Latest

ಮಧ್ಯವರ್ತಿಗಳ ಸಂಪರ್ಕ ಬೇಡ,ನೇರವಾಗಿ ಕಛೇರಿಯ ಸಂಪರ್ಕ ಇಟ್ಟುಕೊಳ್ಳಿ-ಶಂಕರ್ ಗೌಡಿ

ಮುಂಡಗೋಡ: ತಾಲೂಕಿನ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಪಡೆಯಲು ಹಾಗೂ ನಿಮ್ಮ ಅರ್ಜಿಗಳಿಗೆ ಸಂಬಂಧಿಸಿದಂತೆ ಯಾವುದೇ ಮಧ್ಯವರ್ತಿಗಳನ್ನು ಅಥವಾ ಏಜೆಂಟರನ್ನು ಸಂಪರ್ಕಿಸಬೇಡಿ ಎಂದು ತಹಶೀಲ್ದಾರ್ ಶಂಕರ್ ಗೌಡಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ನೇರವಾಗಿ ಸಂಬಂಧಿಸಿದ ಕೌಂಟರ್ ಗಳಲ್ಲಿ ದಾಖಲೆಗಳ ಸಹಿತ ಅರ್ಜಿ ಸಲ್ಲಿಸಿ .
ಅರ್ಜಿಗಳನ್ನು ಟಪಾಲು ವಿಭಾಗದಲ್ಲಿ ನೇರವಾಗಿ ಸಲ್ಲಿಸಿ.ನಿಮ್ಮ ಕಡೆ ಸ್ವೀಕೃತ ಪ್ರತಿ ಇಟ್ಟುಕೊಳ್ಳಿ.
ನಿಮ್ಮ ಕೆಲಸಕ್ಕೆ, ದೂರುಗಳಿಗೆ ನೇರವಾಗಿ ತಹಶೀಲ್ದಾರ್ ಅಥವಾ ತಹಶೀಲ್ದಾರ್ ಕಚೇರಿ ಸಿಬ್ಬಂದಿಯನ್ನು ಭೇಟಿ ಆಗಿ.
ಅರ್ಜಿ ಅಥವಾ ಕಂದಾಯ ಇಲಾಖೆ ಸೇವೆಯ ಕುರಿತು ತಹಶೀಲ್ದಾರ್ ಹತ್ತಿರ ವಿಚಾರಿಸಲು ಬರುವಾಗ ಅರ್ಜಿಯ ಸ್ವೀಕೃತ ಪ್ರತಿ, ದಾಖಲೆಗಳನ್ನು ತೆಗೆದುಕೊಂಡು ಬನ್ನಿ
ಮಧ್ಯವರ್ತಿಗಳು ಅಥವಾ ಅನಧಿಕೃತ ಏಜೆಂಟರು ವಿವಿಧ ರೂಪಗಳಲ್ಲಿ ಇದ್ದಾರೆ. ಅವರಿಂದ ದೂರ ಇದ್ದು, ನೇರವಾಗಿ ಕಂದಾಯ ಇಲಾಖೆಯ ಸಿಬ್ಬಂದಿಗಳ ಮೂಲಕವೇ ಇಲಾಖೆಯ ಸೇವೆಗಳನ್ನು ಪಡೆಯುವಂತೆ ಮನವಿ ಮಾಡಿದ್ದಾರೆ.
ಕಳೆದ ನಾಲ್ಕು ತಿಂಗಳ ಹಿಂದೆ ಮುಂಡಗೋಡದ ತಹಸೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡ ಇವರು ಇಲಾಖೆಯಲ್ಲಿ ಕೇಳಿ ಬರುತ್ತಿದ್ದ ಬ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪ್ರಯತ್ನ ಪಡುತ್ತಿದ್ದಾರೆ.
ಕಳೆದ ಕೆಲದಿನಗಳ ಹಿಂದೆ ‘ಮುಂಡಗೋಡ ಮಿಡಿಯಾ ಎಂಡ್ ಆಫಿಸರ್ಸ’ ಎಂಬ ವ್ಯಾಟ್ಸಪ್ ಗ್ರೂಪಿನಲ್ಲಿ ನಾನು ನನ್ನ ಯಾವುದೇ ಕೆಳಗಿನ ಸಿಬ್ಬಂದಿ ಕಡೆಯಿಂದ ಯಾವುದೇ ರೀತಿಯ ಹಣ ತೆಗೆದುಕೊಳ್ಳುವುದಿಲ್ಲ.ಇಲಾಖೆಯ ಯಾವುದೇ ಸಿಬ್ಬಂದಿ ನನ್ನ ಹೆಸರು ಹೇಳಿ ಸಾರ್ವಜನಿಕರಿಂದ ಹಣ ತೆಗೆದುಕೊಳ್ಳುತ್ತಿದ್ದರೆ ತಮ್ಮ ಗಮನಕ್ಕೆ ತರುವಂತೆಯೂ ಸಹ ಪ್ರಕಟಣೆ ನೀಡಿದ್ದರು.
ಮುಂಡಗೋಡದ ಪ್ರತಿಯೊಂದು ಇಲಾಖೆಯಲ್ಲಿಯೂ ಸಹ ಇಂತಹ ದಕ್ಷ ಅಧಿಕಾರಿಗಳು ಇದ್ದರೆ ಸರ್ಕಾರದ ಯೋಜನೆಗಳು ಸಾಮಾನ್ಯ ಜನರಿಗೆ ನೇರವಾಗಿ ತಲುಪಬಹುದು.ಮತ್ತು ಭ್ರಷ್ಟಾಚಾರ ಮುಕ್ತ ತಾಲೂಕನ್ನಾಗಿ ಮಾಡಬಹುದು ಎಂದು ಸಾರ್ವಜನಿಕರು ಮಾತನಾಡುತ್ತಿರುವುದು ಕಂಡುಬರುತ್ತಿದೆ.
ವರದ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

11 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

11 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

11 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

11 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

11 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

11 hours ago