Latest

ಕುಖ್ಯಾತ ಕಳ್ಳನ ಬಂದನ!!

ಬೀದರ್: ನಗರದ ಆದರ್ಶ ಹಾಗೂ ಜ್ಯೋತಿ ಕಾಲೊನಿಯಲ್ಲಿ ಸರಣಿ ಮನೆಗಳ್ಳತನ ಮಾಡಿದ್ದ ಕುಖ್ಯಾತ ಕಳ್ಳನನ್ನು ಬಂಧಿಸಿರುವ ಪೊಲೀಸರು ಆತನಿಂದ ₹ 10 ಲಕ್ಷ ಮೌಲ್ಯದ 20 ತೊಲಾ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ.
ಈತ ನಗರದಲ್ಲಿ ಒಟ್ಟು ಏಳು ಮನೆಗಳ ಬೀಗ ಒಡೆದಿದ್ದ. ನಾಲ್ಕು ಮನೆಗಳಲ್ಲಿ ಅವನಿಗೆ ಏನೂ ದೊರಕಿರಲಿಲ್ಲ. ರೈಲು ಹಳಿಯ ಪಕ್ಕದಲ್ಲಿರುವ ಆದರ್ಶ, ಜ್ಯೋತಿ ಕಾಲೊನಿಯಲ್ಲಿ ಇರುವ ಮೂರು ಮನೆಗಳಲ್ಲಿ ಕಳ್ಳತನ ಮಾಡಿದ್ದ. ರೈಲು ಹೋಗುವಾಗ ಹಾಗೂ ಬರುವಾಗ ಆಗುತ್ತಿದ್ದ ಸಪ್ಪಳದ ಸಂದರ್ಭದಲ್ಲಿ ವ್ಯವಸ್ಥಿತವಾಗಿ ಬೀಗ ಒಡೆಯುತ್ತಿದ್ದ. ಚಿಲಕಗಳಿಗೆ ಕೆಮಿಕಲ್‌ ಸ್ಪ್ರೆ ಮಾಡಿ ಶಬ್ದ ಬರದಂತೆ ಎಚ್ಚರ ವಹಿಸುತ್ತಿದ್ದ. ಕೆಲವು ಮನೆಗಳಲ್ಲಿ ಮನೆಯ ಮಾಲೀಕರು ಮನೆಯೊಳಗೆ ಮಲಗಿದ್ದಾಗಲೇ ಕಳ್ಳತನ ಮಾಡಿ ತನ್ನ ಕೈ ಚಳಕ ತೋರಿಸಿದ್ದ.
ಮುಖ್ಯ ಬಾಗಿಲಿನ ಚಿಲಕ ಮುರಿದು ಒಳಗೆ ಬಂದ ನಂತರ ತಾನು ಮರಳಿ ಓಡಿ ಹೋಗಲು ಒಂದು ಕೊಠಡಿಯ ಬಾಗಿಲನ್ನು ತೆರೆದಿಡುತ್ತಿದ್ದ, ಮನೆಯಲ್ಲಿನ ಬೆಡ್‌ರೂಮ್‌ಗಳಿಗೆ ಹೊರಗಿನಿಂದ ನಿಧಾನವಾಗಿ ಚಿಲಕ ಹಾಕುತ್ತಿದ್ದ. ಗಾಢ ನಿದ್ರೆಯಲ್ಲಿ ಇರುತ್ತಿದ್ದವರಿಗೆ ಕಳ್ಳತನ ಮಾಡಿ ಹೋಗಿರುವುದು ಗೊತ್ತೇ ಆಗುತ್ತಿರಲಿಲ್ಲ.
ಮಹಿಳೆಯರ ಸಹವಾಸ ಹಾಗೂ ಕುಡಿತದ ಚಟ ಹೊಂದಿರುವ ಆರೋಪಿ ಒಬ್ಬನೇ ಚಾಣಕ್ಷತನದಿಂದ ಕಳ್ಳನತ ಮಾಡುವುದನ್ನು ರೂಢಿಸಿಕೊಂಡಿದ್ದಾನೆ. ಇವನಿಗೆ ಸೊಲ್ಲಾಪುರದಲ್ಲಿ ಹೆಂಡತಿ, ಮಕ್ಕಳೂ ಇದ್ದಾರೆ. ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದಾನೆ. ಒಂದು ಕಡೆ ಕಳ್ಳತನ ಮಾಡಿ ಸಿಕ್ಕಿಬಿದ್ದ ಮೇಲೆ ಜಾಮೀನಿನ ಮೇಲೆ ಹೊರಗೆ ಬಂದ ನಂತರ ಮತ್ತೆ ಬೇರೆ ಕಡೆ ಕಳ್ಳನತ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
ರಾಯಚೂರು, ಗದಗ, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಬಾದಾಮಿ ಹಾಗೂ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಅಲ್ಲಿಯ ಪೊಲೀಸ್‌ ಠಾಣೆಗಳಲ್ಲಿ ಆರೋಪಿ ವಿರುದ್ಧ ಪ್ರಕರಣಗಳೂ ದಾಖಲಾಗಿವೆ.
ಗಾಂಧಿ ಗಂಜ್‌ನ ಪೊಲೀಸ್‌ ಇನ್‌ಸ್ಪೆಕ್ಟರ್ ಜಿ.ಎಸ್.ಬಿರಾದಾರ, ಬೀದರ್‌ ಗ್ರಾಮೀಣ ಸಿಪಿಐ ಶ್ರೀಕಾಂತ ಅಲ್ಲಾಪುರೆ, ಪಿಎಸ್‌ಐ ಸಯ್ಯದ್‌ ಪಟೇಲ್, ದಯಾನಂದ ಮಡಿವಾಳ, ಸಿಬ್ಬಂದಿ ಆರೀಫ್ ನವಿನ್‌, ಅನಿಲ, ಇರ್ಫಾನ್‌ ಗಂಗಾಧರ, ಪ್ರವೀಣ ಹಾಗೂ ಶ್ರೀನಿವಾಸ ಅವರನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿದೆ.
ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್‌ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು ಬಹುಮಾನ ವಿತರಿಸಿದರು.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago