ಚಾಮರಾಜನಗರ ಜಿಲ್ಲೆಯ ಕುದುರೆ ಗ್ರಾಮದಿಂದ ದಸರಾ ಸಂದರ್ಭದಲ್ಲಿ ಫಲ ಪುಷ್ಪ ಪ್ರದರ್ಶನ ನೋಡಲು ಭಾನುಮತಿ ಎಂಬುವವರು ಕುಟುಂಬ ಸಮೇತರಾಗಿ ಬಂದಿರುತ್ತಾರೆ. ಫಲಪುಷ್ಪ ಪ್ರದರ್ಶನ ನೋಡಲು ಕಾರಿನಲ್ಲಿ ಬಂದಿದ್ದು ಕಾರನ್ನು ಆದಾಯ ತೆರಿಗೆ ಕಚೇರಿಯ ಮುಂಭಾಗದ ರಸ್ತೆಯಲ್ಲಿ ಪಾರ್ಕ್ ಮಾಡಿ ಹೋಗಿರುತ್ತಾರೆ. ಕಾರಿನ ಒಳಗಡೆ ವ್ಯಾನಿಟಿ ಬ್ಯಾಗ್ ನಲ್ಲಿ ಸುಮಾರು 163 ಗ್ರಾಂ ತೂಕದ ಚಿನ್ನಾಭರಣಗಳನ್ನು ಇಟ್ಟಿದ್ದು ಅದನ್ನು ಕಳ್ಳತನ ಮಾಡಲಾಗಿರುತ್ತದೆ.
ಈ ವಿಚಾರವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳನನ್ನು ಹುಡುಕಲು ಮುಂದಾಗಿರುತ್ತಾರೆ.
ದಿನಾಂಕ 19/11/2022 ರಂದು ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಆರೋಪಿ ಎಸ್ ಎನ್ ಕಿಶೋರ್ ಕುಮಾರ್ ನನ್ನ ಮೈಸೂರು ನಗರ ನಜರಾಬಾದ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ ಹಾಗೂ ಆತನ ಬಳಿ 163 ಗ್ರಾಂ ತೂಕದ ಚಿನ್ನಾಭರಣಗಳು ಸೇರಿ ಒಟ್ಟು 7 ಲಕ್ಷ ಬೆಳೆಬಾಳುವ ಮಾಲುಗಳನ್ನು ವಶಪಡಿಸಿಕೊಂಡಿರುತ್ತಾರೆ.
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…
ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…
ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…
ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…