ಬೆಂಗಳೂರು (ಆ.2): ನಟ ದರ್ಶನ್ ಸಂಬಂಧಿತ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಕುರಿತು ನ್ಯಾಯದ ಬೇಡಿಕೆ ಇಟ್ಟುಕೊಂಡಿದ್ದ ನಟಿ ಮತ್ತು ಮಾಜಿ ಸಂಸದ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್ಗಳನ್ನು ಮಾಡಿದ್ದ ಇಬ್ಬರು ಯುವಕರನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ರಮ್ಯಾ, ಚಿತ್ರದುರ್ಗದ ಯುವಕ ರೇಣುಕಾಸ್ವಾಮಿಯ ಹತ್ಯೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿದ್ದರು. ನಟ ದರ್ಶನ್ ಹಾಗೂ ಅವರ ಗೆಳತಿ ಪವಿತ್ರಾ ಗೌಡ ವಿರುದ್ಧ ಕಠಿಣ ಟೀಕೆ ಮಾಡಿದ್ದ ಅವರು, ಈ ಪ್ರಕರಣದಲ್ಲಿ ಸತ್ತ ಯುವಕನ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದರು.
ಇದಕ್ಕೆ ಪ್ರತಿಯಾಗಿ, ದರ್ಶನ್ ಅಭಿಮಾನಿಗಳಿಂದ ಹಿನ್ನಡೆಗಳು ಸಿಕ್ಕಿದ್ದು, ಸುಮಾರು 46 ಜನ ಸಾಮಾಜಿಕ ಜಾಲತಾಣದಲ್ಲಿ ರಮ್ಯಾಳ ವಿರುದ್ಧ ಅಶ್ಲೀಲ ಹಾಗೂ ಅವಮಾನಕರ ಕಾಮೆಂಟ್ಗಳನ್ನು ಮಾಡಿದ್ದಾರೆ. ಈ ಬಗ್ಗೆ ನಟಿ ರಮ್ಯಾ ಪೊಲೀಸರುಕೆ ಅಧಿಕೃತವಾಗಿ ದೂರು ನೀಡಿದ ಬೆನ್ನಲ್ಲೇ, ಸಿಸಿಬಿ ಸೈಬರ್ ಕ್ರೈಂ ವಿಭಾಗ ತನಿಖೆಗೆ ಮುಂದಾಗಿತ್ತು.
ತಕ್ಷಣದ ಕಾರ್ಯಾಚರಣೆಯಲ್ಲಿ, ಕೆಲಮಂದಿ ಆರೋಪಿಗಳು ತಮ್ಮ ಖಾತೆಗಳನ್ನು ಅಳಿಸಿಹಾಕಿದ್ದರೂ, ಸಿಸಿಬಿ ಅಧಿಕಾರಿಗಳು ಐಪಿ ವಿಳಾಸದ ಆಧಾರದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕ್ರಮದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಓರ್ವನು ಚಿಕ್ಕಬಳ್ಳಾಪುರ ಜಿಲ್ಲೆಯ 18 ವರ್ಷದ ಗಂಗಾಧರ್ ಮತ್ತು ಮತ್ತೊಬ್ಬನು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಮೂಲದ 25 ವರ್ಷದ ಓಬಣ್ಣ ಎಂಬತನದು.
ಸದ್ಯದಲ್ಲೇ ಉಳಿದ ಆರೋಪಿಗಳನ್ನೂ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ನಟಿ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತಕ್ಷಣಕ್ಕೆ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ನಡೆಯುತ್ತಿದ್ದು, ಇಂತಹ ಅಪಪ್ರಚಾರದ ವಿರುದ್ಧ ಹೋರಾಟ ಮಾಡುವ ಸಿಸಿಬಿಯ ಕ್ರಮಕ್ಕೆ ಸಧಾರಣ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…