ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ದೇವರಾಜ ಅರಸು ಜನ್ಮ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇವರಾಜ ಅರಸು ಅವರು ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸಬೇಕು ಎಂದು ತಂದಿದ್ದ ಕಾಯ್ದೆಗೆ ಬಿಜೆಪಿಯವರು ತಿದ್ದುಪಡಿ ತಂದು ನೇಗಿಲು ಹಿಡಿಯಲು ಬಾರದವರಿಗೂ ಕೃಷಿ ಭೂಮಿ ಖರೀದಿಗೆ ಅವಕಾಶ ಕಲ್ಪಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತ ಬಂದ ಕೂಡಲೇ ಈ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಿ ಹಿಂದಿನಂತೆ ಕೃಷಿಕರಷ್ಟೇ ಕೃಷಿ ಭೂಮಿ ಕರಿದಿಸುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಅರಸು ಅವರು ಉಳುವವನೇ ಭೂಮಿಯೊಡೆಯ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲೀಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು ಬಿ ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…