ದಲಿತರ ಸ್ಮಶಾನಕ್ಕೆ ಹೋಗಲು ಸೂಕ್ತ ರಸ್ತೆ ಇಲ್ಲ, ಮೃತ ವ್ಯಕ್ತಿಯ ಶವ ಸಂಸ್ಕಾರ ಮಾಡುವುದು ಎಂದು ಆಕ್ರೋಶಗೊಂಡ ದಲಿತ ಸಮುದಾಯ ಶವ ಸಂಸ್ಕಾರ ಮಾಡದೆ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗೌಡಗೇರೆ ಗ್ರಾಮದಲ್ಲಿ ನಡೆದಿದೆ.
ಪಂಚಾಯತಿ ವ್ಯಾಪ್ತಿಯ ವರವಣಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ದಾರಿಯ ಸಮಸ್ಯೆಯಾಗಿದೆ. ಸ್ಮಶಾನದ ರಸ್ತೆಯನ್ನು ಸ್ಥಳೀಯರೊಬ್ಬರು ಒತ್ತುವರಿ ಮಾಡಿಕೊಂಡಿದ್ದಾರೆ. ಹಾಗಾಗಿ ಗ್ರಾಮದಲ್ಲಿ ಯಾರಾದರೂ ಮೃತಪಟ್ಟಾಗ ಸಮಸ್ಯೆ ಆಗುತ್ತಿದೆ. ಇಂದು ಕೂಡ ಗ್ರಾಮದ 60 ವರ್ಷದ ವೃದ್ದರೊಬ್ಬರು ಮೃತಪಟ್ಟಿದ್ದರು.
ರಸ್ತೆ ಬದಲು ಮೋರಿಯಲ್ಲಿ ಸ್ಮಶಾನಕ್ಕೆ ಹೋಗಬೇಕಾದ ಅನಿವಾರ್ಯತೆ ಇದೆ. ಇದರಿಂದ ಸಮಸ್ಯೆ ಬಗೆಯರಿಸುವಂತೆ ಸ್ಥಳೀಯ ಗೌಡಗೇರೆ ಗ್ರಾಮ ಪಂಚಾಯತಿ ಪಿ.ಡಿ.ಒ ಹಾಗೂ ಗೌರಿಬಿದನೂರು ಇ.ಒ ಗೆ ಮನವಿ ಮಾಡಿದರು, ದೂರು ನೀಡಿದರೂ ಕ್ರಮ ಕೈಗೊಂಡಿಲ್ಲವಂತೆ. ಹಾಗಾಗಿ ಇಂದು ವೃದ್ದನ ಶವ ಸಂಸ್ಕಾರ ಮಾಡದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಳಿಕ ಸ್ಥಳಕ್ಕೆ ಬಂದ ಗೌರಿಬಿದನೂರು ತಹಶಿಲ್ದಾರ್ ಮಹೇಶ್ ಪತ್ರಿ ಹಾಗೂ ಮಂಚೇನಹಳ್ಳಿ ಪೊಲೀಸರು ಗ್ರಾಮಸ್ಥರ ಮನವೋಲಿಸಿ ರಸ್ತೆ ಸರಿಪಡಿಸಿಕೊಡುವುದಾಗಿ ಭರವಸೆ ನೀಡಿದ ನಂತರ ಗ್ರಾಮಸ್ಥರು ಶವ ಸಂಸ್ಕಾರ ಮಾಡಲು ಮುಂದಾದರು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…