ದಲಿತರ ಸ್ಮಶಾನಕ್ಕೆ ಹೋಗಲು ಸೂಕ್ತ ರಸ್ತೆ ಇಲ್ಲ, ಮೃತ ವ್ಯಕ್ತಿಯ ಶವ ಸಂಸ್ಕಾರ ಮಾಡುವುದು ಎಂದು ಆಕ್ರೋಶಗೊಂಡ ದಲಿತ ಸಮುದಾಯ ಶವ ಸಂಸ್ಕಾರ ಮಾಡದೆ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗೌಡಗೇರೆ ಗ್ರಾಮದಲ್ಲಿ ನಡೆದಿದೆ.
ಪಂಚಾಯತಿ ವ್ಯಾಪ್ತಿಯ ವರವಣಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ದಾರಿಯ ಸಮಸ್ಯೆಯಾಗಿದೆ. ಸ್ಮಶಾನದ ರಸ್ತೆಯನ್ನು ಸ್ಥಳೀಯರೊಬ್ಬರು ಒತ್ತುವರಿ ಮಾಡಿಕೊಂಡಿದ್ದಾರೆ. ಹಾಗಾಗಿ ಗ್ರಾಮದಲ್ಲಿ ಯಾರಾದರೂ ಮೃತಪಟ್ಟಾಗ ಸಮಸ್ಯೆ ಆಗುತ್ತಿದೆ. ಇಂದು ಕೂಡ ಗ್ರಾಮದ 60 ವರ್ಷದ ವೃದ್ದರೊಬ್ಬರು ಮೃತಪಟ್ಟಿದ್ದರು.
ರಸ್ತೆ ಬದಲು ಮೋರಿಯಲ್ಲಿ ಸ್ಮಶಾನಕ್ಕೆ ಹೋಗಬೇಕಾದ ಅನಿವಾರ್ಯತೆ ಇದೆ. ಇದರಿಂದ ಸಮಸ್ಯೆ ಬಗೆಯರಿಸುವಂತೆ ಸ್ಥಳೀಯ ಗೌಡಗೇರೆ ಗ್ರಾಮ ಪಂಚಾಯತಿ ಪಿ.ಡಿ.ಒ ಹಾಗೂ ಗೌರಿಬಿದನೂರು ಇ.ಒ ಗೆ ಮನವಿ ಮಾಡಿದರು, ದೂರು ನೀಡಿದರೂ ಕ್ರಮ ಕೈಗೊಂಡಿಲ್ಲವಂತೆ. ಹಾಗಾಗಿ ಇಂದು ವೃದ್ದನ ಶವ ಸಂಸ್ಕಾರ ಮಾಡದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಳಿಕ ಸ್ಥಳಕ್ಕೆ ಬಂದ ಗೌರಿಬಿದನೂರು ತಹಶಿಲ್ದಾರ್ ಮಹೇಶ್ ಪತ್ರಿ ಹಾಗೂ ಮಂಚೇನಹಳ್ಳಿ ಪೊಲೀಸರು ಗ್ರಾಮಸ್ಥರ ಮನವೋಲಿಸಿ ರಸ್ತೆ ಸರಿಪಡಿಸಿಕೊಡುವುದಾಗಿ ಭರವಸೆ ನೀಡಿದ ನಂತರ ಗ್ರಾಮಸ್ಥರು ಶವ ಸಂಸ್ಕಾರ ಮಾಡಲು ಮುಂದಾದರು.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…