ರಾಯಚೂರು, ಜು.25 – ಲಿಂಗಸುಗೂರು ತಾಲೂಕಿನ ದೇವರಭೂಪುರ ಗ್ರಾಮದ ಪ್ರಸಿದ್ಧ ಅಮರೇಶ್ವರ ದೇವಾಲಯದ ಪಕ್ಕದಲ್ಲಿರುವ ಉದ್ಯಾನವನದಲ್ಲಿ ಅಶ್ಲೀಲ ಚಟುವಟಿಕೆಗಳು ನಡೆಯುತ್ತಿದ್ದ ಆರೋಪಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ.
ಭಕ್ತರು ಹಾಗೂ ಪ್ರವಾಸಿಗರಿಗಾಗಿ ಸರ್ಕಾರಿ ಹಣದಿಂದ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿತ ಈ ಉದ್ಯಾನವನ, ಈಗ ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಉದ್ಯಾನವನವನ್ನು ಸಾರ್ವಜನಿಕರಿಗೆ ವಿಶ್ರಾಂತಿ ಸ್ಥಳವಾಗಿ ಬಳಸಲು ರೂಪಿಸಲಾಗಿತ್ತು. ಆದರೆ, ನಿರ್ವಹಣಾ ಕೊರತೆಯಿಂದ ಜಾಗ ಹಾಳಾಗಿ, ಅಪಪ್ರಯೋಗಕ್ಕೆ ಒಳಗಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ನಿರಂತರವಾಗಿ ವೇಶ್ಯಾವಾಟಿಕೆ ಮತ್ತು ಅಶ್ಲೀಲ ಕೃತ್ಯಗಳು ನಡೆಯುತ್ತಿದ್ದು, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಲಾಗಿದೆ.
ಹೊಂದಿಸಿದ ಮಾಹಿತಿಯಂತೆ, ಉದ್ಯಾನವನ ಪ್ರವೇಶಕ್ಕೆ ನಿಗದಿಪಡಿಸಿರುವ 10 ರೂ. ಪ್ರವೇಶ ದರದ ಬದಲಿಗೆ, ಹೊರಗುತ್ತಿಗೆ ನೌಕರರು ಹೆಚ್ಚು ಹಣ ಪಡೆದು ಅನೈತಿಕ ಚಟುವಟಿಗಳಿಗೆ ಅವಕಾಶ ನೀಡುತ್ತಿದ್ದಾರೆ ಎನ್ನಲಾಗಿದೆ.
ಭಕ್ತರ ಭಾವನೆಗೆ ಧಕ್ಕೆ ತರುವ ಈ ಘಟನೆಗಳಿಗೆ ತಕ್ಷಣ ಕಡಿವಾಣ ಹಾಕಬೇಕೆಂದು ಸಂಘಟನೆಯವರು ಒತ್ತಾಯಿಸಿದ್ದು, ಪಾರ್ಕ್ನಲ್ಲಿ ಸುಸಜ್ಜಿತ ಭದ್ರತಾ ವ್ಯವಸ್ಥೆ ಹಾಗೂ ನಿಗಾ ಸಾಧನೆಯ ಸ್ಥಾಪನೆಯ ಅವಶ್ಯಕತೆಯಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…