Latest

ಸರ್ಕಾರಿ ಕೆಲಸಕ್ಕೆ ಅಡ್ಡಿ: ಆರೋಪಿಯ ಬಂಧನ

ರಾಮನಗರ: ಕುದುರು ಪೊಲೀಸ್ ಠಾಣಾ ವ್ಯಾಪ್ತಿಯ ಸೋಲೂರು ಗ್ರಾಮದ ಸರ್ವಿಸ್ ರಸ್ತೆಯಲ್ಲಿ, ದಿನಾಂಕ 21.03.2025ರಂದು ರಾತ್ರಿ ಇಬ್ಬರು ವ್ಯಕ್ತಿಗಳು ಜಗಳವಾಡುತ್ತಿದ್ದರು. ಈ ವೇಳೆ, ಹೆದ್ದಾರಿ ಗಸ್ತು ವಾಹನಕ್ಕೆ ನಿಯೋಜಿತ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಜಗಳ ನಿಯಂತ್ರಿಸಲು ಮುಂದಾದಾಗ, ಅವರಲ್ಲಿ ಒಬ್ಬನು ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ ಮಾತ್ರವಲ್ಲದೆ, ಅವರನ್ನು ಎಳೆದಾಡಿ, ಸರ್ಕಾರಿ ಕಾರ್ಯದಲ್ಲಿ ಅಡ್ಡಿಪಡಿಸಿದ್ದಾನೆ.

ಈ ಕುರಿತು ಪೊಲೀಸ್ ಸಿಬ್ಬಂದಿ ನೀಡಿದ ದೂರಿನ ಮೇರೆಗೆ, ಕುದುರು ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ (ಮೋ.ಸಂ: 91/2025) ದಾಖಲಿಸಲಾಗಿದೆ. ಪ್ರಕರಣವನ್ನು ಭಾರತೀಯ ದಂಡ ಸಂಹಿತೆಯ ಕಲಂ 132, 35(2), 352 ಅಡಿಯಲ್ಲಿ ದಾಖಲಿಸಿಕೊಂಡು, ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ದಿನಾಂಕ 23.03.2025 ರಂದು ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

14 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

14 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

14 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

14 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

14 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

14 hours ago