾರದ ಯೋಜನೆಗಳು ಸಾಮಾನ್ಯ ಜನರಿಗೆ ನೇರವಾಗಿ ತಲುಪಬಹುದು.ಮತ್ತು ಭ್ರಷ್ಟಾಚಾರ ಮುಕ್ತ ತಾಲೂಕನ್ನಾಗಿ ಮಾಡಬಹುದು ಎಂದು ಸಾರ್ವಜನಿಕರು ಮಾತನಾಡುತ್ತಿರುವುದು ಕಂಡುಬರುತ್ತಿದೆ.
ವರದ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

9 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

9 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

22 hours ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

22 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

22 hours ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

22 hours ago