Latest

ದೇವಾಲಯ ಪಕ್ಕದ ಉದ್ಯಾನವನದಲ್ಲಿ ಅಶ್ಲೀಲ ಕೃತ್ಯ – ಸಾರ್ವಜನಿಕ ಆಕ್ರೋಶ

ರಾಯಚೂರು, ಜು.25 – ಲಿಂಗಸುಗೂರು ತಾಲೂಕಿನ ದೇವರಭೂಪುರ ಗ್ರಾಮದ ಪ್ರಸಿದ್ಧ ಅಮರೇಶ್ವರ ದೇವಾಲಯದ ಪಕ್ಕದಲ್ಲಿರುವ ಉದ್ಯಾನವನದಲ್ಲಿ ಅಶ್ಲೀಲ ಚಟುವಟಿಕೆಗಳು ನಡೆಯುತ್ತಿದ್ದ ಆರೋಪಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ.

ಭಕ್ತರು ಹಾಗೂ ಪ್ರವಾಸಿಗರಿಗಾಗಿ ಸರ್ಕಾರಿ ಹಣದಿಂದ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿತ ಈ ಉದ್ಯಾನವನ, ಈಗ ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಉದ್ಯಾನವನವನ್ನು ಸಾರ್ವಜನಿಕರಿಗೆ ವಿಶ್ರಾಂತಿ ಸ್ಥಳವಾಗಿ ಬಳಸಲು ರೂಪಿಸಲಾಗಿತ್ತು. ಆದರೆ, ನಿರ್ವಹಣಾ ಕೊರತೆಯಿಂದ ಜಾಗ ಹಾಳಾಗಿ, ಅಪಪ್ರಯೋಗಕ್ಕೆ ಒಳಗಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ನಿರಂತರವಾಗಿ ವೇಶ್ಯಾವಾಟಿಕೆ ಮತ್ತು ಅಶ್ಲೀಲ ಕೃತ್ಯಗಳು ನಡೆಯುತ್ತಿದ್ದು, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಲಾಗಿದೆ.

ಹೊಂದಿಸಿದ ಮಾಹಿತಿಯಂತೆ, ಉದ್ಯಾನವನ ಪ್ರವೇಶಕ್ಕೆ ನಿಗದಿಪಡಿಸಿರುವ 10 ರೂ. ಪ್ರವೇಶ ದರದ ಬದಲಿಗೆ, ಹೊರಗುತ್ತಿಗೆ ನೌಕರರು ಹೆಚ್ಚು ಹಣ ಪಡೆದು ಅನೈತಿಕ ಚಟುವಟಿಗಳಿಗೆ ಅವಕಾಶ ನೀಡುತ್ತಿದ್ದಾರೆ ಎನ್ನಲಾಗಿದೆ.

ಭಕ್ತರ ಭಾವನೆಗೆ ಧಕ್ಕೆ ತರುವ ಈ ಘಟನೆಗಳಿಗೆ ತಕ್ಷಣ ಕಡಿವಾಣ ಹಾಕಬೇಕೆಂದು ಸಂಘಟನೆಯವರು ಒತ್ತಾಯಿಸಿದ್ದು, ಪಾರ್ಕ್‌ನಲ್ಲಿ ಸುಸಜ್ಜಿತ ಭದ್ರತಾ ವ್ಯವಸ್ಥೆ ಹಾಗೂ ನಿಗಾ ಸಾಧನೆಯ ಸ್ಥಾಪನೆಯ ಅವಶ್ಯಕತೆಯಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago