Latest

16 ದಿನ ಮನೆಯಲ್ಲಿ ಯಾರೂ ಇರಲಿಲ್ಲ, ಆದ್ರೂ ಬಂತು ಮೂರುಪಟ್ಟು ಕರೆಂಟ್ ಬಿಲ್!

ಬೆಸ್ಕಾಂ ನೀಡಿರುವ ಕರೆಂಟ್ ಬಿಲ್​ ಬಗ್ಗೆ ಬಳಕೆದಾರರೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಗಮನ ಸೆಳೆದಿದ್ದಾರೆ. ಇತ್ತೀಚಿನ ಬಿಲ್ ಜತೆಗೆ ಹಿಂದಿನ ಎರಡು ಬಿಲ್​ಗಳನ್ನೂ ಹಂಚಿಕೊಂಡಿರುವ ಅವರು ತಮಗೆ ಬಂದಿರುವ ಲೇಟೆಸ್ಟ್ ಬಿಲ್ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ತಿಂಗಳಲ್ಲಿ 16 ದಿನಗಳ ಮನೆಯಲ್ಲಿ ಇರದಿದ್ದರೂ ಬಿಲ್ ಮಾತ್ರ ಮೂರುಪಟ್ಟು ಬಂದಿದೆ ಎಂದು ಅವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಅದಕ್ಕೆ ಸಂಬಂಧಿಸಿದ ಬಿಲ್​ಗಳನ್ನು ಬೆಸ್ಕಾಂ ಸೋಷಿಯಲ್ ಮೀಡಿಯಾ ಹ್ಯಾಂಡಲ್​ಗೂ ಮೆನ್ಷನ್ ಮಾಡಿ ಅವರ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.
ಯಾಸಿರ್ ಮುಷ್ತಾಕ್ ಎಂಬವರು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಇದನ್ನು ಪೋಸ್ಟ್ ಮಾಡಿಕೊಂಡಿದ್ದಾರೆ. ಇದು ಗೃಹಜ್ಯೋತಿಯ ಪರಿಣಾಮವೇ ಎಂದು ಪ್ರಶ್ನಿಸಿರುವ ಅವರು, ಗೃಹಜ್ಯೋತಿ ಬರುವುದಕ್ಕಿಂತಲೂ ಮೊದಲು ಬರುತ್ತಿದ್ದಂಥ ಬಿಲ್​ನ ಮೂರು ಪಟ್ಟು ಬಿಲ್ ಈಗ ಬರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್​ನಲ್ಲಿ 16 ದಿನಗಳ ಕಾಲ ಮನೆಯಲ್ಲಿ ಯಾರೂ ಇಲ್ಲದಿದ್ದರೂ ಈ ಸಲ 2247 ರೂ. ಬಿಲ್ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಜೊತೆಗೆ ಸೆಪ್ಟೆಂಬರ್​ನಲ್ಲಿ ಬಂದಿದ್ದ 1528 ರೂ. ಬಿಲ್ ಮತ್ತು ಏಪ್ರಿಲ್​ನಲ್ಲಿ ಬಂದಿದ್ದ 228 ರೂ. ಬಿಲ್​ನ ಫೋಟೋ ಕೂಡ ಹಂಚಿಕೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

8 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

8 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

9 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

9 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

9 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago