ಮುಂಡಗೋಡ: ತಾಲೂಕಿನ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಪಡೆಯಲು ಹಾಗೂ ನಿಮ್ಮ ಅರ್ಜಿಗಳಿಗೆ ಸಂಬಂಧಿಸಿದಂತೆ ಯಾವುದೇ ಮಧ್ಯವರ್ತಿಗಳನ್ನು ಅಥವಾ ಏಜೆಂಟರನ್ನು ಸಂಪರ್ಕಿಸಬೇಡಿ ಎಂದು ತಹಶೀಲ್ದಾರ್ ಶಂಕರ್ ಗೌಡಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ನೇರವಾಗಿ ಸಂಬಂಧಿಸಿದ ಕೌಂಟರ್ ಗಳಲ್ಲಿ ದಾಖಲೆಗಳ ಸಹಿತ ಅರ್ಜಿ ಸಲ್ಲಿಸಿ .
ಅರ್ಜಿಗಳನ್ನು ಟಪಾಲು ವಿಭಾಗದಲ್ಲಿ ನೇರವಾಗಿ ಸಲ್ಲಿಸಿ.ನಿಮ್ಮ ಕಡೆ ಸ್ವೀಕೃತ ಪ್ರತಿ ಇಟ್ಟುಕೊಳ್ಳಿ.
ನಿಮ್ಮ ಕೆಲಸಕ್ಕೆ, ದೂರುಗಳಿಗೆ ನೇರವಾಗಿ ತಹಶೀಲ್ದಾರ್ ಅಥವಾ ತಹಶೀಲ್ದಾರ್ ಕಚೇರಿ ಸಿಬ್ಬಂದಿಯನ್ನು ಭೇಟಿ ಆಗಿ.
ಅರ್ಜಿ ಅಥವಾ ಕಂದಾಯ ಇಲಾಖೆ ಸೇವೆಯ ಕುರಿತು ತಹಶೀಲ್ದಾರ್ ಹತ್ತಿರ ವಿಚಾರಿಸಲು ಬರುವಾಗ ಅರ್ಜಿಯ ಸ್ವೀಕೃತ ಪ್ರತಿ, ದಾಖಲೆಗಳನ್ನು ತೆಗೆದುಕೊಂಡು ಬನ್ನಿ
ಮಧ್ಯವರ್ತಿಗಳು ಅಥವಾ ಅನಧಿಕೃತ ಏಜೆಂಟರು ವಿವಿಧ ರೂಪಗಳಲ್ಲಿ ಇದ್ದಾರೆ. ಅವರಿಂದ ದೂರ ಇದ್ದು, ನೇರವಾಗಿ ಕಂದಾಯ ಇಲಾಖೆಯ ಸಿಬ್ಬಂದಿಗಳ ಮೂಲಕವೇ ಇಲಾಖೆಯ ಸೇವೆಗಳನ್ನು ಪಡೆಯುವಂತೆ ಮನವಿ ಮಾಡಿದ್ದಾರೆ.
ಕಳೆದ ನಾಲ್ಕು ತಿಂಗಳ ಹಿಂದೆ ಮುಂಡಗೋಡದ ತಹಸೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡ ಇವರು ಇಲಾಖೆಯಲ್ಲಿ ಕೇಳಿ ಬರುತ್ತಿದ್ದ ಬ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪ್ರಯತ್ನ ಪಡುತ್ತಿದ್ದಾರೆ.
ಕಳೆದ ಕೆಲದಿನಗಳ ಹಿಂದೆ ‘ಮುಂಡಗೋಡ ಮಿಡಿಯಾ ಎಂಡ್ ಆಫಿಸರ್ಸ’ ಎಂಬ ವ್ಯಾಟ್ಸಪ್ ಗ್ರೂಪಿನಲ್ಲಿ ನಾನು ನನ್ನ ಯಾವುದೇ ಕೆಳಗಿನ ಸಿಬ್ಬಂದಿ ಕಡೆಯಿಂದ ಯಾವುದೇ ರೀತಿಯ ಹಣ ತೆಗೆದುಕೊಳ್ಳುವುದಿಲ್ಲ.ಇಲಾಖೆಯ ಯಾವುದೇ ಸಿಬ್ಬಂದಿ ನನ್ನ ಹೆಸರು ಹೇಳಿ ಸಾರ್ವಜನಿಕರಿಂದ ಹಣ ತೆಗೆದುಕೊಳ್ಳುತ್ತಿದ್ದರೆ ತಮ್ಮ ಗಮನಕ್ಕೆ ತರುವಂತೆಯೂ ಸಹ ಪ್ರಕಟಣೆ ನೀಡಿದ್ದರು.
ಮುಂಡಗೋಡದ ಪ್ರತಿಯೊಂದು ಇಲಾಖೆಯಲ್ಲಿಯೂ ಸಹ ಇಂತಹ ದಕ್ಷ ಅಧಿಕಾರಿಗಳು ಇದ್ದರೆ ಸರ್ಕಾರದ ಯೋಜನೆಗಳು ಸಾಮಾನ್ಯ ಜನರಿಗೆ ನೇರವಾಗಿ ತಲುಪಬಹುದು.ಮತ್ತು ಭ್ರಷ್ಟಾಚಾರ ಮುಕ್ತ ತಾಲೂಕನ್ನಾಗಿ ಮಾಡಬಹುದು ಎಂದು ಸಾರ್ವಜನಿಕರು ಮಾತನಾಡುತ್ತಿರುವುದು ಕಂಡುಬರುತ್ತಿದೆ.
ವರದ:ಮಂಜುನಾಥ ಹರಿಜನ.
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…