Crime

ಆಕ್ಸಿಡೆಂಟ್ ಮಾಡಿದ್ದರೂ ಪಶ್ಚಾತ್ತಾಪವಿಲ್ಲ: ಕುಡಿದ ಮತ್ತಿನಲ್ಲೇ ದರ್ಪ ತೋರಿದ ಯುವಕ

ವಡೋದರದಲ್ಲಿ ನಡೆದ ಭೀಕರ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತನ್ನ ಕಾರಿನ ಅತಿವೇಗದ ಚಾಲನೆಯಿಂದ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟರೂ, ಅಪಘಾತ ಮಾಡಿದ್ದ ಯುವಕನಿಗೆ ಯಾವುದೇ ಪಶ್ಚಾತ್ತಾಪವೇ ಇರಲಿಲ್ಲ. ಇದಕ್ಕೂ ಮೀರಿಸಿ, ರಸ್ತೆಯಲ್ಲೇ ಪುಂಡಾಟ ನಡೆಸಿದ ಆತನ ವರ್ತನೆ ಜನರಲ್ಲಿ ಆಕ್ರೋಶ ಉಂಟುಮಾಡಿದೆ.

ಅಪಘಾತದ ಭೀಕರ ದೃಶ್ಯ

ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಯುವಕ ಪ್ರಾರಂಭದಲ್ಲಿ ಕಾರಿನಿಂದ ಇಳಿಯಲೂ ನಿರಾಕರಿಸುತ್ತಾನೆ, ಹಾಗೆಯೇ ಅವನ ಜೊತೆಯ ಮತ್ತೊಬ್ಬ ಯುವಕ ದೂರ ಹೋಗಿ ನಿಂತುಕೊಳ್ಳುತ್ತಾನೆ. ನಂತರ, ಅಪಘಾತ ಮಾಡಿದ ಯುವಕ ತಾನು ಮಾಡಿರುವ ಕೃತ್ಯ ಕಡೆಗೆ ಗಮನಿಸದೇ, ಮಹಿಳೆಯ ಮೃತದೇಹದತ್ತ ತಿರುಗಿಯೂ ನೋಡದೆ, ಮತ್ತೊಂದು ರೌಂಡ್ ಎಂದು ದರ್ಪ ತೋರುತ್ತಾ ರಸ್ತೆಯಲ್ಲೇ ತೂರಾಡುತ್ತಾನೆ.

ಸಂಭ್ರಮದಲಿ ಮರೆತ ಪಶ್ಚಾತ್ತಾಪ

ಯುವಕ ಕುಡಿದ ಮತ್ತಿನಲ್ಲಿದ್ದು, ತಾನು ಎಂತಹ ಗಂಭೀರ ಅಪರಾಧ ಮಾಡಿದ್ದೇನೆ ಎಂಬುದರ ಬಗ್ಗೆ ಯಾವುದೇ ಪರಿವೆಯಿಲ್ಲ. ಈ ನಡುವೆ, ಅಪಘಾತ ಸ್ಥಳಕ್ಕೆ ಜನರು ಸೇರಿ ಆತನನ್ನು ಸುತ್ತುವರಿದು ಹಿಡಿದುಕೊಳ್ಳುತ್ತಾರೆ. ಈ ಭೀಕರ ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಆರೋಪಿ ಕುರಿತು ಮಾಹಿತಿ

ಅಪಘಾತಕ್ಕೆ ಕಾರಣವಾಗಿರುವ ಯುವಕನನ್ನು ರಕ್ಷಿತ್ ಎಂದು ಗುರುತಿಸಲಾಗಿದೆ. ಆತ ಕಾನೂನು ವಿದ್ಯಾರ್ಥಿಯಾಗಿದ್ದು, ಅವನ ನಿರ್ಲಕ್ಷ್ಯ ಮತ್ತು ನಿರ್ದಯ ವರ್ತನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜನತೆ ಒತ್ತಾಯಿಸುತ್ತಿದ್ದಾರೆ. ಈ ಪ್ರಕರಣವು ನೈತಿಕ ಮತ್ತು ಕಾನೂನಾತ್ಮಕ ಚರ್ಚೆಗೆ ಕಾರಣವಾಗಿದ್ದು, ಪೊಲೀಸರು ಈಗ ಮುಂದಿನ ಹಂತದ ಕ್ರಮ ಕೈಗೊಳ್ಳುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago