Latest

ಕುಖ್ಯಾತ ಕಳ್ಳನ ಬಂದನ!!

ಬೀದರ್: ನಗರದ ಆದರ್ಶ ಹಾಗೂ ಜ್ಯೋತಿ ಕಾಲೊನಿಯಲ್ಲಿ ಸರಣಿ ಮನೆಗಳ್ಳತನ ಮಾಡಿದ್ದ ಕುಖ್ಯಾತ ಕಳ್ಳನನ್ನು ಬಂಧಿಸಿರುವ ಪೊಲೀಸರು ಆತನಿಂದ ₹ 10 ಲಕ್ಷ ಮೌಲ್ಯದ 20 ತೊಲಾ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ.
ಈತ ನಗರದಲ್ಲಿ ಒಟ್ಟು ಏಳು ಮನೆಗಳ ಬೀಗ ಒಡೆದಿದ್ದ. ನಾಲ್ಕು ಮನೆಗಳಲ್ಲಿ ಅವನಿಗೆ ಏನೂ ದೊರಕಿರಲಿಲ್ಲ. ರೈಲು ಹಳಿಯ ಪಕ್ಕದಲ್ಲಿರುವ ಆದರ್ಶ, ಜ್ಯೋತಿ ಕಾಲೊನಿಯಲ್ಲಿ ಇರುವ ಮೂರು ಮನೆಗಳಲ್ಲಿ ಕಳ್ಳತನ ಮಾಡಿದ್ದ. ರೈಲು ಹೋಗುವಾಗ ಹಾಗೂ ಬರುವಾಗ ಆಗುತ್ತಿದ್ದ ಸಪ್ಪಳದ ಸಂದರ್ಭದಲ್ಲಿ ವ್ಯವಸ್ಥಿತವಾಗಿ ಬೀಗ ಒಡೆಯುತ್ತಿದ್ದ. ಚಿಲಕಗಳಿಗೆ ಕೆಮಿಕಲ್‌ ಸ್ಪ್ರೆ ಮಾಡಿ ಶಬ್ದ ಬರದಂತೆ ಎಚ್ಚರ ವಹಿಸುತ್ತಿದ್ದ. ಕೆಲವು ಮನೆಗಳಲ್ಲಿ ಮನೆಯ ಮಾಲೀಕರು ಮನೆಯೊಳಗೆ ಮಲಗಿದ್ದಾಗಲೇ ಕಳ್ಳತನ ಮಾಡಿ ತನ್ನ ಕೈ ಚಳಕ ತೋರಿಸಿದ್ದ.
ಮುಖ್ಯ ಬಾಗಿಲಿನ ಚಿಲಕ ಮುರಿದು ಒಳಗೆ ಬಂದ ನಂತರ ತಾನು ಮರಳಿ ಓಡಿ ಹೋಗಲು ಒಂದು ಕೊಠಡಿಯ ಬಾಗಿಲನ್ನು ತೆರೆದಿಡುತ್ತಿದ್ದ, ಮನೆಯಲ್ಲಿನ ಬೆಡ್‌ರೂಮ್‌ಗಳಿಗೆ ಹೊರಗಿನಿಂದ ನಿಧಾನವಾಗಿ ಚಿಲಕ ಹಾಕುತ್ತಿದ್ದ. ಗಾಢ ನಿದ್ರೆಯಲ್ಲಿ ಇರುತ್ತಿದ್ದವರಿಗೆ ಕಳ್ಳತನ ಮಾಡಿ ಹೋಗಿರುವುದು ಗೊತ್ತೇ ಆಗುತ್ತಿರಲಿಲ್ಲ.
ಮಹಿಳೆಯರ ಸಹವಾಸ ಹಾಗೂ ಕುಡಿತದ ಚಟ ಹೊಂದಿರುವ ಆರೋಪಿ ಒಬ್ಬನೇ ಚಾಣಕ್ಷತನದಿಂದ ಕಳ್ಳನತ ಮಾಡುವುದನ್ನು ರೂಢಿಸಿಕೊಂಡಿದ್ದಾನೆ. ಇವನಿಗೆ ಸೊಲ್ಲಾಪುರದಲ್ಲಿ ಹೆಂಡತಿ, ಮಕ್ಕಳೂ ಇದ್ದಾರೆ. ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದಾನೆ. ಒಂದು ಕಡೆ ಕಳ್ಳತನ ಮಾಡಿ ಸಿಕ್ಕಿಬಿದ್ದ ಮೇಲೆ ಜಾಮೀನಿನ ಮೇಲೆ ಹೊರಗೆ ಬಂದ ನಂತರ ಮತ್ತೆ ಬೇರೆ ಕಡೆ ಕಳ್ಳನತ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
ರಾಯಚೂರು, ಗದಗ, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಬಾದಾಮಿ ಹಾಗೂ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಅಲ್ಲಿಯ ಪೊಲೀಸ್‌ ಠಾಣೆಗಳಲ್ಲಿ ಆರೋಪಿ ವಿರುದ್ಧ ಪ್ರಕರಣಗಳೂ ದಾಖಲಾಗಿವೆ.
ಗಾಂಧಿ ಗಂಜ್‌ನ ಪೊಲೀಸ್‌ ಇನ್‌ಸ್ಪೆಕ್ಟರ್ ಜಿ.ಎಸ್.ಬಿರಾದಾರ, ಬೀದರ್‌ ಗ್ರಾಮೀಣ ಸಿಪಿಐ ಶ್ರೀಕಾಂತ ಅಲ್ಲಾಪುರೆ, ಪಿಎಸ್‌ಐ ಸಯ್ಯದ್‌ ಪಟೇಲ್, ದಯಾನಂದ ಮಡಿವಾಳ, ಸಿಬ್ಬಂದಿ ಆರೀಫ್ ನವಿನ್‌, ಅನಿಲ, ಇರ್ಫಾನ್‌ ಗಂಗಾಧರ, ಪ್ರವೀಣ ಹಾಗೂ ಶ್ರೀನಿವಾಸ ಅವರನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿದೆ.
ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್‌ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು ಬಹುಮಾನ ವಿತರಿಸಿದರು.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

8 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

12 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

12 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

12 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

12 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

17 hours ago