ಹಳೇಬೀಡು ಹೋಬಳಿಯ ಯಲಹಂಕ ಗ್ರಾಮದಲ್ಲಿ ದೀರ್ಘ ಕಾಲದಿಂದ ಕಲ್ಲುಗಣಿಗಾರಿಕೆಯಲ್ಲಿ ತೊಡಗಿದ್ದ ಚಂದ್ರು ಎಂಬವರು, ತಮ್ಮ ಕಾನೂನುಬದ್ಧ ಗಣಿ ಚಟುವಟಿಕೆಗೆ ಕೆಲವರು ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಸೋಮವಾರ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, “ನಾವು ಪಾರಂಪರಿಕವಾಗಿ ಕಲ್ಲುಗಣಿಗಾರಿಕೆ ಮಾಡುತ್ತಿದ್ದವರೆ. ಯಲಹಂಕ ಗ್ರಾಮದ ಸರ್ವೆ ನಂ.80ರಲ್ಲಿ ಕೆಲವು ವರ್ಷಗಳಿಂದ ಪಕ್ಕದ ಜಮೀನಿನ ಮಾಲೀಕರೊಬ್ಬರಿಗೆ ತಿಂಗಳಿಗೆ ₹7 ಸಾವಿರ ನೀಡುತ್ತಾ ಅಕ್ರಮವಾಗಿ ಗಣಿಕಾರಿಕೆ ಮಾಡುತ್ತಾ ಬಂದಿದ್ದೆವು. ಈಗ ಸರ್ಕಾರ ಈ ಜಾಗದಲ್ಲಿ ಅಧಿಕೃತ ಗಣಿಕಾರಿಕೆಗೆ ಅವಕಾಶ ನೀಡುತ್ತಿರುವ ಹಿನ್ನೆಲೆಯಲ್ಲಿ ನಾವು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಅರ್ಜಿ ಸಲ್ಲಿಸಿದ್ದೇವೆ. 2 ಎಕರೆ ಜಮೀನಿನಲ್ಲಿ ಕಾನೂನಿಗೆ ಅನುಗುಣವಾಗಿ ಕೆಲಸ ಮಾಡಬೇಕೆಂಬ ಉದ್ದೇಶವಿದೆ” ಎಂದು ಹೇಳಿದರು.
ಆದರೆ ಈ ಹಿಂದೆ ಹಣ ಪಡೆದು ಅನುಮತಿಸಿದ್ದ ವ್ಯಕ್ತಿಯೇ ಈಗ ಜಮೀನಿನ ಮೇಲೆ ಹಕ್ಕು ಹುರಿತೊರೆಸಿ ಗಣಿ ಮಂಜೂರಿಗೆ ಅಡ್ಡಿಯಾಗುತ್ತಿದ್ದಾರೆ. “ಈ ತೊಂದರೆಯಿಂದಾಗಿ ಭೋವಿ ಜನಾಂಗದ ನಾವು ಬದುಕು ಸಾಗಿಸಲು ಕಷ್ಟಕ್ಕೆ ಗುರಿಯಾಗುತ್ತಿದ್ದೇವೆ. ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯದಲ್ಲಿ ನಮ್ಮಗೆ ನ್ಯಾಯ ಒದಗಿಸಬೇಕು” ಎಂದು ಅವರು ಮನವಿ ಮಾಡಿದರು.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…