Latest

ಕುಖ್ಯಾತ ಕಳ್ಳನ ಬಂದನ!!

ಬೀದರ್: ನಗರದ ಆದರ್ಶ ಹಾಗೂ ಜ್ಯೋತಿ ಕಾಲೊನಿಯಲ್ಲಿ ಸರಣಿ ಮನೆಗಳ್ಳತನ ಮಾಡಿದ್ದ ಕುಖ್ಯಾತ ಕಳ್ಳನನ್ನು ಬಂಧಿಸಿರುವ ಪೊಲೀಸರು ಆತನಿಂದ ₹ 10 ಲಕ್ಷ ಮೌಲ್ಯದ 20 ತೊಲಾ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ.
ಈತ ನಗರದಲ್ಲಿ ಒಟ್ಟು ಏಳು ಮನೆಗಳ ಬೀಗ ಒಡೆದಿದ್ದ. ನಾಲ್ಕು ಮನೆಗಳಲ್ಲಿ ಅವನಿಗೆ ಏನೂ ದೊರಕಿರಲಿಲ್ಲ. ರೈಲು ಹಳಿಯ ಪಕ್ಕದಲ್ಲಿರುವ ಆದರ್ಶ, ಜ್ಯೋತಿ ಕಾಲೊನಿಯಲ್ಲಿ ಇರುವ ಮೂರು ಮನೆಗಳಲ್ಲಿ ಕಳ್ಳತನ ಮಾಡಿದ್ದ. ರೈಲು ಹೋಗುವಾಗ ಹಾಗೂ ಬರುವಾಗ ಆಗುತ್ತಿದ್ದ ಸಪ್ಪಳದ ಸಂದರ್ಭದಲ್ಲಿ ವ್ಯವಸ್ಥಿತವಾಗಿ ಬೀಗ ಒಡೆಯುತ್ತಿದ್ದ. ಚಿಲಕಗಳಿಗೆ ಕೆಮಿಕಲ್‌ ಸ್ಪ್ರೆ ಮಾಡಿ ಶಬ್ದ ಬರದಂತೆ ಎಚ್ಚರ ವಹಿಸುತ್ತಿದ್ದ. ಕೆಲವು ಮನೆಗಳಲ್ಲಿ ಮನೆಯ ಮಾಲೀಕರು ಮನೆಯೊಳಗೆ ಮಲಗಿದ್ದಾಗಲೇ ಕಳ್ಳತನ ಮಾಡಿ ತನ್ನ ಕೈ ಚಳಕ ತೋರಿಸಿದ್ದ.
ಮುಖ್ಯ ಬಾಗಿಲಿನ ಚಿಲಕ ಮುರಿದು ಒಳಗೆ ಬಂದ ನಂತರ ತಾನು ಮರಳಿ ಓಡಿ ಹೋಗಲು ಒಂದು ಕೊಠಡಿಯ ಬಾಗಿಲನ್ನು ತೆರೆದಿಡುತ್ತಿದ್ದ, ಮನೆಯಲ್ಲಿನ ಬೆಡ್‌ರೂಮ್‌ಗಳಿಗೆ ಹೊರಗಿನಿಂದ ನಿಧಾನವಾಗಿ ಚಿಲಕ ಹಾಕುತ್ತಿದ್ದ. ಗಾಢ ನಿದ್ರೆಯಲ್ಲಿ ಇರುತ್ತಿದ್ದವರಿಗೆ ಕಳ್ಳತನ ಮಾಡಿ ಹೋಗಿರುವುದು ಗೊತ್ತೇ ಆಗುತ್ತಿರಲಿಲ್ಲ.
ಮಹಿಳೆಯರ ಸಹವಾಸ ಹಾಗೂ ಕುಡಿತದ ಚಟ ಹೊಂದಿರುವ ಆರೋಪಿ ಒಬ್ಬನೇ ಚಾಣಕ್ಷತನದಿಂದ ಕಳ್ಳನತ ಮಾಡುವುದನ್ನು ರೂಢಿಸಿಕೊಂಡಿದ್ದಾನೆ. ಇವನಿಗೆ ಸೊಲ್ಲಾಪುರದಲ್ಲಿ ಹೆಂಡತಿ, ಮಕ್ಕಳೂ ಇದ್ದಾರೆ. ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದಾನೆ. ಒಂದು ಕಡೆ ಕಳ್ಳತನ ಮಾಡಿ ಸಿಕ್ಕಿಬಿದ್ದ ಮೇಲೆ ಜಾಮೀನಿನ ಮೇಲೆ ಹೊರಗೆ ಬಂದ ನಂತರ ಮತ್ತೆ ಬೇರೆ ಕಡೆ ಕಳ್ಳನತ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
ರಾಯಚೂರು, ಗದಗ, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಬಾದಾಮಿ ಹಾಗೂ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಅಲ್ಲಿಯ ಪೊಲೀಸ್‌ ಠಾಣೆಗಳಲ್ಲಿ ಆರೋಪಿ ವಿರುದ್ಧ ಪ್ರಕರಣಗಳೂ ದಾಖಲಾಗಿವೆ.
ಗಾಂಧಿ ಗಂಜ್‌ನ ಪೊಲೀಸ್‌ ಇನ್‌ಸ್ಪೆಕ್ಟರ್ ಜಿ.ಎಸ್.ಬಿರಾದಾರ, ಬೀದರ್‌ ಗ್ರಾಮೀಣ ಸಿಪಿಐ ಶ್ರೀಕಾಂತ ಅಲ್ಲಾಪುರೆ, ಪಿಎಸ್‌ಐ ಸಯ್ಯದ್‌ ಪಟೇಲ್, ದಯಾನಂದ ಮಡಿವಾಳ, ಸಿಬ್ಬಂದಿ ಆರೀಫ್ ನವಿನ್‌, ಅನಿಲ, ಇರ್ಫಾನ್‌ ಗಂಗಾಧರ, ಪ್ರವೀಣ ಹಾಗೂ ಶ್ರೀನಿವಾಸ ಅವರನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿದೆ.
ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್‌ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು ಬಹುಮಾನ ವಿತರಿಸಿದರು.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago