ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ದೇವರಾಜ ಅರಸು ಜನ್ಮ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇವರಾಜ ಅರಸು ಅವರು ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸಬೇಕು ಎಂದು ತಂದಿದ್ದ ಕಾಯ್ದೆಗೆ ಬಿಜೆಪಿಯವರು ತಿದ್ದುಪಡಿ ತಂದು ನೇಗಿಲು ಹಿಡಿಯಲು ಬಾರದವರಿಗೂ ಕೃಷಿ ಭೂಮಿ ಖರೀದಿಗೆ ಅವಕಾಶ ಕಲ್ಪಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತ ಬಂದ ಕೂಡಲೇ ಈ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಿ ಹಿಂದಿನಂತೆ ಕೃಷಿಕರಷ್ಟೇ ಕೃಷಿ ಭೂಮಿ ಕರಿದಿಸುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಅರಸು ಅವರು ಉಳುವವನೇ ಭೂಮಿಯೊಡೆಯ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲೀಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು ಬಿ ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…