ಬೇಸಿಗೆ ಸಂದರ್ಭದಲ್ಲಿ ವಿದ್ಯುತ್ ಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಅಲ್ಲದೆ ಉತ್ಪಾದನೆಯೂ ಸಹ ಕುಂಠಿತಗೊಳ್ಳುವ ಕಾರಣ ಅಂತಹ ಸಂದರ್ಭದಲ್ಲಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತದೆ. ಆದರೆ ಇದೇ ಸಂದರ್ಭದಲ್ಲಿ ಪರೀಕ್ಷೆಗಳು ನಡೆಯುವ ಕಾರಣ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೊಂದರೆಯಾಗುತ್ತಿತ್ತು. ಅಲ್ಲದೆ ಲೋಡ್ ಶೆಡ್ಡಿಂಗ್ ಕಾರಣಕ್ಕಾಗಿ ರೈತರು ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳುವ ಸಲುವಾಗಿ ಹೊಲಗದ್ದೆಗಳಿಗೆ ನೀರು ಹಾಯಿಸಲು ಕಷ್ಟವಾಗುತ್ತಿತ್ತು. ಇದೀಗ ರಾಜ್ಯದ ಎಲ್ಲಾ ಎಸ್ಕಾಂ ಗಳು ಲೋಡ್ ಶೆಡ್ಡಿಂಗ್ ಕುರಿತಂತೆ ಮಹತ್ವದ ತೀರ್ಮಾನವನ್ನು ಕೈಗೊಂಡಿವೆ. ವಿದ್ಯಾರ್ಥಿಗಳು ಮತ್ತು ರೈತರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ ಮುಂದಿನ ಮೂರು ತಿಂಗಳ ಅವಧಿಗೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ನಿರ್ಧರಿಸಲಾಗಿದೆ.
ಸೋಮವಾರದಂದು ಬೆಂಗಳೂರಿನಲ್ಲಿ ಎಲ್ಲ ಎಸ್ಕಾಂ ಗಳ ವ್ಯವಸ್ಥಾಪಕ ನಿರ್ದೇಶಕರ ಸಭೆ ನಡೆಸಲಾಗಿದ್ದು, ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಆರಂಭಗೊಂಡಿವೆ. ಅಲ್ಲದೆ ರೈತರಿಗೂ ಕೂಡ ನಿರಂತರ ವಿದ್ಯುತ್ ಪೂರೈಸುವ ಜವಾಬ್ದಾರಿ ಎಸ್ಕಾಂ ಗಳ ಮೇಲಿದೆ. ಹೀಗಾಗಿ ಮುಂದಿನ ಮೂರು ತಿಂಗಳು ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ತೀರ್ಮಾನ ಕೈಗೊಳ್ಳಲಾಯಿತು.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…