ಬೆಂಗಳೂರು (ಆ.2): ನಟ ದರ್ಶನ್ ಸಂಬಂಧಿತ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಕುರಿತು ನ್ಯಾಯದ ಬೇಡಿಕೆ ಇಟ್ಟುಕೊಂಡಿದ್ದ ನಟಿ ಮತ್ತು ಮಾಜಿ ಸಂಸದ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್ಗಳನ್ನು ಮಾಡಿದ್ದ ಇಬ್ಬರು ಯುವಕರನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ರಮ್ಯಾ, ಚಿತ್ರದುರ್ಗದ ಯುವಕ ರೇಣುಕಾಸ್ವಾಮಿಯ ಹತ್ಯೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿದ್ದರು. ನಟ ದರ್ಶನ್ ಹಾಗೂ ಅವರ ಗೆಳತಿ ಪವಿತ್ರಾ ಗೌಡ ವಿರುದ್ಧ ಕಠಿಣ ಟೀಕೆ ಮಾಡಿದ್ದ ಅವರು, ಈ ಪ್ರಕರಣದಲ್ಲಿ ಸತ್ತ ಯುವಕನ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದರು.
ಇದಕ್ಕೆ ಪ್ರತಿಯಾಗಿ, ದರ್ಶನ್ ಅಭಿಮಾನಿಗಳಿಂದ ಹಿನ್ನಡೆಗಳು ಸಿಕ್ಕಿದ್ದು, ಸುಮಾರು 46 ಜನ ಸಾಮಾಜಿಕ ಜಾಲತಾಣದಲ್ಲಿ ರಮ್ಯಾಳ ವಿರುದ್ಧ ಅಶ್ಲೀಲ ಹಾಗೂ ಅವಮಾನಕರ ಕಾಮೆಂಟ್ಗಳನ್ನು ಮಾಡಿದ್ದಾರೆ. ಈ ಬಗ್ಗೆ ನಟಿ ರಮ್ಯಾ ಪೊಲೀಸರುಕೆ ಅಧಿಕೃತವಾಗಿ ದೂರು ನೀಡಿದ ಬೆನ್ನಲ್ಲೇ, ಸಿಸಿಬಿ ಸೈಬರ್ ಕ್ರೈಂ ವಿಭಾಗ ತನಿಖೆಗೆ ಮುಂದಾಗಿತ್ತು.
ತಕ್ಷಣದ ಕಾರ್ಯಾಚರಣೆಯಲ್ಲಿ, ಕೆಲಮಂದಿ ಆರೋಪಿಗಳು ತಮ್ಮ ಖಾತೆಗಳನ್ನು ಅಳಿಸಿಹಾಕಿದ್ದರೂ, ಸಿಸಿಬಿ ಅಧಿಕಾರಿಗಳು ಐಪಿ ವಿಳಾಸದ ಆಧಾರದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕ್ರಮದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಓರ್ವನು ಚಿಕ್ಕಬಳ್ಳಾಪುರ ಜಿಲ್ಲೆಯ 18 ವರ್ಷದ ಗಂಗಾಧರ್ ಮತ್ತು ಮತ್ತೊಬ್ಬನು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಮೂಲದ 25 ವರ್ಷದ ಓಬಣ್ಣ ಎಂಬತನದು.
ಸದ್ಯದಲ್ಲೇ ಉಳಿದ ಆರೋಪಿಗಳನ್ನೂ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ನಟಿ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತಕ್ಷಣಕ್ಕೆ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ನಡೆಯುತ್ತಿದ್ದು, ಇಂತಹ ಅಪಪ್ರಚಾರದ ವಿರುದ್ಧ ಹೋರಾಟ ಮಾಡುವ ಸಿಸಿಬಿಯ ಕ್ರಮಕ್ಕೆ ಸಧಾರಣ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…