ಬೆಸ್ಕಾಂ ನೀಡಿರುವ ಕರೆಂಟ್ ಬಿಲ್ ಬಗ್ಗೆ ಬಳಕೆದಾರರೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಗಮನ ಸೆಳೆದಿದ್ದಾರೆ. ಇತ್ತೀಚಿನ ಬಿಲ್ ಜತೆಗೆ ಹಿಂದಿನ ಎರಡು ಬಿಲ್ಗಳನ್ನೂ ಹಂಚಿಕೊಂಡಿರುವ ಅವರು ತಮಗೆ ಬಂದಿರುವ ಲೇಟೆಸ್ಟ್ ಬಿಲ್ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ತಿಂಗಳಲ್ಲಿ 16 ದಿನಗಳ ಮನೆಯಲ್ಲಿ ಇರದಿದ್ದರೂ ಬಿಲ್ ಮಾತ್ರ ಮೂರುಪಟ್ಟು ಬಂದಿದೆ ಎಂದು ಅವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಅದಕ್ಕೆ ಸಂಬಂಧಿಸಿದ ಬಿಲ್ಗಳನ್ನು ಬೆಸ್ಕಾಂ ಸೋಷಿಯಲ್ ಮೀಡಿಯಾ ಹ್ಯಾಂಡಲ್ಗೂ ಮೆನ್ಷನ್ ಮಾಡಿ ಅವರ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.
ಯಾಸಿರ್ ಮುಷ್ತಾಕ್ ಎಂಬವರು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಇದನ್ನು ಪೋಸ್ಟ್ ಮಾಡಿಕೊಂಡಿದ್ದಾರೆ. ಇದು ಗೃಹಜ್ಯೋತಿಯ ಪರಿಣಾಮವೇ ಎಂದು ಪ್ರಶ್ನಿಸಿರುವ ಅವರು, ಗೃಹಜ್ಯೋತಿ ಬರುವುದಕ್ಕಿಂತಲೂ ಮೊದಲು ಬರುತ್ತಿದ್ದಂಥ ಬಿಲ್ನ ಮೂರು ಪಟ್ಟು ಬಿಲ್ ಈಗ ಬರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ನಲ್ಲಿ 16 ದಿನಗಳ ಕಾಲ ಮನೆಯಲ್ಲಿ ಯಾರೂ ಇಲ್ಲದಿದ್ದರೂ ಈ ಸಲ 2247 ರೂ. ಬಿಲ್ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಜೊತೆಗೆ ಸೆಪ್ಟೆಂಬರ್ನಲ್ಲಿ ಬಂದಿದ್ದ 1528 ರೂ. ಬಿಲ್ ಮತ್ತು ಏಪ್ರಿಲ್ನಲ್ಲಿ ಬಂದಿದ್ದ 228 ರೂ. ಬಿಲ್ನ ಫೋಟೋ ಕೂಡ ಹಂಚಿಕೊಂಡಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…