ಬೆಸ್ಕಾಂ ನೀಡಿರುವ ಕರೆಂಟ್ ಬಿಲ್ ಬಗ್ಗೆ ಬಳಕೆದಾರರೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಗಮನ ಸೆಳೆದಿದ್ದಾರೆ. ಇತ್ತೀಚಿನ ಬಿಲ್ ಜತೆಗೆ ಹಿಂದಿನ ಎರಡು ಬಿಲ್ಗಳನ್ನೂ ಹಂಚಿಕೊಂಡಿರುವ ಅವರು ತಮಗೆ ಬಂದಿರುವ ಲೇಟೆಸ್ಟ್ ಬಿಲ್ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ತಿಂಗಳಲ್ಲಿ 16 ದಿನಗಳ ಮನೆಯಲ್ಲಿ ಇರದಿದ್ದರೂ ಬಿಲ್ ಮಾತ್ರ ಮೂರುಪಟ್ಟು ಬಂದಿದೆ ಎಂದು ಅವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಅದಕ್ಕೆ ಸಂಬಂಧಿಸಿದ ಬಿಲ್ಗಳನ್ನು ಬೆಸ್ಕಾಂ ಸೋಷಿಯಲ್ ಮೀಡಿಯಾ ಹ್ಯಾಂಡಲ್ಗೂ ಮೆನ್ಷನ್ ಮಾಡಿ ಅವರ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.
ಯಾಸಿರ್ ಮುಷ್ತಾಕ್ ಎಂಬವರು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಇದನ್ನು ಪೋಸ್ಟ್ ಮಾಡಿಕೊಂಡಿದ್ದಾರೆ. ಇದು ಗೃಹಜ್ಯೋತಿಯ ಪರಿಣಾಮವೇ ಎಂದು ಪ್ರಶ್ನಿಸಿರುವ ಅವರು, ಗೃಹಜ್ಯೋತಿ ಬರುವುದಕ್ಕಿಂತಲೂ ಮೊದಲು ಬರುತ್ತಿದ್ದಂಥ ಬಿಲ್ನ ಮೂರು ಪಟ್ಟು ಬಿಲ್ ಈಗ ಬರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ನಲ್ಲಿ 16 ದಿನಗಳ ಕಾಲ ಮನೆಯಲ್ಲಿ ಯಾರೂ ಇಲ್ಲದಿದ್ದರೂ ಈ ಸಲ 2247 ರೂ. ಬಿಲ್ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಜೊತೆಗೆ ಸೆಪ್ಟೆಂಬರ್ನಲ್ಲಿ ಬಂದಿದ್ದ 1528 ರೂ. ಬಿಲ್ ಮತ್ತು ಏಪ್ರಿಲ್ನಲ್ಲಿ ಬಂದಿದ್ದ 228 ರೂ. ಬಿಲ್ನ ಫೋಟೋ ಕೂಡ ಹಂಚಿಕೊಂಡಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…