ದಲಿತರ ಸ್ಮಶಾನಕ್ಕೆ ಹೋಗಲು ಸೂಕ್ತ ರಸ್ತೆ ಇಲ್ಲ, ಮೃತ ವ್ಯಕ್ತಿಯ ಶವ ಸಂಸ್ಕಾರ ಮಾಡುವುದು ಎಂದು ಆಕ್ರೋಶಗೊಂಡ ದಲಿತ ಸಮುದಾಯ ಶವ ಸಂಸ್ಕಾರ ಮಾಡದೆ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗೌಡಗೇರೆ ಗ್ರಾಮದಲ್ಲಿ ನಡೆದಿದೆ.
ಪಂಚಾಯತಿ ವ್ಯಾಪ್ತಿಯ ವರವಣಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ದಾರಿಯ ಸಮಸ್ಯೆಯಾಗಿದೆ. ಸ್ಮಶಾನದ ರಸ್ತೆಯನ್ನು ಸ್ಥಳೀಯರೊಬ್ಬರು ಒತ್ತುವರಿ ಮಾಡಿಕೊಂಡಿದ್ದಾರೆ. ಹಾಗಾಗಿ ಗ್ರಾಮದಲ್ಲಿ ಯಾರಾದರೂ ಮೃತಪಟ್ಟಾಗ ಸಮಸ್ಯೆ ಆಗುತ್ತಿದೆ. ಇಂದು ಕೂಡ ಗ್ರಾಮದ 60 ವರ್ಷದ ವೃದ್ದರೊಬ್ಬರು ಮೃತಪಟ್ಟಿದ್ದರು.
ರಸ್ತೆ ಬದಲು ಮೋರಿಯಲ್ಲಿ ಸ್ಮಶಾನಕ್ಕೆ ಹೋಗಬೇಕಾದ ಅನಿವಾರ್ಯತೆ ಇದೆ. ಇದರಿಂದ ಸಮಸ್ಯೆ ಬಗೆಯರಿಸುವಂತೆ ಸ್ಥಳೀಯ ಗೌಡಗೇರೆ ಗ್ರಾಮ ಪಂಚಾಯತಿ ಪಿ.ಡಿ.ಒ ಹಾಗೂ ಗೌರಿಬಿದನೂರು ಇ.ಒ ಗೆ ಮನವಿ ಮಾಡಿದರು, ದೂರು ನೀಡಿದರೂ ಕ್ರಮ ಕೈಗೊಂಡಿಲ್ಲವಂತೆ. ಹಾಗಾಗಿ ಇಂದು ವೃದ್ದನ ಶವ ಸಂಸ್ಕಾರ ಮಾಡದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಳಿಕ ಸ್ಥಳಕ್ಕೆ ಬಂದ ಗೌರಿಬಿದನೂರು ತಹಶಿಲ್ದಾರ್ ಮಹೇಶ್ ಪತ್ರಿ ಹಾಗೂ ಮಂಚೇನಹಳ್ಳಿ ಪೊಲೀಸರು ಗ್ರಾಮಸ್ಥರ ಮನವೋಲಿಸಿ ರಸ್ತೆ ಸರಿಪಡಿಸಿಕೊಡುವುದಾಗಿ ಭರವಸೆ ನೀಡಿದ ನಂತರ ಗ್ರಾಮಸ್ಥರು ಶವ ಸಂಸ್ಕಾರ ಮಾಡಲು ಮುಂದಾದರು.
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…