Latest

ಕುಖ್ಯಾತ ಕಳ್ಳನ ಬಂದನ!!

ಬೀದರ್: ನಗರದ ಆದರ್ಶ ಹಾಗೂ ಜ್ಯೋತಿ ಕಾಲೊನಿಯಲ್ಲಿ ಸರಣಿ ಮನೆಗಳ್ಳತನ ಮಾಡಿದ್ದ ಕುಖ್ಯಾತ ಕಳ್ಳನನ್ನು ಬಂಧಿಸಿರುವ ಪೊಲೀಸರು ಆತನಿಂದ ₹ 10 ಲಕ್ಷ ಮೌಲ್ಯದ 20 ತೊಲಾ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ.
ಈತ ನಗರದಲ್ಲಿ ಒಟ್ಟು ಏಳು ಮನೆಗಳ ಬೀಗ ಒಡೆದಿದ್ದ. ನಾಲ್ಕು ಮನೆಗಳಲ್ಲಿ ಅವನಿಗೆ ಏನೂ ದೊರಕಿರಲಿಲ್ಲ. ರೈಲು ಹಳಿಯ ಪಕ್ಕದಲ್ಲಿರುವ ಆದರ್ಶ, ಜ್ಯೋತಿ ಕಾಲೊನಿಯಲ್ಲಿ ಇರುವ ಮೂರು ಮನೆಗಳಲ್ಲಿ ಕಳ್ಳತನ ಮಾಡಿದ್ದ. ರೈಲು ಹೋಗುವಾಗ ಹಾಗೂ ಬರುವಾಗ ಆಗುತ್ತಿದ್ದ ಸಪ್ಪಳದ ಸಂದರ್ಭದಲ್ಲಿ ವ್ಯವಸ್ಥಿತವಾಗಿ ಬೀಗ ಒಡೆಯುತ್ತಿದ್ದ. ಚಿಲಕಗಳಿಗೆ ಕೆಮಿಕಲ್‌ ಸ್ಪ್ರೆ ಮಾಡಿ ಶಬ್ದ ಬರದಂತೆ ಎಚ್ಚರ ವಹಿಸುತ್ತಿದ್ದ. ಕೆಲವು ಮನೆಗಳಲ್ಲಿ ಮನೆಯ ಮಾಲೀಕರು ಮನೆಯೊಳಗೆ ಮಲಗಿದ್ದಾಗಲೇ ಕಳ್ಳತನ ಮಾಡಿ ತನ್ನ ಕೈ ಚಳಕ ತೋರಿಸಿದ್ದ.
ಮುಖ್ಯ ಬಾಗಿಲಿನ ಚಿಲಕ ಮುರಿದು ಒಳಗೆ ಬಂದ ನಂತರ ತಾನು ಮರಳಿ ಓಡಿ ಹೋಗಲು ಒಂದು ಕೊಠಡಿಯ ಬಾಗಿಲನ್ನು ತೆರೆದಿಡುತ್ತಿದ್ದ, ಮನೆಯಲ್ಲಿನ ಬೆಡ್‌ರೂಮ್‌ಗಳಿಗೆ ಹೊರಗಿನಿಂದ ನಿಧಾನವಾಗಿ ಚಿಲಕ ಹಾಕುತ್ತಿದ್ದ. ಗಾಢ ನಿದ್ರೆಯಲ್ಲಿ ಇರುತ್ತಿದ್ದವರಿಗೆ ಕಳ್ಳತನ ಮಾಡಿ ಹೋಗಿರುವುದು ಗೊತ್ತೇ ಆಗುತ್ತಿರಲಿಲ್ಲ.
ಮಹಿಳೆಯರ ಸಹವಾಸ ಹಾಗೂ ಕುಡಿತದ ಚಟ ಹೊಂದಿರುವ ಆರೋಪಿ ಒಬ್ಬನೇ ಚಾಣಕ್ಷತನದಿಂದ ಕಳ್ಳನತ ಮಾಡುವುದನ್ನು ರೂಢಿಸಿಕೊಂಡಿದ್ದಾನೆ. ಇವನಿಗೆ ಸೊಲ್ಲಾಪುರದಲ್ಲಿ ಹೆಂಡತಿ, ಮಕ್ಕಳೂ ಇದ್ದಾರೆ. ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದಾನೆ. ಒಂದು ಕಡೆ ಕಳ್ಳತನ ಮಾಡಿ ಸಿಕ್ಕಿಬಿದ್ದ ಮೇಲೆ ಜಾಮೀನಿನ ಮೇಲೆ ಹೊರಗೆ ಬಂದ ನಂತರ ಮತ್ತೆ ಬೇರೆ ಕಡೆ ಕಳ್ಳನತ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
ರಾಯಚೂರು, ಗದಗ, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಬಾದಾಮಿ ಹಾಗೂ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಅಲ್ಲಿಯ ಪೊಲೀಸ್‌ ಠಾಣೆಗಳಲ್ಲಿ ಆರೋಪಿ ವಿರುದ್ಧ ಪ್ರಕರಣಗಳೂ ದಾಖಲಾಗಿವೆ.
ಗಾಂಧಿ ಗಂಜ್‌ನ ಪೊಲೀಸ್‌ ಇನ್‌ಸ್ಪೆಕ್ಟರ್ ಜಿ.ಎಸ್.ಬಿರಾದಾರ, ಬೀದರ್‌ ಗ್ರಾಮೀಣ ಸಿಪಿಐ ಶ್ರೀಕಾಂತ ಅಲ್ಲಾಪುರೆ, ಪಿಎಸ್‌ಐ ಸಯ್ಯದ್‌ ಪಟೇಲ್, ದಯಾನಂದ ಮಡಿವಾಳ, ಸಿಬ್ಬಂದಿ ಆರೀಫ್ ನವಿನ್‌, ಅನಿಲ, ಇರ್ಫಾನ್‌ ಗಂಗಾಧರ, ಪ್ರವೀಣ ಹಾಗೂ ಶ್ರೀನಿವಾಸ ಅವರನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿದೆ.
ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್‌ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು ಬಹುಮಾನ ವಿತರಿಸಿದರು.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

6 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

6 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

7 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

7 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

7 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago