Latest

ಕುಖ್ಯಾತ ಕಳ್ಳನ ಬಂದನ!!

ಬೀದರ್: ನಗರದ ಆದರ್ಶ ಹಾಗೂ ಜ್ಯೋತಿ ಕಾಲೊನಿಯಲ್ಲಿ ಸರಣಿ ಮನೆಗಳ್ಳತನ ಮಾಡಿದ್ದ ಕುಖ್ಯಾತ ಕಳ್ಳನನ್ನು ಬಂಧಿಸಿರುವ ಪೊಲೀಸರು ಆತನಿಂದ ₹ 10 ಲಕ್ಷ ಮೌಲ್ಯದ 20 ತೊಲಾ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ.
ಈತ ನಗರದಲ್ಲಿ ಒಟ್ಟು ಏಳು ಮನೆಗಳ ಬೀಗ ಒಡೆದಿದ್ದ. ನಾಲ್ಕು ಮನೆಗಳಲ್ಲಿ ಅವನಿಗೆ ಏನೂ ದೊರಕಿರಲಿಲ್ಲ. ರೈಲು ಹಳಿಯ ಪಕ್ಕದಲ್ಲಿರುವ ಆದರ್ಶ, ಜ್ಯೋತಿ ಕಾಲೊನಿಯಲ್ಲಿ ಇರುವ ಮೂರು ಮನೆಗಳಲ್ಲಿ ಕಳ್ಳತನ ಮಾಡಿದ್ದ. ರೈಲು ಹೋಗುವಾಗ ಹಾಗೂ ಬರುವಾಗ ಆಗುತ್ತಿದ್ದ ಸಪ್ಪಳದ ಸಂದರ್ಭದಲ್ಲಿ ವ್ಯವಸ್ಥಿತವಾಗಿ ಬೀಗ ಒಡೆಯುತ್ತಿದ್ದ. ಚಿಲಕಗಳಿಗೆ ಕೆಮಿಕಲ್‌ ಸ್ಪ್ರೆ ಮಾಡಿ ಶಬ್ದ ಬರದಂತೆ ಎಚ್ಚರ ವಹಿಸುತ್ತಿದ್ದ. ಕೆಲವು ಮನೆಗಳಲ್ಲಿ ಮನೆಯ ಮಾಲೀಕರು ಮನೆಯೊಳಗೆ ಮಲಗಿದ್ದಾಗಲೇ ಕಳ್ಳತನ ಮಾಡಿ ತನ್ನ ಕೈ ಚಳಕ ತೋರಿಸಿದ್ದ.
ಮುಖ್ಯ ಬಾಗಿಲಿನ ಚಿಲಕ ಮುರಿದು ಒಳಗೆ ಬಂದ ನಂತರ ತಾನು ಮರಳಿ ಓಡಿ ಹೋಗಲು ಒಂದು ಕೊಠಡಿಯ ಬಾಗಿಲನ್ನು ತೆರೆದಿಡುತ್ತಿದ್ದ, ಮನೆಯಲ್ಲಿನ ಬೆಡ್‌ರೂಮ್‌ಗಳಿಗೆ ಹೊರಗಿನಿಂದ ನಿಧಾನವಾಗಿ ಚಿಲಕ ಹಾಕುತ್ತಿದ್ದ. ಗಾಢ ನಿದ್ರೆಯಲ್ಲಿ ಇರುತ್ತಿದ್ದವರಿಗೆ ಕಳ್ಳತನ ಮಾಡಿ ಹೋಗಿರುವುದು ಗೊತ್ತೇ ಆಗುತ್ತಿರಲಿಲ್ಲ.
ಮಹಿಳೆಯರ ಸಹವಾಸ ಹಾಗೂ ಕುಡಿತದ ಚಟ ಹೊಂದಿರುವ ಆರೋಪಿ ಒಬ್ಬನೇ ಚಾಣಕ್ಷತನದಿಂದ ಕಳ್ಳನತ ಮಾಡುವುದನ್ನು ರೂಢಿಸಿಕೊಂಡಿದ್ದಾನೆ. ಇವನಿಗೆ ಸೊಲ್ಲಾಪುರದಲ್ಲಿ ಹೆಂಡತಿ, ಮಕ್ಕಳೂ ಇದ್ದಾರೆ. ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದಾನೆ. ಒಂದು ಕಡೆ ಕಳ್ಳತನ ಮಾಡಿ ಸಿಕ್ಕಿಬಿದ್ದ ಮೇಲೆ ಜಾಮೀನಿನ ಮೇಲೆ ಹೊರಗೆ ಬಂದ ನಂತರ ಮತ್ತೆ ಬೇರೆ ಕಡೆ ಕಳ್ಳನತ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
ರಾಯಚೂರು, ಗದಗ, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಬಾದಾಮಿ ಹಾಗೂ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಅಲ್ಲಿಯ ಪೊಲೀಸ್‌ ಠಾಣೆಗಳಲ್ಲಿ ಆರೋಪಿ ವಿರುದ್ಧ ಪ್ರಕರಣಗಳೂ ದಾಖಲಾಗಿವೆ.
ಗಾಂಧಿ ಗಂಜ್‌ನ ಪೊಲೀಸ್‌ ಇನ್‌ಸ್ಪೆಕ್ಟರ್ ಜಿ.ಎಸ್.ಬಿರಾದಾರ, ಬೀದರ್‌ ಗ್ರಾಮೀಣ ಸಿಪಿಐ ಶ್ರೀಕಾಂತ ಅಲ್ಲಾಪುರೆ, ಪಿಎಸ್‌ಐ ಸಯ್ಯದ್‌ ಪಟೇಲ್, ದಯಾನಂದ ಮಡಿವಾಳ, ಸಿಬ್ಬಂದಿ ಆರೀಫ್ ನವಿನ್‌, ಅನಿಲ, ಇರ್ಫಾನ್‌ ಗಂಗಾಧರ, ಪ್ರವೀಣ ಹಾಗೂ ಶ್ರೀನಿವಾಸ ಅವರನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿದೆ.
ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್‌ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು ಬಹುಮಾನ ವಿತರಿಸಿದರು.

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

3 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

3 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

3 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

3 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

3 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

8 hours ago